ಯುವಮನಸ್ಸುಗಳಿಗಾಗಿ ಇರುವ ಪತ್ರಿಕೆ ಓ ಮನಸೇ
'ಓ ಮನಸೇ' ಭಾವಭೂಮಿಕೆಯನ್ನು ಯುವ ಜನರಲ್ಲಿ ನಿರ್ಮಿಸಿರುವ ಪತ್ರಿಕೆ. ಎಲ್ಲೋ ಬಸ್ಸಲ್ಲಿ ಸಿಕ್ಕಿದೋರು, ಸ್ಕೂಲ್ನಲ್ಲಿ ಪಕ್ಕದಲ್ಲಿ ಕೂತ್ಕೊಂಡು ಡಬ್ಬಿ ಹಂಚಿಕೊಂಡವರು, ಕೆಲಸವಿಲ್ಲದಿದ್ದಾಗ ಮನೆಯಲ್ಲಿ ಇಟ್ಕೊಂಡೋರು ಆ ತರಹ ನಮ್ಮ ಜೀವನದಲ್ಲಿ ಸಾವಿರಾರು ಜನ ಬಂದ್ಹೋಗಿರ್ತಾರೆ. ಅವರ ಮುಖ ಚಹರೆ ಎಲ್ಲಾ ಮರೀತೀವಿ ನಾವು.
ಆದರೆ ರವಿ ಬೆಳಗೆರೆಯವರ 'ಖಾಸ್ ಬಾತ್'ನಲ್ಲಿ ಅವರಿಗೆಲ್ಲಾ ಮುಖ, ಚಹರೆ ಕೊಡುವಂಥ ಒಂದು ರೀತಿ ಕಥನವೇ ಅದು. ಆ 'ಖಾಸ್ ಬಾತ್'ನಲ್ಲಿ ಒಂದು ಎಲಿಮೆಂಟ್ ಇತ್ತಲ್ಲಾ? ಯವಜನರ ಜೊತೆ ಮುಕ್ತವಾದ ಸಂವಾದ, ಒಂದು ಸಲಿಗೆಯಿಂದ ಬೈಯೋದು, ಬುದ್ಧಿವಾದ ಹೇಳೋದು ಆ ತರಹದ್ದು, ಅದರ ವಿಸ್ತಾರವಾದ ರೂಪ 'ಓ ಮನಸೇ..' ಅಂತ ನನಗೆ ಅನ್ನಿಸುತ್ತದೆ. 'ಓ ಮನಸೇ'ಗೆ ಅದರದೇ ಆದ ಭಾವನಾತ್ಮಕವಾದ ಮತ್ತು ಅಷ್ಟೇ ಜವಾಬ್ದಾರಿಯುತವಾದ ವಾಚಕವೃಂದ ಇದೆ. ನೂರನೇ ಸಂಚಿಕೆ ಬರ್ತಾ ಇರೋದು ಬಹಳ ಖುಷಿ.
ಎಲ್ಲರೂ ಫೇಸ್ಬುಕ್ಗಳಲ್ಲಿ, ಸೆಲ್ಫಿಗಳಲ್ಲಿ ಆತ್ಮರಥರಾಗಿ ಹೋಗ್ತಿದ್ದಾರೆ ಎನ್ನುವ ಭಯದಲ್ಲಿರುವಾಗ ಈಗಲೂ ಅಂಗಡಿ ಹೋಗಿ 20 ರುಪಾಯಿ ಕೊಟ್ಟು ಓ ಮನಸೇ..' ತಗೊಂಡು ಬಸ್ಸಲ್ಲಿ, ಮನೆ ಟೇಬಲ್ ಮೇಲಿಟ್ಕೊಂಡು ಓದುತ್ತಾರೆಂದರೆ ಹೃದಯಂಗಮವಾದ ಸಂಗತಿ-ಜಯಂತ್ ಕಾಯ್ಕಿಣಿ. [50 ವರ್ಷ ತುಂಬಿದ ಸುಧಾ ವಾರಪತ್ರಿಕೆ]

ನಮ್ಮ ಓದುಗರ ಪೈಕಿ ಹಲವಾರು ಮಂದಿ ‘ಓ ಮನಸೇ'ಯ ಅಷ್ಟೂ ಸಂಚಿಕೆಗಳನ್ನು ಜೋಪಾನವಾಗಿ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಅವರ ಪಾಲಿಗೆ ಅದೊಂದು ಅಮೂಲ್ಯ ಆಸ್ತಿ. ಈ ಹಿಂದೆ ‘ರೀಡರ್ಸ್ ಡೈಜೆಸ್ಟ್' ಪತ್ರಿಕೆಯ ಸಂಚಿಕೆಗಳನ್ನು ಇದೇ ಥರ ಕಾಪಿಟ್ಟುಕೊಳ್ಳುವ ಜನರಿದ್ದರು, ಆಮೇಲೆ ‘ಕಸ್ತೂರಿ' ಪತ್ರಿಕೆಗೂ ಅಂಥಾದ್ದೇ ರಾಜಮರ್ಯಾದೆ ಸಂದಾಯವಾಗಿತ್ತು. ಈಗ ‘ಓ ಮನಸೇ..'ಯ ಸರದಿ. ಹದಿನೈದೇ ರುಪಾಯಿಗೆ ಇದಕ್ಕಿಂತ ಜಾಸ್ತಿ ಪುಟಗಳನ್ನು ಬಣ್ಣದಲ್ಲಿ ನೀಡುವ ಪತ್ರಿಕೆಗಳಿವೆ, ಹಾಗಿರುವಾಗ ಐವತ್ತು ಪುಟಗಳ ‘ಓ ಮನಸೇ'ಗೆ ಇಪ್ಪತ್ತು ರುಪಾಯಿ ದುಬಾರಿಯಾಯಿತಲ್ಲವೇ ಎಂದು ಕೆಲವರು ತಕರಾರು ಎತ್ತಿದ್ದುಂಟು.[ಕಾಮಿನಿಯೆಂದರೆ ಹೆಣ್ಣು ; ಕಾಮಿಯೆಂದರೆ ಹೆಣ್ಣುಬೆಕ್ಕು!]
ಅವರಿಗೆ ನಾನು ಹೇಳುವುದಿಷ್ಟೆಃ ಮಿಕ್ಕ ಪತ್ರಿಕೆಗಳಲ್ಲಿ ಜಾಹಿರಾತಿಗೆ ಮೀಸಲಾಗಿರುವ ಪುಟಗಳನ್ನು ಕಳೆದು ನೋಡಿ, ಆಗ ಕಂಟೆಂಟ್ ಸಲುವಾಗಿ ಉಳಿಯುವುದು ಐವತ್ತು ಪುಟಗಳೇ. ಕಲರ್ ಪುಟಗಳ ವಿಷಯಕ್ಕೆ ಬಂದರೆ ಅಂದಚಂದಕ್ಕೋಸ್ಕರ ಈಗ ಯಾರೂ ಪತ್ರಿಕೆಗಳನ್ನು ಓದುವುದಿಲ್ಲ. ಟೀವಿಯಲ್ಲಿ ನ್ಯಾಷನಲ್ ಜಿಯಾಗ್ರಫಿ ಚಾನೆಲ್ಲು ನೋಡಿ, ಅದು high definition ಗುಣಮಟ್ಟದಲ್ಲಿರುತ್ತವೆ.

ಅದರ ಜೊತೆಗೆ ಯಾರಾದರೂ ಪೈಪೋಟಿಗೆ ಬೀಳುವುದಕ್ಕಾಗುತ್ತದೆಯೇ? ಅಂದದ ಮನೆಗೊಂದು ಚಂದದ ಪತ್ರಿಕೆ ಅನ್ನುವ ಕಾಲ ಹೊರಟುಹೋಯಿತು. ಟೀಪಾಯ್ ಮೇಲಿಟ್ಟುಕೊಳ್ಳುವ ಪತ್ರಿಕೆಯ ಒಳಗೇನಿದೆ ಅನ್ನುವುದೇ ಮುಖ್ಯ. ಬಹುಶಃ ‘ಸಮಾಧಾನ'ದಂಥ ವಿಶಿಷ್ಟ, ವಿಭಿನ್ನ ಅಂಕಣ ಬೇರೆ ಯಾವ ಪತ್ರಿಕೆಯಲ್ಲೂ ಇಲ್ಲ. ಸೆಕ್ಸು, ಕ್ರೌರ್ಯ, ರಾಜಕೀಯ ನಮಗಲ್ಲ.
ಪತ್ರಿಕೆ ತನ್ನ ಸುದೀರ್ಘ ಪಯಣದಲ್ಲಿ ನಾನಾ ಅವತಾರಗಳನ್ನು ಎತ್ತಬೇಕಾಗುತ್ತದೆ. ಒಮ್ಮೆ ಗೆಳೆಯನಂತೆ, ಮತ್ತೊಮ್ಮೆ ಹಿರಿಯನಂತೆ, ಮಗದೊಮ್ಮೆ ಪ್ರೇಮಿಯಂತೆ...ಹೀಗೆ ಓದುಗರನ್ನು ಆವರಿಸುತ್ತಾ, ನೇವರಿಸುತ್ತಾ, ಅವರ ದೈನಿಕದಲ್ಲಿ ಒಂದಾಗುವುದು ಕಷ್ಟದ ಕೆಲಸ. ಅದನ್ನು ಸಾಧಿಸುವ ಹಾದಿಯಲ್ಲಿ ನಾವಿದ್ದೇವೆ ಅನ್ನುವುದೇ ನನ್ನ ಸಂತಸ.
ಜೊತೆಗೆ ನೀವಿಲ್ಲದೇ ಇದ್ದರೆ ಇದು ಸಾಧ್ಯವಾಗುವುದಿಲ್ಲ ಅನ್ನುವುದು ವಾಸ್ತವ. ಕೆಲವು ಓದುಗರು ಪದೇಪದೇ ಪತ್ರ ಬರೆದು ವಿನಂತಿಸಿಕೊಳ್ಳುತ್ತಿದ್ದಾರೆ - ಯಾವುದೇ ಕಾರಣಕ್ಕೂ ‘ಓ ಮನಸೇ'ಯನ್ನು ಮತ್ತೆ ಸ್ತಗಿತಗೊಳಿಸಬೇಡಿ. ಆ ಪ್ರಶ್ನೆಯೇ ಇಲ್ಲ, ಯಾಕೆಂದರೆ ಅಂಬೆಗಾಲಿಡುತ್ತಿದ್ದ ಮಗು ಈಗ ಹರಯಕ್ಕೆ ಬಂದಿದೆ. ನಿಮ್ಮ ಹರಕೆ, ಹಾರೈಕೆಯಿದ್ದರೆ ಇದು ದ್ವಿಶತಕ ಬಾರಿಸುವುದು ದೊಡ್ಡ ಸಂಗತಿಯೇನಲ್ಲ. ಮತ್ತೊಮ್ಮೆ ನಿಮ್ಮೆಲ್ಲರಿಗೂ ನೂರು ಸಾರಿ ಥ್ಯಾಂಕ್ಸ್ ಹೇಳುತ್ತಾ...
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications