ಏಪ್ರಿಲ್ 15ರಿಂದ ಕರ್ನಾಟಕದಲ್ಲಿ ಎನ್ಪಿಆರ್ ನೋಂದಣಿ
ಬೆಂಗಳೂರು, ಡಿಸೆಂಬರ್ 26 : ಕರ್ನಾಟಕದಲ್ಲಿ ಏಪ್ರಿಲ್ 15 ರಿಂದ ಎನ್ಪಿಆರ್ ನೋಂದಣಿ ಆರಂಭವಾಗಲಿದೆ. ಕೇಂದ್ರ ಸರ್ಕಾರ ಎನ್ಪಿಆರ್ ಜಾರಿಗೆ ಒಪ್ಪಿಗೆ ನೀಡಿದ್ದು, 3941 ಕೋಟಿ ರೂ.ಗಳನ್ನು ಇದಕ್ಕಾಗಿ ಬಿಡುಗಡೆ ಮಾಡಿದೆ.
ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 2020ರ ಏಪ್ರಿಲ್ನಿಂದ ಸೆಪ್ಟೆಂಬರ್ ತನಕ ದೇಶಾದ್ಯಂತ ಎನ್ಪಿಆರ್ ನೋಂದಣಿ ಪ್ರಕ್ರಿಯೆ ನಡೆಯಲಿದೆ.
ಜನಗಣತಿ ಕಾರ್ಯಾಚರಣೆ ನಿರ್ದೇಶಕ ಎಸ್. ಬಿ. ವಿಜಯ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, "ಕರ್ನಾಟಕದಲ್ಲಿ ಏಪ್ರಿಲ್ 15ರಿಂದ ಜನಗಣತಿ ಮತ್ತು ಎನ್ಪಿಎಆರ್ ನೋಂದಣಿ ಆರಂಭವಾಗಲಿದೆ" ಎಂದು ಹೇಳಿದ್ದಾರೆ.

ಜನಗಣತಿ ಮತ್ತು ಎನ್ಪಿಆರ್ ನೋಂದಣಿ ಬಗ್ಗೆ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರದಲ್ಲಿ ನೋಂದಣಿಗಾಗಿ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಎನ್ಪಿಆರ್ ಎಂದರೆ ದೇಶದ ಸಾಮಾನ್ಯ ನಿವಾಸಿಗಳ ಪಟ್ಟಿ. 2010ರಲ್ಲಿ ಈ ಕುರಿತು ದತ್ತಾಂಶಗಳನ್ನು ಮನೆ-ಮನೆ ಸಮೀಕ್ಷೆ ಮೂಲಕ ಪರಿಷ್ಕರಣೆ ಮಾಡಲಾಗಿತ್ತು. 2015ರಲ್ಲಿ ಇದನ್ನು ಡಿಜಿಟಲ್ ದಾಖಲೀಕರಣ ಮಾಡುವ ಪ್ರಕ್ರಿಯೆಯೂ ಆಗಿದೆ.
2021ರ ಜನಗಣತಿ ಜೊತೆಗೆ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎನ್ಪಿಆರ್ ಸಹ ಸಿದ್ಧವಾಗಲಿದೆ. ಆದರೆ, ಅಸ್ಸಾಂನಲ್ಲಿ ಎನ್ಆರ್ಸಿ ಪ್ರಕ್ರಿಯೆ ನಡೆಯುವುದರಿಂದ ಅಲ್ಲಿ ಎನ್ಪಿಆರ್ ಇರುವುದಿಲ್ಲ.
ದೇಶದ ಸಾಮಾನ್ಯ ನಿವಾಸಿಗಳು ಎನ್ಪಿಆರ್ ಅಡಿ ನೋಂದಣಿಯಾಗುವುದು ಕಡ್ಡಾಯವಾಗಿದೆ. ಗ್ರಾಮ, ಉಪ ಪಟ್ಟಣ, ಜಿಲ್ಲೆ ಹೀಗೆ ಸ್ಥಳೀಯ ಮಟ್ಟದಲ್ಲಿ ತಯಾರಾಗುವ ನಿವಾಸಿಗಳ ನೋಂದಣಿ ಪಟ್ಟಿ ಇದಾಗಿದೆ. 1955ರ ನಾಗರಿಕ ಕಾಯ್ದೆ ಮತ್ತು ಪೌರತ್ವ ಕಾಯ್ದೆ 2003ರ ಅಡಿಯಲ್ಲಿ ಇದು ಬರಲಿದೆ.
ವ್ಯತ್ಯಾಸವೇನು?: ಜನಗಣತಿ ಮತ್ತು ಎನ್ಪಿಆರ್ ನಡುವೆ ವ್ಯತ್ಯಾಸಗಳಿವೆ. ಜನಗಣತಿಯಲ್ಲಿ ಒಬ್ಬ ಸದಸ್ಯ 29 ಅಂಶಗಳಿಗೆ ಉತ್ತರ ಕೊಡಬೇಕಿದೆ. ಆದರೆ, ಎನ್ಪಿಆರ್ನಲ್ಲಿ ಒಬ್ಬ ವ್ಯಕ್ತಿ ಒಂದು ಸ್ಥಳದಲ್ಲಿ 6 ತಿಂಗಳು ಅಥವ ಅದಕ್ಕಿಂತಲೂ ಹೆಚ್ಚು ಸಮಯದಿಂದ ಇದ್ದಾನೆಯೇ?, ಮುಂದೆ ಆರು ತಿಂಗಳು ಅಥವ ಅದಕ್ಕಿಂತ ಹೆಚ್ಚಿನ ಸಮಯ ಇರಲು ಇಚ್ಚಿಸಿದ್ದಾನೆಯೇ? ಎಂಬ ಮಾಹಿತಿಯನ್ನು ಮಾತ್ರ ಸಂಗ್ರಹ ಮಾಡಲಾಗುತ್ತದೆ.
2010ರಲ್ಲಿ ಎನ್ಪಿಆರ್ ನಡೆದಾಗ 15 ಅಂಶಗಳ ಆಧಾರದ ಮೇಲೆ ರಾಷ್ಟ್ರೀಯ ಸಾಮಾನ್ಯ ನಿವಾಸಿ ದತ್ತಾಂಶವನ್ನು ಸಂಗ್ರಹ ಮಾಡಲಾಗಿತ್ತು. ಎನ್ಪಿಆರ್ ಸಾಮಾನ್ಯ ನಿವಾಸಿಗಳ ದಾಖಲೆಯಾಗಿದೆ ಹೊರತು ಪೌರತ್ವದ ದಾಖಲೆ ಅಲ್ಲ.
-
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು?












Click it and Unblock the Notifications