ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ; ವೈದ್ಯರ ಅಮಾನತು ಮಾಡಿ ಆದೇಶ
ಬೆಂಗಳೂರು, ಜುಲೈ 20: ಯಲಹಂಕ ಆಸ್ಪತ್ರೆಯಲ್ಲಿ ಹೆರಿಗೆಗೆ ವಾರ್ಡ್ ಬಾಯ್ ಮೂಲಕ ಲಂಚ ಪಡೆದಿದ್ದ ಆರೋಪದ ಮೇಲೆ ಪ್ರಸೂತಿ ತಜ್ಞ ಡಾ. ರಾಮಚಂದ್ರ ಕೆ.ಸಿ ಅವರನ್ನ ಅಮಾನತ್ತು ಮಾಡಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಜನರಿಂದ ಹಣ ವಸೂಲಿ ಮಾಡುವ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಎಚ್ಚರಿಕೆಯ ಸಂದೇಶವನ್ನ ರವಾನಿಸಿದೆ. ಯಲಹಂಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿಸಲು 10 ಸಾವಿರ ಹಣ ಪಡೆದಿರುವುದು ಲೋಕಾಯುಕ್ತರ ತನಿಖೆಯಲ್ಲಿ ಸಾಬೀತಾಗಿತ್ತು. ಈ ಕುರಿತಂತ ಪ್ರಮುಖ ಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದವು.

ಇನ್ನೂ ಮಾಧ್ಯಮಗಳ ವರದಿ ಹಾಗೂ ಲೋಕಾಯುಕ್ತರ ತನಿಖೆ ಆಧಾರವಾಗಿಟ್ಟುಕೊಂಡು ವೈದ್ಯರ ವಿರುದ್ಧ ಕ್ರಮ ಜರುಗಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಯುಕ್ತರಿಗೆ ಸೂಚನೆ ನೀಡಿದ್ದರು. ಇದೊಂದು ಗಂಭೀರ ಪ್ರಕರಣವಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿ ಬಡವರಿಂದ ಹಣ ವಸೂಲಿ ಮಾಡುವವರನ್ನ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದೇ ಪ್ರಕರಣ ಕಂಡುಬಂದರೂ, ತಕ್ಷಣ ಕ್ರಮ ಜರುಗಿಸಲು ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ.
ಬಡವರ ಬಳಿ ಲಂಚ ಪಡೆದ ಪ್ರಕರಣದ ಗಂಭೀರತೆಯನ್ನ ಅರಿತ ಆಯುಕ್ತರು ಲಂಚ ಪಡೆದ ಆರೋಪದ ಮೇಲೆ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ಡಾ ರಾಮಚಂದ್ರ ಕೆ.ಸಿ ಅವರನ್ನ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಮಂಜುಳಾ ಎಂಬ 20 ವರ್ಷದ ಮಹಿಳೆಗೆ ಸಿಸೇರಿಯನ್ ಮಾಡಲು ರೂ.15,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಜುಳಾ ಅವರ ಪತಿ ಅಂಗಪ್ಪ ಅವರು, ಲೋಕಾಯುಕ್ತರಲ್ಲಿ ದೂರು ಸಲ್ಲಿಸಿದ್ದರು.
ಸಿಸೇರಿಯನ್ ಮುಗಿದು ಹೆಣ್ಣು ಮಗು ಜನಿಸಿದ ನಂತರ ಅಂಗಪ್ಪ ಅವರು, 10,000 ಹಣವನ್ನು ಆಸ್ಪತ್ರೆಯ ವಾರ್ಡ್ ಬಾಯ್ ವಾಹಿದ್ ಎಂಬುವವರಿಗೆ ನೀಡಿದ್ದರು. ವೈದ್ಯ ರಾಮಚಂದ್ರ ಕೆ.ಸಿ ಸೂಚನೆ ಮೇರೆಗೆ ಹಣ ಪಡೆದಿರುವುದಾಗಿ ವಾರ್ಡ್ ಬಾಯ್ ಲೋಕಾಯುಕ್ತರ ತನಿಖೆಯಲ್ಲಿ ಹೇಳಿಕೆ ನೀಡಿದ್ದರು.
ಇನ್ನೂ ಲೋಕಾಯುಕ್ತ ಪೊಲೀಸರು ಪರಿಶೀಲನೆಗೆ ತೆರಳಿದಾಗ ಲಂಚ ಪಡೆದುಕೊಂಡಿರುವ ಆರೋಪ ಸಾಬೀತಾಗಿರುತ್ತದೆ. ವೈದ್ಯರ ವಿರುದ್ಧ ಸು-ಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು. ವೈದ್ಯರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications