Namma Metro: ಬಿಡದಿಗೆ ಮೆಟ್ರೋ ವಿಸ್ತರಣೆ- ಮಹತ್ವದ ಮಾಹಿತಿ, ವಿವರ ತಿಳಿಯಿರಿ
ಬೆಂಗಳೂರು, ನವೆಂಬರ್ 10: ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ಇನ್ನು ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತಿಸಲು ಆದೇಶ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೋ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಹೀಗಾಗಿ ಬಿಎಂಆರ್ಸಿಎಲ್ ಅವರಿಗೆ ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ.

ಬಿಡದಿ ಯೋಜನಾ ಪ್ರಾಧಿಕಾರವನ್ನು ತೆಗೆದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮಾಡುತ್ತೇವೆ. ಬಿಡದಿಯಲ್ಲಿ ಸುಮಾರು 10,000 ಎಕರೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು, ಯಾವುದೇ ಉದ್ದೇಶಕ್ಕೆ ಬಳಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗದಲ್ಲೂ ಸಿಗಬೇಕು ಎನ್ನುವ ಉದ್ದೇಶ ನಮ್ಮದು. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ಈ ಎರಡು ಯೋಜನೆಗಳನ್ನು ಈ ಶುಭದಿನದಂದು ಘೋಷಿಸುತ್ತೇನೆ. ಈ ಯೋಜನೆಗಳ ಮೂಲಕ ಈ ಭಾಗ ಅಭಿವೃದ್ಧಿ ಆಗಬೇಕು, ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಬೇಕು.
ಈ ಭಾಗದ ಆಸ್ಪತ್ರೆ, ವಿದ್ಯಾಸಂಸ್ಥೆಗಳು, ಕಾರ್ಮಿಕರು, ಅವರ ಮಕ್ಕಳು ಹೀಗೆ ಎಲ್ಲರಿಗೂ ಹೊಸ ಶಕ್ತಿ ತುಂಬಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಟೊಯೋಟಾ ಸಂಸ್ಥೆ ಹೆಣ್ಣುಮಕ್ಕಳ ತರಬೇತಿ ಕೇಂದ್ರ ತೆರೆದಿರುವುದು ಸಂತೋಷದ ವಿಚಾರ. ಮಹಿಳೆಯರಿಗೆ ಶಕ್ತಿ ತುಂಬುವುದು ನಮ್ಮ ಸರ್ಕಾರದ ಸಂಕಲ್ಪ.
ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣ ಮಾಡಿದ ಪರಿಣಾಮ ಮೈಸೂರು ದಸರಾ ಆಚರಣೆ ವೇಳೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದರಿಂದ ಪ್ರವಾಸೋದ್ಯಮ, ವ್ಯಾಪಾರ ವಹಿವಾಟು ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಮಹಿಳೆಯರಿಗೆ ರಾಜಕೀಯದಲ್ಲೂ ಶೇ.33ರಷ್ಟು ಮೀಸಲಾತಿ ಜಾರಿಗೆ ತಂದು ಈ ಭಾಗದಲ್ಲಿ ಮಹಿಳಾ ಪ್ರತಿನಿಧಿಗಳು ಆಯ್ಕೆಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.
ನನಗೂ ಟೊಯೋಟಾ ಸಂಸ್ಥೆಗೂ ಹಳೇ ಸಂಬಂಧ. ಮನೋರಮ ಮದ್ವರಾಜ್ ಅವರು ಆರಂಭ ಮಾಡಿದರು. ಸಾತನೂರಲ್ಲಿ ಆರಂಭ ಆಗಬೇಕಿತ್ತು. ರೈತರ ವಿರೋಧ ಹಿನ್ನೆಲೆಯಲ್ಲಿ ಬಿಡದಿಯಲ್ಲಿ ಸಂಸ್ಥೆ ಆರಂಭವಾಯಿತು. ಟೊಯೋಟಾ ದೇಶಕ್ಕೆ ಆಸ್ತಿ, ಈ ಸಂಸ್ಥೆ, ಅದರ ಸಿಬ್ಬಂದಿ, ಅದರ ವಾಹನಗಳ ಮೇಲೆ ನಮಗೆ ಅಪಾರ ನಂಬಿಕೆ ಇದೆ. ಟೊಯೋಟಾ ಸಂಸ್ಥೆ ಜತೆಗೆ ನಾನಿದ್ದೇನೆ, ನಮ್ಮ ಸರ್ಕಾರವೂ ಇದೆ. ನಾನು ಟೊಯೋಟಾ ಕುಟುಂಬದ ಸದಸ್ಯ. ನಿಮ್ಮ ಜತೆ ನಾನಿದ್ದೇನೆ ಎಂದು ಹೇಳಿದರು.
ಈ ಸಂಸ್ಥೆ ರಾಮನಗರ ಜಿಲ್ಲೆಯ ಸಾಕಷ್ಟು ಜನರಿಗೆ ಕೆಲಸ ಕೊಟ್ಟಿದೆ. ಆದರೆ ಯೂನಿಯನ್ ಚಟುವಟಿಕೆ ಮೂಲಕ ಕೆಲವರು ಗೊಂದಲ ಮೂಡಿಸಿದ್ದರು. ಯಾವುದೇ ಚಟುವಟಿಕೆ ಅಭಿವೃದ್ಧಿಗೆ ಮಾರಕ ಆಗಬಾರದು. ಒಂದು ಸಂಸ್ಥೆ ಆರಂಭಿಸಿ, ಬಂಡವಾಳ ಹೂಡಿಕೆ ಮಾಡಬೇಕಾದರೆ ಅನೇಕ ಸರ್ಕಾರದ ಕಾನೂನು ಮುಂದಿಟ್ಟುಕೊಂಡು ಯೂನಿಯನ್ಗಳು ಅಡ್ಡಿ ಬರುತ್ತವೆ. ಇದರಿಂದ ಅಭಿವೃದ್ಧಿಗೆ ಮಾರಕವಾಗುತ್ತದೆ. ನೆರೆಯ ಕೇರಳದಲ್ಲಿ ಯೂನಿಯನ್ ಗಳು ಹೆಚ್ಚಾದ ಪರಿಣಾಮ ಅಲ್ಲಿ ಹೆಚ್ಚಿನ ಬುದ್ಧಿವಂತರು ಇದ್ದರೂ ಯಾರೂ ಬಂಡವಾಳ ಹೂಡಿಕೆ ಮಾಡಲು ಮುಂದಾಗುವುದಿಲ್ಲ. ನಮ್ಮ ರಾಜ್ಯದಲ್ಲಿ ಬಂಡವಾಳ ವಿಸ್ತರಣೆ ಮಾಡಿ ಹಚ್ಚಿನ ಜನರಿಗೆ ಕೆಲಸ ನೀಡಲು ಟೊಯೋಟಾ ಸಂಸ್ಥೆ ಮುಂದಾಗಿದೆ.
-
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ











Click it and Unblock the Notifications