Students Bus Pass: 10 ತಿಂಗಳ ಅವಧಿಯ ಡಿಸ್ಕೌಂಟ್ ಬಸ್ ವಿತರಣೆಗೆ ಅರ್ಜಿ ಆಹ್ವಾನ, ಶುಲ್ಕದ ವಿವರ
Bus Pass updates: ಕರ್ನಾಟಕದಾದ್ಯಂತ ಶಾಲಾ ಕಾಲೇಜುಗಳು ಆರಂಭವಾಗಿವೆ. ಇದರ ಬೆನ್ನಲ್ಲಿ ತಮ್ಮ ಊರು, ವಾಸದ ಸ್ಥಳಗಳಿಂದ ಶೈಕ್ಷಣಿಕ ಕೇಂದ್ರಗಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳಿಂದ ರಿಯಾಯಿತಿ ಬಸ್ ಪಾಸ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ಶೀಘ್ರವೇ ವಿತರಿಸಲಾಗುತ್ತದೆ.
ಹತ್ತು ತಿಂಗಳ ಅವಧಿಯ ಬಸ್ ಪಾಸ್ ವಿತರಣೆಗೆ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೀಘ್ರವೇ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಿ ರಿಯಾಯಿತಿ ಬಸ್ ಪಾಸ್ ಪಡೆಯಬಹುದು. ಅರ್ಜಿಗಳನ್ನು ನೀವು ಕರ್ನಾಟಕ-ಒನ್, ಗ್ರಾಮ್ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಪಾಸಿನ ಶುಲ್ಕ ಪಾವತಿಸಿ ಸ್ಥಳೀಯ ಪಾಸ್ ಕೌಂಟರ್ಗಳಲ್ಲಿ ಪಾಸ್ ಪಡೆಯಬಹುದಾಗಿದೆ.

ವಿದ್ಯಾರ್ಥಿಗಳು ಅಗತ್ಯ ದಾಖಲೆಗಳು ವಿದ್ಯಾಸಂಸ್ಥೆಯ ಶುಲ್ಕ ಪಾವತಿಸಿರುವ ರಶೀದಿ, ಆಧಾರ್ ಕಾರ್ಡ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಾಗಿದ್ದರೆ ಕಡ್ಡಾಯವಾಗಿ ಪ್ರಮಾಣ ಪತ್ರ ಸಹಿತ ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬೇಕು. ಶುಲ್ಕ ಪಾವತಿಸಿ ರಶೀದಿ ಸಮೇತ ಹೋಗಿ ಬಸ್ ಕೌಂಟರ್ಗಳಲ್ಲಿ ಪಾಸ್ ಪಡೆಯೇಬೇಕು.
ವಿದ್ಯಾರ್ಥಿಗಳಿಗೆ ನೀಡುವ 10 ತಿಂಗಳ ಅವಧಿಯ ರಿಯಾಯಿತಿ ಬಸ್ ಪಾಸ್ ದರ ನೋಡುವುದಾದರೆ, ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಸಾಮಾನ್ಯ ವರ್ಗದವರಿಗೆ 150 ರೂ., ಎಸ್ಸಿ-ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ 150 ರೂಪಾಯಿ ಶುಲ್ಕ ಇದೆ. ಪ್ರೌಢಶಾಲೆ (ಬಾಲಕರು) ವಿದ್ಯಾರ್ಥಿಗಳಿಗೆ ಸಾಮಾನ್ಯ ವರ್ಗದವರಿಗೆ 750ರೂ. ಮತ್ತು ಎಸ್ಸಿ-ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ 150 ರೂಪಾಯಿ, ಪ್ರೌಢಶಾಲೆ (ಬಾಲಕಿ) ವಿದ್ಯಾರ್ಥಿಗಳಿಗೆ ಕ್ರಮವಾಗಿ 550 ರೂ. ಮತ್ತು 150 ರೂಪಾಯಿ ಶುಲ್ಕ, ಪಿಯುಸಿ/ಪದವಿ/ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕ್ರಮವಾಗಿ 1050 ಮತ್ತ 150 ರೂಪಾಯಿ ಶುಲ್ಕ ನಿಗದಿ ಮಾಡಲಾಗಿದೆ.
ಐಟಿಐ ವಿದ್ಯಾರ್ಥಿಗಳಿಗೆ ಕ್ರಮವಾಗಿ 1310 ರೂಪಾಯಿ ಮತ್ತು 160 ರೂಪಾಯಿ, ವೃತ್ತಿಪರ ಕೋರ್ಸ್ ಅಭ್ಯರ್ಥಿಗಳ ಬಸ್ ಪಾಸ್ಗೆ 1550 ರೂ.ಮತ್ತು 150 ರೂಪಾಯಿ, ಹಾಗೂ ಸಂಜೆ ಕಾಲೇಜ್/ಪಿಎಚ್ಡಿ ಅಭ್ಯರ್ಥಿಗಳ ಬಸ್ಪಾಸ್ಗೆ ಕ್ರಮವಾಗಿ 1350 ರೂ. ಮತ್ತು 150 ರೂಪಾಯಿ ದರ ನಿಗದಿಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರ ಬಸ್ ಕೌಂಟರ್ಗಳಲ್ಲಿ ವಿಚಾರಿಸುವಂತೆ NWKRTC ಪ್ರಕಟಣೆ ನೀಡಿದೆ..
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications