ಮನೆಯಿಂದಲೇ ಪಿಂಚಣಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯಿರಿ
ಬೆಂಗಳೂರು, ಅಕ್ಟೋಬರ್ 25: ಪಿಂಚಣಿದಾರರು ವರ್ಷಕ್ಕೊಮ್ಮೆ ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಅಕ್ಟೋಬರ್ 1 ರಿಂದ ನವೆಂಬರ್ 30, 2023ರವರೆಗೆ ಈ ವರ್ಷದಲ್ಲಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡಲು ಸಮಯವನ್ನು ನಿಗದಿ ಮಾಡಲಾಗಿದೆ.
ಖಜಾನೆ ಆಯುಕ್ತರು, ಬೆಂಗಳೂರು ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆ ಪಿಂಚಣಿದಾರರಿಗೆ ಬೆರಳಚ್ಚು ಆಧರಿತ ಡಿಜಿಟಲ್ ಜೀವನ ಪ್ರಮಾಣ ಪತ್ರದ ಸೌಲಭ್ಯದ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೊಂದಿಗಿನ ದಿನಾಂಕ 29/11/2022ರ ಒಪ್ಪಂದವನ್ನು ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯ ವಿವರಗಳು; ಪಿಂಚಣಿದಾರರು ವಾರ್ಷಿಕ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಲು ಸಾಧ್ಯವಾಗುವಂತೆ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ನವರು, ಬೆರಳಚ್ಚು ಆಧಾರಿತ ಡಿಜಿಟಲ್ ಜೀವನ ಪ್ರಮಾಣ ಪತ್ರದ ಸೌಲಭ್ಯವನ್ನು 70 ರೂ. ಶುಲ್ಕದೊಂದಿಗೆ, ಪಿಂಚಣಿದಾರರ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಮನೆ ಬಾಗಿಲಲ್ಲಿ ಲಭ್ಯಗೊಳಿಸುತ್ತಿದ್ದು ಈ ಕುರಿತು ಖಜಾನೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಡುವೆ ಒಪ್ಪಂದವೊಂದು (MoU) ಸಹಿಯಾಗಿರುತ್ತದೆ ಎಂದು ಹೇಳಿದೆ.
ಮೇಲ್ಕಂಡ ಒಪ್ಪಂದದಲ್ಲಿ ಅವಕಾಶವಿರುವಂತೆ, ಈ ಸೌಲಭ್ಯದ ಕುರಿತು ವ್ಯಾಪಕ ಪ್ರಚಾರ ನೀಡಲು, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ರವರು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಭಿತ್ತಿಪತ್ರಗಳನ್ನು (Posters) ಬಿಡುಗಡೆ ಮಾಡಿದ್ದು, ಅವುಗಳನ್ನು ರಾಜ್ಯದ ಖಜಾನೆಗಳಲ್ಲಿ ಪ್ರದರ್ಶಿಸಲು ಅನುಮತಿ ಕೋರಿರುವ ಮೇರೆಗೆ, ಖಜಾನೆ ಆಯುಕ್ತಾಲಯದಿಂದ ಅನುಮತಿ ನೀಡಲಾಗಿದೆ.
ಆದುದರಿಂದ, ಸದರಿ ಭಿತ್ತಿಪತ್ರಗಳನ್ನು ಖಜಾನೆಗಳ ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸಲು (ಅಂಟಿಸಲು) ಕ್ರಮ ವಹಿಸುವಂತೆ ಸೂಚಿಸಿದೆ. ಈ ಸುತ್ತೋಲೆಯನ್ನು ರಾಜ್ಯದ ಎಲ್ಲಾ ಖಜಾನೆಗಳ ಪ್ರಭಾರಾಧಿಕಾರಿಗಳಿಗೆ, ಅಪರ ಮುಖ್ಯಕಾರ್ಯದರ್ಶಿಗಳು, ಆರ್ಥಿಕ ಇಲಾಖೆ,ಬೆಂಗಳೂರು ರವರ ಮಾಹಿತಿಗಾಗಿ ಸಲ್ಲಿಸಿದೆ.
