ಕೊಪ್ಪಳದ ಸುದ್ದಿ ಬೇಕೆ? ಫೇಸ್ಬುಕ್, ಬ್ಲಾಗ್ ನೋಡಿ
ಕೊಪ್ಪಳ, ಜೂ. 18 : ಕೊಪ್ಪಳ ಜಿಲ್ಲಾಡಳಿತ ಆನ್ ಲೈನ್ ಮೂಲಕ ವಿವಿಧ ಸಭೆ, ಸಮಾರಂಭಗಳು, ಇಲಾಖೆಯ ಪ್ರಕಟಣೆಗಳು, ಸುದ್ದಿಗಳನ್ನು ನೀಡಲು ಮುಂದಾಗಿದೆ. ಕೊಪ್ಪಳ ವಾರ್ತಾ ಇಲಾಖೆಯ ಫೇಸ್ ಬುಕ್ ಪುಟ ಹಾಗೂ ಬ್ಲಾಗ್ ಮೂಲಕ ಸಾರ್ವಜನಿಕರಿಗೂ ಪ್ರತಿಯೊಂದು ಮಾಹಿತಿಯನ್ನು ನೀಡಲಾಗುತ್ತದೆ.
ಇತ್ತೀಚೆಗೆ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ಟ್ವೀಟರ್, ಬ್ಲಾಗ್ ಗಳನ್ನು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಳಸುತ್ತಿದ್ದಾರೆ. ಕಂಪ್ಯೂಟರ್, ಮೊಬೈಲ್ ಮೂಲಕ ಮಾಹಿತಿಗಳನ್ನು ಪಡೆಯಬಹುದಾಗಿದೆ. ಆದ್ದರಿಂದ ಕೊಪ್ಪಳ ವಾರ್ತಾ ಇಲಾಖೆ ಜನರಿಗೆ ಮಾಹಿತಿಯನ್ನು ಈ ವ್ಯವಸ್ಥೆ ಮೂಲಕ ನೀಡಲು ಮುಂದಾಗಿದೆ.

ಕೊಪ್ಪಳ ವಾರ್ತಾ ಇಲಾಖೆಯಿಂದ ಬಿಡುಗಡೆ ಮಾಡಲಾಗುತ್ತಿದ್ದ ಸುದ್ದಿಗಳು, ಇದುವರೆಗೂ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದವು. ಇವು ಕೆಲವು ಭಾಗಗಳಿಗೆ ಮಾತ್ರ ಸೀಮಿತವಾಗುತ್ತಿತ್ತು. ಆದ್ದರಿಂದ ಫೇಸ್ ಬುಕ್ ಮತ್ತು ಬ್ಲಾಗ್ ಗಳ ಮೂಲಕ ಮಾಹಿತಿ ನೀಡಲು ನಿರ್ಧರಿಸಲಾಗಿದೆ. [ಕೊಪ್ಪಳ ವಾರ್ತೆ ಫೇಸ್ ಬುಕ್ ಪುಟ]
ಇದೀಗ ಕೊಪ್ಪಳ ವಾರ್ತಾ ಇಲಾಖೆಯು ವಾರ್ತೆ ಕೊಪ್ಪಳ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದಿದೆ. ಹಾಗೂ ಬ್ಲಾಗ್ ಅನ್ನು ಆರಂಭಿಸಿದೆ. ಫೇಸ್ ಬುಕ್ ಖಾತೆ ಪ್ರಾರಂಭವಾದ ಕೇವಲ ಒಂದು ವಾರದಲ್ಲಿಯೇ ಸುಮಾರು 350ಕ್ಕೂ ಹೆಚ್ಚು ಜನರು ಈ ಖಾತೆಗೆ ಸೇರ್ಪಡೆಗೊಂಡಿದ್ದಾರೆ. [ವಾರ್ತಾ ಇಲಾಖೆ ಮಾಹಿತಿ ಸಂಸ್ಥೆಯಾಗಬೇಕು - ಶಾಮ್]
ವಾರ್ತಾ ಇಲಾಖೆಯಿಂದ ಬಿಡುಗಡೆ ಮಾಡಲಾಗುವ ಸುದ್ದಿಗಳನ್ನು ಯೂನಿಕೋಡ್ನಲ್ಲಿ ಫೇಸ್ ಬುಕ್ ಮತ್ತು ಬ್ಲಾಗ್ ನಲ್ಲಿ ಅಪ್ಲೋಡ್ ಮಾಡುತ್ತಿರುವುದರಿಂದ, ಯಾವುದೇ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕವೂ ಇವುಗಳನ್ನು ಓದಬಹುದಾಗಿದೆ. ಅಲ್ಲದೆ ಸುದ್ದಿ ಮತ್ತು ಫೋಟೋಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ವಾರ್ತಾ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರಕಟಣೆಗಳು, ನೇಮಕಾತಿಗಳು, ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನ, ವಸತಿ ಯೋಜನೆಗಳು, ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ, ವಿವಿಧ ಪ್ರಮುಖ ಸಭೆಗಳಿಗೆ ಸಂಬಂಧಿಸಿದ ಸುದ್ದಿಗಳು, ಸಚಿವರು, ಪ್ರಮುಖ ಗಣ್ಯರ ಪ್ರವಾಸದ ಮಾಹಿತಿ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಲಾಗುತ್ತದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications