NWKRTC: ಚುನಾವಣೆಗೆ ಬೆಂಗಳೂರಿನಿಂದ ಉತ್ತರ ಕರ್ನಾಟಕಕ್ಕೆ ತೆರಳುವವರಿಗೆ ಸಿಹಿ ಸುದ್ದಿ
ಬೆಂಗಳೂರು, ಮೇ. 03 : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಮುಗಿದಿದೆ. ಎರಡನೇ ಹಂತದ ಮತದಾನಕ್ಕೆ ಸಿದ್ಧವಾಗುತ್ತಿದೆ. ಇದೇ ವೇಳೆ ದೇಶವೂ ಮೂರನೇ ಹಂತದ ಮತದಾನಕ್ಕೆ ತಯಾರಾಗುತ್ತಿದೆ. ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದರೆ, ಚುನಾವಣೆಯನ್ನು ಸುಸೂತ್ರವಾಗಿ ಮುಗಿಸಲು ಸರ್ಕಾರದ ಅಂಗ ಸಂಸ್ಥೆಗಳು ಸಕಲ ಪ್ರಯತ್ನದಲ್ಲಿವೆ.
ರಾಜಧಾನಿ ಬೆಂಗಳೂರು ರಾಜ್ಯದ ಪ್ರಮುಖ ಉದ್ಯೋಗ ನಗರವಾಗಿದ್ದು, ಜೀವನ ನಿರ್ವಹಣೆಗಾಗಿ ಬೇರೆ ಬೇರೆ ಭಾಗಗಳ ಜನರು ಇಲ್ಲಿ ನೆಲೆಸಿದ್ದಾರೆ. ಚುನಾವಣೆ ಸಮಯದಲ್ಲಿ ತಮ್ಮ ಊರುಗಳಿಗೆ ತೆರಳಿ ಮತ ಚಲಾಯಿಸಿ ವಾಪಸ್ ಆಗುತ್ತಾರೆ. ಆದರೆ, ಒಮ್ಮೆಲೆ ಅಷ್ಟೊಂದು ಜನ ಊರುಗಳಿಗೆ ತೆರಳುವ ಕಾರಣ ಬಸ್ಗಳ ಬೇಡಿಕೆ ಹೆಚ್ಚುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ ಬಸ್ಗಳ ಸೇವೆ ನೀಡುತ್ತಿದೆ.

ಉತ್ತರ ಕರ್ನಾಟಕಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ
ಮೇ ಏಳರಂದು 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದೆ. ಈಗ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಎಲ್ಲವೂ ಹೆಚ್ಚು ಕಡಿಮೆ ಉತ್ತರ ಕರ್ನಾಟಕದ ಭಾಗದಲ್ಲಿವೆ.
ಹೀಗಾಗಿಯೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಮೂರು ದಿನಗಳ ಕಾಲ ವಿಶೇಷ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತು ಇನ್ನಿತರ ಸ್ಥಳಗಳಿಗೆ ವಿಶೇಷ ಹೆಚ್ಚುವರಿ ಸಾರಿಗೆ ಸೇವೆ ನೀಡಲಿದೆ.
07-05-2024 ರಂದು ಲೋಕಸಭಾ ಚುನಾವಣೆಗೆ
— North Western Karnataka Road Transport Corporation (@nw_krtc) May 3, 2024
ಮತದಾನ ನಡೆಯಲಿರುವ ಪ್ರಯುಕ್ತ
ದಿನಾಂಕ: 03-05-2024 ರಿಂದ 06-05-2024 ವರೆಗೆ ವಿಶೇಷ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ.
ಬಸ್ ಟಿಕೆಟ್ ಬುಕಿಂಗ್ ಗಾಗಿ https://t.co/P8O6ADJWvu ಗೆ ಭೇಟಿ ನೀಡಿ. pic.twitter.com/zvxMJ8nZhN
ಮೇ 7 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿರುವ ಪ್ರಯುಕ್ತ ದಿನಾಂಕ: 03-05-2024 ರಿಂದ 06-05-2024 ವರೆಗೆ ವಿಶೇಷ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ ನಡೆಸಲಿದೆ. ಬಸ್ ಟಿಕೆಟ್ ಬುಕಿಂಗ್ ಗಾಗಿ http://ksrtc.in ಗೆ ಭೇಟಿ ನೀಡಿ" ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ.
ಬೆಂಗಳೂರಿನಿಂದ ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತು ಇನ್ನಿತರ ಸ್ಥಳಗಳಿಗೆ ವಿಶೇಷ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ ನಡೆಸಲಿದೆ. ಮುಂಗಡ ಆಸನ ಕಾಯ್ದಿರಿಸಿದರೆ ರಿಯಾಯಿತಿ ನೀಡಲಾಗುತ್ತದೆ. 4 ಅಥವಾ ಹೆಚ್ಚಿನ ಆಸನಗಳನ್ನು ಒಂದೇ ಸಲಕ್ಕೆ ಕಾಯ್ದಿರಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ, ಹೋಗುವ ಹಾಗೂ ಬರುವ ಪ್ರಯಾಣಕ್ಕೆ ಒಟ್ಟಿಗೆ ಆಸನವನ್ನು ಕಾಯ್ದಿರಿಸಿದರೆ 10% ರಿಯಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ http://ksrtc.in ಗೆ ಭೇಟಿ ನೀಡಬಹುದು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications