ಹುಬ್ಬಳ್ಳಿ-ಗದಗ ಮಧ್ಯೆ ತಡೆರಹಿತ 'ರಾಜಹಂಸ' ಬಸ್ ಸೇವೆ ಆರಂಭ, ಟಿಕೆಟ್ ದರವೆಷ್ಟು-ವೇಳಾಪಟ್ಟಿ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಮುಖ ಸಂಚಾರ ಕೇಂದ್ರಗಳು ಮತ್ತು ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಬೇರೆ ಬೇರೆ ಭಾಗಗಳಿಂದ ನಿತ್ಯ ಸಾವಿರಾರು ಜನರು ಆಗಮಿಸುತ್ತಾರೆ. ಅದೇ ರೀತಿ ಗದಗ ಜಿಲ್ಲೆಯಿಂದ ಅಪಾರ ಪ್ರಯಾಣಿಕರು ಬರುತ್ತಾರೆ. ಅವರಿಗೆಲ್ಲ ಉತ್ತಮ ತಡೆರಹಿತ ಸಂಚಾರ ಸೇವೆ ಒದಗಿಸುವ ಉದ್ದೇಶದಿಂದ ವಾಯವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಹುಬ್ಬಳ್ಳಿ-ಗದಗ ಮಾರ್ಗದಲ್ಲಿ ತಡೆರಹಿತ 'ರಾಜಹಂಸ' ಬಸ್ಗಳ ಸಂಚಾರ ಆರಂಭಿಸಿದೆ.
ಉದ್ಯೋಗ, ಶೈಕ್ಷಣಿಕ, ಕೈಗಾರಿಕೆ, ಮಾರುಕಟ್ಟೆ ಇನ್ನಿತರ ಉದ್ದೇಶಗಳು ಸೇರಿದಂತೆ ನಾನಾ ಕಾರಣಗಳಿಗಾಗಿ ಗದಗಿನ ಜನರು ಹುಬ್ಬಳ್ಳಿ-ಧಾರವಾಡಕ್ಕೆ ಆಗಮಿಸುತ್ತಾರೆ. ಈ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಮತ್ತು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ 'ರಾಜಹಂಸ' ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಅವರು ಮಾಹಿತಿ ನೀಡಿದ್ದಾರೆ.

ಈಡೇರಿದ ಸಾರ್ವಜನಿಕರ ಬಹುದಿನಗಳ ಬೇಡಿಕೆ
ಬಹುದಿನಗಳಿಂದಲೂ ಈ ಮಾರ್ಗದಲ್ಲಿ ಹೆಚ್ಚಿನ ಹಾಗೂ ತಡೆರಹಿತ ಬಸ್ಗಳ ಸಂಚಾರಕ್ಕೆ ಸಾರ್ವಜನಿಕರು ಬೇಡಿಕೆ ಇಟ್ಟಿದ್ದರು. ಇದೀಗ ಅವರ ಬೇಡಿಕೆ ಈಡೇರಿದೆ. ಆರಂಭಿಕ ಹಂತವೆಂಬಂತೆ ಹುಬ್ಬಳಿ-ಗದಗ ಮಧ್ಯೆ ಪ್ರಾಯೋಗಿಕವಾಗಿ ತಡೆ ರಹಿತ ರಾಜಹಂಸ ಬಸ್ ಗಳ ಸಂಚಾರವು ಶುರುವಾಗಿದೆ.
ಹುಬ್ಬಳ್ಳಿ ನಗರದ ಹೊಸೂರು ಬಸ್ ನಿಲ್ದಾಣದಿಂದ ಗದಗಗೆ ರಾಜಹಂಸ ಬಸ್ಗಳು ಹೊರಡುತ್ತವೆ. ಅಲ್ಲಿ ಗದಗ ಬಸ್ ನಿಲ್ದಾಣದಿಂದ ಮರಳಿ ಹುಬ್ಬಳ್ಳಿಯತ್ತ ಬರುತ್ತವೆ. ಈ ಬಸ್ಗಳ ಸಂಚಾರ ಸಮಯ, ವೇಳಾಪಟ್ಟಿ ಮಾಹಿತಿ ಇಲ್ಲಿದೆ.
ತಡೆರಹಿತ ರಾಜಹಂಸ ಬಸ್ ವೇಳಾಪಟ್ಟಿ
* ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆ, 8.30ಕ್ಕೆ, 9 ಮತ್ತು ಮಧ್ಯಾಹ್ನ 12 ಗಂಟೆಗೆ, 12.30, 1ಕ್ಕೆ ಸಂಜೆ 4 ಗಂಟೆಗೆ, 4.30 ಹಾಗೂ 5.00ಕ್ಕೆ ಹೊರಡುತ್ತವೆ.
* ಮರಳಿ ಅದೇ ದಿಕ್ಕಿನಲ್ಲಿ ಗದಗನಿಂದ ಬೆಳಗ್ಗೆ 10 ಗಂಟೆಗೆ, 10.30ಕ್ಕೆ, 11 ಗಂಟೆ ಹಾಗೂ ಮಧ್ಯಾಹ್ನ 2ಕ್ಕೆ, 2.30 ಗಂಟೆಗೆ, 3 ಸಂಜೆ 5.30ಕ್ಕೆ, 6 ಗಂಟೆಗೆ ಹಾಗೂ 6.30ಕ್ಕೆ ಬಸ್ಗಳು ಸಂಚರಿಸುತ್ತವೆ. ಈ ಸಮಯ ವೇಳಾಪಟ್ಟಿಗೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಸಂಚಾರವನ್ನು ಯೋಜಿಸಿಕೊಳ್ಳಬೇಕು. ಬೆಳಗ್ಗೆ ಮತ್ತು ಸಂಜೆ ಎರಡು ಸಮಯದಲ್ಲೂ ಬಸ್ಗಳ ಸೇವೆ ಸಿಗಲಿದೆ.
ಟಿಕೆಟ್ ದರ ಎಷ್ಟಿದೆ?
ಗದಗ-ಹುಬ್ಬಳ್ಳಿ ರಾಜಹಂಸ ಬಸ್ ಪ್ರಯಾಣದ ದರ ತಲಾ ಒಬ್ಬರಿಗೆ ರೂ.100 ನಿಗದಿಪಡಿಸಲಾಗಿದೆ. ಇದು ಅಪಘಾತ ಪರಿಹಾರ ವಿಮೆ, ಟೋಲ್ ಫೀ ಎಲ್ಲವನ್ನು ಒಳಗೊಂಡು ಟಿಕೆಟ್ ಬೆಲೆ ನಿಗದಿ ಮಾಡಲಾಗಿದೆ. ಈ ಮಾರ್ಗದಲ್ಲಿ ಸದರಿ ಬಸ್ಗಳಿಗೆ ಸಾರ್ವಜನಿಕರಿಂದ ಸಿಗುವ ಸ್ಪಂದನೆ, ಅಗತ್ಯತೆ ನೋಡಿಕೊಂಡು ಬಸ್ಗಳನ್ನು ಹೆಚ್ಚಿಸಬೇಕೇ? ಬೇಡವೇ? ಎಂದು ನೀರ್ಧರಿಸಲಾಗುವುದು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಿಕೆಟ್ ಹಣವನ್ನು ಯುಪಿಐ ಮೂಲಕ ಪಾವತಿಸಬಹುದು. ಇಲ್ಲವೇ ನಗದು ಹಣ ಕೊಟ್ಟು ಟಿಕೆಟ್ ಖರೀದಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಹುಬ್ಬಳ್ಳಿ ಇಲ್ಲವೇ ಗದಗ ಬಸ್ ನಿಲ್ದಾಣದ ಸಿಬ್ಬಂದಿ, ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
-
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ














Click it and Unblock the Notifications