ಅಂಚೆ ಮೂಲಕ ಜೀವನ ಪ್ರಮಾಣ ಪತ್ರ; ಈ ಒಪ್ಪಂದದ ಅನ್ವಯ ಬೆರಳಚ್ಚು ಆಧಾರಿತ ಡಿಜಿಟಲ್ ಜೀವನ ಪಮಾಣ ಪತ್ರ ಪಿಂಚಣಿದಾರರಿಗೆ ನೀಡಲಾಗುತ್ತಿದೆ. ಕೇವಲ ಆಧಾರ್ ಧೃಢೀಕರಣದೊಂದಿಗೆ ಸಂಪೂರ್ಣ ಕಾಗದ ರಹಿತ ಡಿಜಿಟಲ್ ಜೀವನ ಪುಮಾಣ ಪತ್ರ ಮಾಡಿಕೊಡಲಾಗುತ್ತದೆ. ಪೋಸ್ಟ್ ಮ್ಯಾನ್ ಅಥವಾ ಹತ್ತಿರದ ಅಂಚೆ ಕಛೇರಿಯ ಮೂಲಕ ನಿಮ್ಮ ಮನೆ ಬಾಗಿಲಿನಲ್ಲೇ ಡಿಜಿಟಲ್ ಜೀವನ ಪ್ರಮಾಣ ಪತ್ರದ ತ್ವರಿತ ವಿತರಣೆ ಮಾಡಲಾಗುತ್ತದೆ.
ಜೀವನ ಪ್ರಮಾಣ ಪತ್ರಕ್ಕಾಗಿ ಪಿಂಚಿಣಿ ಇಲಾಖೆ ಅಥವಾ ಬ್ಯಾಂಕ್ಗಳಿಗೆ ಹೋಗುವ ಅಗತ್ಯವಿಲ್ಲ. ಡಿಜಿಟಲ್ ಜೀವನ ಪ್ರಮಾಣಪತ್ರದ ವಿವರಗಳನ್ನು ನೇರವಾಗಿ ಪಿಂಚಣಿ ಇಲಾಖೆಯೊಂದಿಗೆ ನವೀಕರಿಸಲಾಗುವುದು. ಈ ಸೇವೆಗಾಗಿ ರೂ. 70ರ ಶುಲ್ಕವನ್ನು ಪಾವತಿ ಮಾಡಬೇಕಿದೆ (ತೆರಿಗೆ ಸಹಿತ).
ಡಿಜಿಟಲ್ ಜೀವನ ಪ್ರಮಾಣಪತ್ರ ಈಗ ನಿಮ್ಮ ಹತ್ತಿರದ ಅಂಚೆ ಕಛೇರಿ ಅಥವಾ ಮನೆ ಬಾಗಿಲಲ್ಲಿ ಲಭ್ಯವಿದೆ. ಮನೆ ಬಾಗಿಲಿನ ಸೇವೆಯನ್ನು ಪಡೆಯಲು ಮನೆ ಬಾಗಿಲಿನ ಸೇವೆಗಾಗಿ ಪೋಸ್ಟ್ ಮ್ಯಾನ್/ ಗ್ರಾಮೀಣ ಅಂಚೆ ಸೇವಕರನ್ನು ಸಂಪರ್ಕಿಸಿ ಅಥವಾ ಪೋಸ್ಟ್ ಇನ್ಪೋ ಅಪ್ಲಿಕೇಶನ್ನಲ್ಲಿ ವಿನಂತಿಯನ್ನು ಸಲ್ಲಿಸಬಹುದಾಗಿದೆ.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Government Employees: 8ನೇ ವೇತನ ಆಯೋಗದಡಿ ನೌಕರರ ಮೂಲ ವೇತನ 46,000 ರೂ.ಗೆ ಹೆಚ್ಚಳ? ಸಂಭವ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications