ಐಎಎಸ್, ಕೆಎಎಸ್ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸಬೇಕು
ಬೆಂಗಳೂರು, ಜು. 9 : ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಆಸ್ತಿ ವಿವರ ಸಲ್ಲಿಸದ 6 ಅಧಿಕಾರಿಗಳ ವಿರುದ್ಧ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ನಿಯಮದಂತೆ ಐಎಎಸ್, ಐಪಿಎಸ್ ಮತ್ತು ಕೆಎಎಸ್ ಅಧಿಕಾರಿಗಳು ಸಕಾಲಕ್ಕೆ ಆಸ್ತಿ ವಿವರ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

61 ಐಎಎಸ್ ದರ್ಜೆಯ ಅಧಿಕಾರಿಗಳು ಮತ್ತು 184 ಕೆಎಎಸ್ ಅಧಿಕಾರಿಗಳು ಇನ್ನು ಆಸ್ತಿ ವಿವರ ಸಲ್ಲಿಸಿಲ್ಲ. ಈಗಾಗಲೇ ಈ ಕುರಿತು ನೋಟಿಸ್ ಜಾರಿಗೊಳಿಸಲಾಗಿದೆ. 6 ಕೆಎಎಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಸದನಕ್ಕೆ ಮಾಹಿತಿ ನೀಡಿದರು. [ಸಂಪಾದಕರು ಆಸ್ತಿ ಘೋಷಿಸಲಿ: ರೋಷನ್ ಬೇಗ್]
ನಾವು ಸಲ್ಲಿಸುವುದಿಲ್ಲವೆ? : ಸಿದ್ದರಾಮಯ್ಯ ಮಾತಿಗೆ ಧ್ವನಿಗೂಡಿಸಿದ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರು, ಶಾಸಕರು ಪ್ರತಿವರ್ಷ ಸರಿಯಾದ ಸಮಯಕ್ಕೆ ಲೋಕಾಯುಕ್ತರಿಗೆ ಆಸ್ತಿ ವಿವರ ಸಲ್ಲಿಸುತ್ತಾರೆ. ಆದರೆ, ಅಧಿಕಾರಿಗಳು ಮಾತ್ರ ಯಾವಾಗ ಬೇಕಾದರೂ ಸಲ್ಲಿಸಬಹುದೇ? ಅದಕ್ಕೆ ಯಾವುದೇ ಕಾಲಮಿತಿ ಇಲ್ಲವೇ? ಎಂದು ಪ್ರಶ್ನಸಿದರು.
ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾರೇ ಆಗಲಿ ಬಿಡುವ ಪ್ರಶ್ನೆಯೇ ಇಲ್ಲ. ಸಾರ್ವಜನಿಕ ಜೀವನದಲ್ಲಿರುವ ನಾವು ಅಧಿಕಾರಿಗಳಿಗಿಂತ ಹೆಚ್ಚು ಜವಾಬ್ದಾರರು. ಅಧಿಕಾರಿಗಳು ಇದಕ್ಕೆ ಹೊರತಾಗಿಲ್ಲ ಸರಿಯಾದ ಸಮಯಕ್ಕೆ ಆಸ್ತಿ ವಿವರ ಸಲ್ಲಿಸದಿದ್ದರೆ, ಕ್ರಮ ಅನಿವಾರ್ಯ ಎಂದರು.
ದೊಡ್ಡ ಸುದ್ದಿ ಮಾಡ್ತಾರೆ : ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಗೋವಿಂದ ಎಂ ಕಾರಜೋಳ, ಶಾಸಕರು ಆಸ್ತಿ ವಿವರ ಸಲ್ಲಿಸದಿದ್ದರೆ ದೊಡ್ಡ ಸುದ್ದಿಯಾಗುತ್ತದೆ. ಅಧಿಕಾರಿಗಳು ಸಲ್ಲಿಸದಿದ್ದರೆ ಯಾರೂ ಕೇಳುವುದಿಲ್ಲ ಎಂದು ಹೇಳಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications