ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಪದಾಧಿಕಾರಿಗಳ ನೇಮಕ

ಬೆಂಗಳೂರು, ಜೂನ್ 12 : ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಪದಾಧಿಕಾರಿಗಳ ನೇಮಕವಾಗಿದೆ. ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ರಾಷ್ಟ್ರೀಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ಮಂಗಳವಾರ ನೂತನ ಪದಾಧಿಕಾರಿಗಳ ಪಟ್ಟಿಗೆ ಒಪ್ಪಿಗೆ ನೀಡಿದ್ದಾರೆ. ಶಾಸಕರು, ಸಂಸದರು, ಮಾಜಿ ಐಪಿಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ಗಣ್ಯರನ್ನು ಪದಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ.

2019ರ ಮಾರ್ಚ್‌ನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದರು.

Office beers appointed for All India Veerashaiva Mahasabha

ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಕಚೇರಿ ಇದೆ. ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷರು ಎನ್.ತಿಪ್ಪಣ್ಣ.

ನೂತನ ಪದಾಧಿಕಾರಿಗಳ ಪಟ್ಟಿ

* ಹಿರಿಯ ಉಪಾಧ್ಯಕ್ಷ : ಎನ್.ತಿಪ್ಪಣ್ಣ

* ಉಪಾಧ್ಯಕ್ಷರು : ಡಾ.ಪ್ರಭಾಕರ ಕೋರೆ, ವೀರಣ್ಣ ಚರಂತಿಮಠ, ಎ.ಎಸ್.ವೀರಣ್ಣ, ಗುರಮ್ಮ ಸಿದ್ದರೆಡ್ಡಿ, ಶಂಕರ ಬಿದರಿ, ಶಾಸಕ ವೆಂಕಟರೆಡ್ಡಿ ಮುದ್ನಾಳ, ಬಿ.ಎಸ್.ಸಚ್ಚಿದಾನಂದ ಮೂರ್ತಿ, ಅಣಬೇರು ರಾಜಣ್ಣ, ಶಿವಾನಂದ ಅಂಬಡಗಟ್ಟಿ, ಎಸ್‌.ಎಸ್.ಗಣೇಶ್, ಮಧುರಾ ಅಶೋಕ್ ಕುಮಾರ್, ಬಾನುರಾವ್ ತುಂಬಾ,

* ಪ್ರಧಾನ ಕಾರ್ಯದರ್ಶಿ : ಈಶ್ವರ ಖಂಡ್ರೆ

* ಕಾರ್ಯದರ್ಶಿ : ಜಿ.ಗುರುಬಸಪ್ಪ, ಕಲ್ಯಾಣರಾವ್ ಜಿ.ಮುಚಳಂಬೆ, ಎಚ್.ಎಂ.ರೇಣುಕಾ ಪ್ರಸನ್ನ

* ಖಜಾಂಚಿ : ಕೆ.ಎನ್.ಜಯಲಿಂಗಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+