Tour Package: ಸಿಂಗದೂರಿಗೆ ಪ್ರವಾಸ ಪ್ಯಾಕೇಜ್ ಘೋಷಣೆ, ಎಲ್ಲಿಂದ?: ಹೊಸ ಬ್ರಿಡ್ಜ್ ಮೇಲೆ ಪ್ರಯಾಣ!
Tour Package: ಮುಂಗಾರು ಮಳೆ ಜೋರಾಗಿದ್ದು, ಪ್ರವಾಸಿ ತಾಣಗಳು ಕೈ ಬೀಸಿ ಕರೆಯುತ್ತೀವೆ. ಪ್ರವಾಸಿಗರನ್ನು ತನ್ನತ್ತ ಸೆಳೆಯುವ ಜಲಪಾತಗಳು, ಧಾರ್ಮಿಕ ಸ್ಥಳಗಳಿಗೆ ಕರ್ನಾಟಕ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ. ಇತ್ತೀಚೆಗೆ ಹಾವೇರಿ, ಹುಬ್ಬಳ್ಳಿಯಿಂದ ಜೋಗ ಜಲಪಾತಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಈ ಜಿಲ್ಲೆಯಿಂದ ಸಿಗಂಧೂರು ಚೌಡೇಶ್ವರಿ ದೇಗುಲಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಲಾಂಚ್ ಮೂಲಕ ಅಲ್ಲದೇ ಹೊಸ ಸೇತುವೆ ಮೂಲಕ ಮೊದಲ ಬಾರಿಗೆ ಸಂಚರಿಸುವ ಅವಕಾಶ ನಿಮ್ಮದಾಗಲಿದೆ. ಅತೀ ಕಡಿಮೆ ದರದಲ್ಲಿ ಪ್ರವಾಸ ಮಾಡಬಹುದಾಗಿದೆ.
ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಇತ್ತೀಚೆಗೆ ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರಿನಿಂದ ಜೋಗಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಇದೀಗ ಹಾವೇರಿ ಮತ್ತು ರಾಣೇಬೆನ್ನೂರ ಬಸ್ ನಿಲ್ದಾಣದಿಂದ ಪ್ರತಿ ಭಾನುವಾರ ಸಿಗಂದೂರ ಶ್ರೀ ಚೌಡೇಶ್ವರಿ ದೇವಿ ದರ್ಶನ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ವಿಭಾಗೀಯ ಘಟಕದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೇ ಜುಲೈ 20 ಭಾನುವಾರದಿಂದ ಈ ಪ್ರವಾಸಾ ಸಾರಿಗೆ ಸೇವೆ ಆರಂಭವಾಗಲಿದೆ. ಹಾವೇರಿ ಬಸ್ ನಿಲ್ದಾಣದಿಂದ ಬೆಳಗ್ಗೆ 7.30 ಕ್ಕೆ ಬಸ್ ಹೊರಟು 11.30ಕ್ಕೆ ಸಿಗಂದೂರು ಚೌಡೇಶ್ವರಿ ತಲುಪಲಿದೆ. ಮರಳಿ 15.30 (3.30)ಕ್ಕೆ ಅಲ್ಲಿಂದ ಹೊರಟು ರಾತ್ರಿ 19.30 (07.30) ಗಂಟೆಗೆ ಹಾವೇರಿ ನಿಲ್ದಾಣಕ್ಕೆ ಬರಲಿದೆ. ಈ ಪ್ರವಾಸಕ್ಕೆ ಒಬ್ಬರಿಗೆ 455 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ 7760 91925/ 77609 69286 ಗೆ ಸಂಪರ್ಕಿಸಬಹುದು.
ರಾಣೆಬೆನ್ನೂರು-ಸಿಗಂದೂರು ಪ್ರವಾಸ
ಇದೇ ಭಾನುವಾರದಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಿಂದ ಸಹ ಸಿಗಂದೂರಿಗೆ ಬಸ್ ಕಾರ್ಯಾಚದರಣೆ ಮಾಡಲಿವೆ. ಅಲ್ಲಿಂದ ಬೆಳಗ್ಗೆ 7.30 ಕ್ಕೆ ಬಸ್ ಹೊರಟು 11ಕ್ಕೆ ಸಿಗಂದೂರು ಚೌಡೇಶ್ವರಿ ತಲುಪಲಿದೆ. ಮರಳಿ 15 (3.)ಕ್ಕೆ ಅಲ್ಲಿಂದ ಹೊರಟು ಸಂಜೆ 18.30 (06.30) ಗಂಟೆಗೆ ರಾಣಿಬೆನ್ನೂರು ನಿಲ್ದಾಣಕ್ಕೆ ಬಂದು ಸೇರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಣಿಬೆನ್ನೂರಿನಿಂದ ಒಬ್ಬ ಪ್ರಯಾಣಿಕರಿಗೆ 430 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ವಿಶೇಷ ಸೂಚನೆ ಎಂದರೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಈ ಟೂರ್ ಪ್ಯಾಕೇಜ್ನ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಇರುವುದಿಲ್ಲ. ಇದನ್ನು ಗಮನಿಸು ಸಂಚರಿಸುವಂತೆ ಅಧಿಕಾರಿಗಳು ಕೋರಿದ್ದಾರೆ. ನೀವು ಟಿಕೆಟ್ ಅನ್ನು ಮೊದಲೇ ಬುಕ್ ಮಾಡಿಕೊಳ್ಳಲು www.ksrtc.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವಂತೆ ತಿಳಿಸಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications