ಏಪ್ರಿಲ್ 15ರಿಂದ ಕರ್ನಾಟಕದಲ್ಲಿ ಎನ್ಪಿಆರ್ ನೋಂದಣಿ
ಬೆಂಗಳೂರು, ಡಿಸೆಂಬರ್ 26 : ಕರ್ನಾಟಕದಲ್ಲಿ ಏಪ್ರಿಲ್ 15 ರಿಂದ ಎನ್ಪಿಆರ್ ನೋಂದಣಿ ಆರಂಭವಾಗಲಿದೆ. ಕೇಂದ್ರ ಸರ್ಕಾರ ಎನ್ಪಿಆರ್ ಜಾರಿಗೆ ಒಪ್ಪಿಗೆ ನೀಡಿದ್ದು, 3941 ಕೋಟಿ ರೂ.ಗಳನ್ನು ಇದಕ್ಕಾಗಿ ಬಿಡುಗಡೆ ಮಾಡಿದೆ.
ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 2020ರ ಏಪ್ರಿಲ್ನಿಂದ ಸೆಪ್ಟೆಂಬರ್ ತನಕ ದೇಶಾದ್ಯಂತ ಎನ್ಪಿಆರ್ ನೋಂದಣಿ ಪ್ರಕ್ರಿಯೆ ನಡೆಯಲಿದೆ.
ಜನಗಣತಿ ಕಾರ್ಯಾಚರಣೆ ನಿರ್ದೇಶಕ ಎಸ್. ಬಿ. ವಿಜಯ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, "ಕರ್ನಾಟಕದಲ್ಲಿ ಏಪ್ರಿಲ್ 15ರಿಂದ ಜನಗಣತಿ ಮತ್ತು ಎನ್ಪಿಎಆರ್ ನೋಂದಣಿ ಆರಂಭವಾಗಲಿದೆ" ಎಂದು ಹೇಳಿದ್ದಾರೆ.

ಜನಗಣತಿ ಮತ್ತು ಎನ್ಪಿಆರ್ ನೋಂದಣಿ ಬಗ್ಗೆ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರದಲ್ಲಿ ನೋಂದಣಿಗಾಗಿ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಎನ್ಪಿಆರ್ ಎಂದರೆ ದೇಶದ ಸಾಮಾನ್ಯ ನಿವಾಸಿಗಳ ಪಟ್ಟಿ. 2010ರಲ್ಲಿ ಈ ಕುರಿತು ದತ್ತಾಂಶಗಳನ್ನು ಮನೆ-ಮನೆ ಸಮೀಕ್ಷೆ ಮೂಲಕ ಪರಿಷ್ಕರಣೆ ಮಾಡಲಾಗಿತ್ತು. 2015ರಲ್ಲಿ ಇದನ್ನು ಡಿಜಿಟಲ್ ದಾಖಲೀಕರಣ ಮಾಡುವ ಪ್ರಕ್ರಿಯೆಯೂ ಆಗಿದೆ.
2021ರ ಜನಗಣತಿ ಜೊತೆಗೆ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎನ್ಪಿಆರ್ ಸಹ ಸಿದ್ಧವಾಗಲಿದೆ. ಆದರೆ, ಅಸ್ಸಾಂನಲ್ಲಿ ಎನ್ಆರ್ಸಿ ಪ್ರಕ್ರಿಯೆ ನಡೆಯುವುದರಿಂದ ಅಲ್ಲಿ ಎನ್ಪಿಆರ್ ಇರುವುದಿಲ್ಲ.
ದೇಶದ ಸಾಮಾನ್ಯ ನಿವಾಸಿಗಳು ಎನ್ಪಿಆರ್ ಅಡಿ ನೋಂದಣಿಯಾಗುವುದು ಕಡ್ಡಾಯವಾಗಿದೆ. ಗ್ರಾಮ, ಉಪ ಪಟ್ಟಣ, ಜಿಲ್ಲೆ ಹೀಗೆ ಸ್ಥಳೀಯ ಮಟ್ಟದಲ್ಲಿ ತಯಾರಾಗುವ ನಿವಾಸಿಗಳ ನೋಂದಣಿ ಪಟ್ಟಿ ಇದಾಗಿದೆ. 1955ರ ನಾಗರಿಕ ಕಾಯ್ದೆ ಮತ್ತು ಪೌರತ್ವ ಕಾಯ್ದೆ 2003ರ ಅಡಿಯಲ್ಲಿ ಇದು ಬರಲಿದೆ.
ವ್ಯತ್ಯಾಸವೇನು?: ಜನಗಣತಿ ಮತ್ತು ಎನ್ಪಿಆರ್ ನಡುವೆ ವ್ಯತ್ಯಾಸಗಳಿವೆ. ಜನಗಣತಿಯಲ್ಲಿ ಒಬ್ಬ ಸದಸ್ಯ 29 ಅಂಶಗಳಿಗೆ ಉತ್ತರ ಕೊಡಬೇಕಿದೆ. ಆದರೆ, ಎನ್ಪಿಆರ್ನಲ್ಲಿ ಒಬ್ಬ ವ್ಯಕ್ತಿ ಒಂದು ಸ್ಥಳದಲ್ಲಿ 6 ತಿಂಗಳು ಅಥವ ಅದಕ್ಕಿಂತಲೂ ಹೆಚ್ಚು ಸಮಯದಿಂದ ಇದ್ದಾನೆಯೇ?, ಮುಂದೆ ಆರು ತಿಂಗಳು ಅಥವ ಅದಕ್ಕಿಂತ ಹೆಚ್ಚಿನ ಸಮಯ ಇರಲು ಇಚ್ಚಿಸಿದ್ದಾನೆಯೇ? ಎಂಬ ಮಾಹಿತಿಯನ್ನು ಮಾತ್ರ ಸಂಗ್ರಹ ಮಾಡಲಾಗುತ್ತದೆ.
2010ರಲ್ಲಿ ಎನ್ಪಿಆರ್ ನಡೆದಾಗ 15 ಅಂಶಗಳ ಆಧಾರದ ಮೇಲೆ ರಾಷ್ಟ್ರೀಯ ಸಾಮಾನ್ಯ ನಿವಾಸಿ ದತ್ತಾಂಶವನ್ನು ಸಂಗ್ರಹ ಮಾಡಲಾಗಿತ್ತು. ಎನ್ಪಿಆರ್ ಸಾಮಾನ್ಯ ನಿವಾಸಿಗಳ ದಾಖಲೆಯಾಗಿದೆ ಹೊರತು ಪೌರತ್ವದ ದಾಖಲೆ ಅಲ್ಲ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ












Click it and Unblock the Notifications