Namma Metro: ಬಿಡದಿಗೆ ಮೆಟ್ರೋ ವಿಸ್ತರಣೆ- ಮಹತ್ವದ ಮಾಹಿತಿ, ವಿವರ ತಿಳಿಯಿರಿ
ಬೆಂಗಳೂರು, ನವೆಂಬರ್ 10: ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ಇನ್ನು ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತಿಸಲು ಆದೇಶ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೋ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಹೀಗಾಗಿ ಬಿಎಂಆರ್ಸಿಎಲ್ ಅವರಿಗೆ ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ.

ಬಿಡದಿ ಯೋಜನಾ ಪ್ರಾಧಿಕಾರವನ್ನು ತೆಗೆದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮಾಡುತ್ತೇವೆ. ಬಿಡದಿಯಲ್ಲಿ ಸುಮಾರು 10,000 ಎಕರೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು, ಯಾವುದೇ ಉದ್ದೇಶಕ್ಕೆ ಬಳಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗದಲ್ಲೂ ಸಿಗಬೇಕು ಎನ್ನುವ ಉದ್ದೇಶ ನಮ್ಮದು. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ಈ ಎರಡು ಯೋಜನೆಗಳನ್ನು ಈ ಶುಭದಿನದಂದು ಘೋಷಿಸುತ್ತೇನೆ. ಈ ಯೋಜನೆಗಳ ಮೂಲಕ ಈ ಭಾಗ ಅಭಿವೃದ್ಧಿ ಆಗಬೇಕು, ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಬೇಕು.
ಈ ಭಾಗದ ಆಸ್ಪತ್ರೆ, ವಿದ್ಯಾಸಂಸ್ಥೆಗಳು, ಕಾರ್ಮಿಕರು, ಅವರ ಮಕ್ಕಳು ಹೀಗೆ ಎಲ್ಲರಿಗೂ ಹೊಸ ಶಕ್ತಿ ತುಂಬಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಟೊಯೋಟಾ ಸಂಸ್ಥೆ ಹೆಣ್ಣುಮಕ್ಕಳ ತರಬೇತಿ ಕೇಂದ್ರ ತೆರೆದಿರುವುದು ಸಂತೋಷದ ವಿಚಾರ. ಮಹಿಳೆಯರಿಗೆ ಶಕ್ತಿ ತುಂಬುವುದು ನಮ್ಮ ಸರ್ಕಾರದ ಸಂಕಲ್ಪ.
ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣ ಮಾಡಿದ ಪರಿಣಾಮ ಮೈಸೂರು ದಸರಾ ಆಚರಣೆ ವೇಳೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದರಿಂದ ಪ್ರವಾಸೋದ್ಯಮ, ವ್ಯಾಪಾರ ವಹಿವಾಟು ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಮಹಿಳೆಯರಿಗೆ ರಾಜಕೀಯದಲ್ಲೂ ಶೇ.33ರಷ್ಟು ಮೀಸಲಾತಿ ಜಾರಿಗೆ ತಂದು ಈ ಭಾಗದಲ್ಲಿ ಮಹಿಳಾ ಪ್ರತಿನಿಧಿಗಳು ಆಯ್ಕೆಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.
ನನಗೂ ಟೊಯೋಟಾ ಸಂಸ್ಥೆಗೂ ಹಳೇ ಸಂಬಂಧ. ಮನೋರಮ ಮದ್ವರಾಜ್ ಅವರು ಆರಂಭ ಮಾಡಿದರು. ಸಾತನೂರಲ್ಲಿ ಆರಂಭ ಆಗಬೇಕಿತ್ತು. ರೈತರ ವಿರೋಧ ಹಿನ್ನೆಲೆಯಲ್ಲಿ ಬಿಡದಿಯಲ್ಲಿ ಸಂಸ್ಥೆ ಆರಂಭವಾಯಿತು. ಟೊಯೋಟಾ ದೇಶಕ್ಕೆ ಆಸ್ತಿ, ಈ ಸಂಸ್ಥೆ, ಅದರ ಸಿಬ್ಬಂದಿ, ಅದರ ವಾಹನಗಳ ಮೇಲೆ ನಮಗೆ ಅಪಾರ ನಂಬಿಕೆ ಇದೆ. ಟೊಯೋಟಾ ಸಂಸ್ಥೆ ಜತೆಗೆ ನಾನಿದ್ದೇನೆ, ನಮ್ಮ ಸರ್ಕಾರವೂ ಇದೆ. ನಾನು ಟೊಯೋಟಾ ಕುಟುಂಬದ ಸದಸ್ಯ. ನಿಮ್ಮ ಜತೆ ನಾನಿದ್ದೇನೆ ಎಂದು ಹೇಳಿದರು.
ಈ ಸಂಸ್ಥೆ ರಾಮನಗರ ಜಿಲ್ಲೆಯ ಸಾಕಷ್ಟು ಜನರಿಗೆ ಕೆಲಸ ಕೊಟ್ಟಿದೆ. ಆದರೆ ಯೂನಿಯನ್ ಚಟುವಟಿಕೆ ಮೂಲಕ ಕೆಲವರು ಗೊಂದಲ ಮೂಡಿಸಿದ್ದರು. ಯಾವುದೇ ಚಟುವಟಿಕೆ ಅಭಿವೃದ್ಧಿಗೆ ಮಾರಕ ಆಗಬಾರದು. ಒಂದು ಸಂಸ್ಥೆ ಆರಂಭಿಸಿ, ಬಂಡವಾಳ ಹೂಡಿಕೆ ಮಾಡಬೇಕಾದರೆ ಅನೇಕ ಸರ್ಕಾರದ ಕಾನೂನು ಮುಂದಿಟ್ಟುಕೊಂಡು ಯೂನಿಯನ್ಗಳು ಅಡ್ಡಿ ಬರುತ್ತವೆ. ಇದರಿಂದ ಅಭಿವೃದ್ಧಿಗೆ ಮಾರಕವಾಗುತ್ತದೆ. ನೆರೆಯ ಕೇರಳದಲ್ಲಿ ಯೂನಿಯನ್ ಗಳು ಹೆಚ್ಚಾದ ಪರಿಣಾಮ ಅಲ್ಲಿ ಹೆಚ್ಚಿನ ಬುದ್ಧಿವಂತರು ಇದ್ದರೂ ಯಾರೂ ಬಂಡವಾಳ ಹೂಡಿಕೆ ಮಾಡಲು ಮುಂದಾಗುವುದಿಲ್ಲ. ನಮ್ಮ ರಾಜ್ಯದಲ್ಲಿ ಬಂಡವಾಳ ವಿಸ್ತರಣೆ ಮಾಡಿ ಹಚ್ಚಿನ ಜನರಿಗೆ ಕೆಲಸ ನೀಡಲು ಟೊಯೋಟಾ ಸಂಸ್ಥೆ ಮುಂದಾಗಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications