ಅಧಿಕಾರಿಗಳ ವರ್ಗಾವಣೆ: ಎಚ್ಡಿಕೆ ಯೇ ಬಾಸ್, ಮೈತ್ರಿಗೆ ಬೀಳಲಿದೆಯೇ ಪೆಟ್ಟು?
Recommended Video

ಬೆಂಗಳೂರು, ಅಕ್ಟೋಬರ್ 18: ಅಧಿಕಾರಿಗಳ ವರ್ಗಾವಣೆ ಈಗಾಗಲೇ ಮೈತ್ರಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಮೂಡಲು ಕಾರಣವಾಗಿದೆ ಅಂತಹುದರಲ್ಲಿ ಸಿಎಂ ಕುಮಾರಸ್ವಾಮಿ ತಳೆದಿರುವ ಏಕಪಕ್ಷೀಯ ನಿರ್ಧಾರ ದೋಸ್ತಿ ಪಕ್ಷಗಳ ನಡುವೆ ಕಂದರ ನಿರ್ಮಿಸುವ ಮುನ್ಸೂಚನೆ ನೀಡಿದೆ.
ಇನ್ನು ಮುಂದೆ ಯಾವುದೇ ಇಲಾಖೆಯ ಅಧಿಕಾರಿಗಳ ವರ್ಗಾವಣೆಯನ್ನು ಸಿಎಂ ಅವರು ಮಾಡಬಹುದಾಗಿದ್ದು, ಈ ವಿಷಯದಲ್ಲಿ ಯಾವುದೇ ಇಲಾಖೆಯ ಸಚಿವರುಗಳು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸರ್ಕಾರದ ಕಾರ್ಯದರ್ಶಿ ಎಲ್ಲ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಿದ್ದಾರೆ.
ನಿನ್ನೆಯಷ್ಟೆ ಈ ರೀತಿಯ ಸುತ್ತೋಲೆಯೊಂದು ಸಿಎಂ ಅವರ ಸೂಚನೆ ಮೇರೆಗೆ ಹೊರಡಿಸಲಾಗಿದ್ದು, ಈಗಾಗಲೇ ಹಲವು ಕಾಂಗ್ರೆಸ್ ಮಂತ್ರಿಗಳು ಈ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ಸಮನ್ವಯ ಸಮಿತಿ ನಿರ್ಣಯ ಗಾಳಿಗೆ
ಸಮನ್ವಯ ಸಮಿತಿಯಲ್ಲಿ ಚರ್ಚಿಸಿದ ಬಳಿಕವೇ ಅಧಿಕಾರಿಗಳ ವರ್ಗಾವಣೆ ಮಾಡಬೇಕು ಎಂದು ಈ ಹಿಂದೆ ನಿರ್ಣಯ ಕೈಗೊಳ್ಳಕಾಗಿತ್ತು. ಆದರೆ ಕುಮಾರಸ್ವಾಮಿ ಅವರು ಆ ನಿಯಮ ಮೀರಿ ಏಕಪಕ್ಷೀಯ ನಿರ್ಣಯ ಕೈಗೊಳ್ಳಲು ಮುಂದಾಗಿದ್ದಾರೆ ಹಾಗೂ ಇದಕ್ಕೆ ಯಾರೂ ಆಕ್ಷೇಪ ಎತ್ತುವಂತಿಲ್ಲ ಎಂದೂ ಆಗ್ರಹಪಡಿಸಿದ್ದಾರೆ.

ಎಲ್ಲಿಗೆ ಬೇಕಾದರೂ ಯಾವಾಗ ಬೇಕಾದರೂ ವರ್ಗ
ಐಎಎಸ್, ಐಪಿಎಸ್, ಕೆಎಸ್, ಮುಖ್ಯ ಎಂಜಿನಿಯರ್ಗಳು ಸೇರಿದಂತೆ ಎಲ್ಲ ಇಲಾಖೆಯ ಮುಖ್ಯ ಅಧಿಕಾರಿಗಳನ್ನು ಕುಮಾರಸ್ವಾಮಿ ಅವರು ಎಲ್ಲಿಗೆ ಬೇಕಾದರೂ, ಯಾವಾಗ ಬೇಕಾದರೂ ವರ್ಗಾವಣೆ ಮಾಡಬಹುದಾಗಿದೆ. ಹೀಗೆಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಯಾವುದೇ ನಿಗಮ, ಮಂಡಳಿ, ಪ್ರಾಧಿಕಾರಕ್ಕಾದರೂ ವರ್ಗ
ಇನ್ನು ಮುಂದೆ ಯಾವುದೇ ಯಾವುದೇ ಅಧಿಕಾರಿಗಳನ್ನು ಯಾವುದೇ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆ ಅಧೀನ ಹುದ್ದೆ, ಪ್ರಾಧಿಕಾರದ ಹುದ್ದೆಗಳಿಗೆ ನೇರವಾಗಿ ಸಿಎಂ ಅವರೇ ಸ್ಥಳ ನಿಯೋಜನೆ ಮಾಡಬಹುದು. ಹೀಗೆ ಸಿಎಂ ಇಂದ ಸ್ಥಳ ನಿಯುಕ್ತಿ ಪಡೆದವರಿಗೆ ಮತ್ತೊಮ್ಮೆ ಯಾವುದೇ ಇಲಾಖೆ ಇಲಾಖೆಯು ಸ್ಥಳ ನಿಯೋಜನೆ ಮಾಡುವಂತಿಲ್ಲ ಎಂದು ಸಹ ಸುತ್ತೋಲೆಯಲ್ಲಿ ನಿಯಮ ಹೇರಲಾಗಿದೆ.

ವರ್ಗಾವಣೆ ವಿಷಯದಿಂದ ಅಸಮಾಧಾನ ಹುಟ್ಟಿತ್ತು
ಕೆಲವು ತಿಂಗಳುಗಳ ಹಿಂದೆ ಅಷ್ಟೆ ಅಧಿಕಾರಿಗಳ ವರ್ಗಾವಣೆ ಕಾರಣದಿಂದ ಮೈತ್ರಿ ಸರ್ಕಾರದಲ್ಲಿ ಅಸಮಾಧಾನ ಉಲ್ಬಣಿಸಿತ್ತು. ಕಾಂಗ್ರೆಸ್ ಮಂತ್ರಿಗಳು ಈ ವಿಷಯವಾಗಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಬಳಿ ದೂರುಗಳನ್ನು ಹೇಳಿದ್ದರು. ಹಾಗಾಗಿ ಸಮನ್ವಯ ಸಮಿತಿಯಲ್ಲಿ ಚರ್ಚಿಸಿದ ನಂತರವೇ ವರ್ಗಾವಣೆ ನಿರ್ಣಯ ಕೈಗೊಳ್ಳಬೇಕೆಂದು ಸಿದ್ದರಾಮಯ್ಯ ತಾಕೀತು ಮಾಡಿದ್ದರು ಹಾಗಿದ್ದರೂ ಸಹ ಈಗ ಕುಮಾರಸ್ವಾಮಿ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ.

ಕಾಂಗ್ರೆಸ್ ಮಂತ್ರಿಗಳ ಅಸಮಾಧಾನ
ಈಗಾಗಲೇ ಈ ಸುತ್ತೋಲೆ ಬಗ್ಗೆ ಯು.ಟಿ.ಖಾದರ್, ಕೃಷ್ಣಬೈರೇಗೌಡ ಸೇರಿದಂತೆ ಹಲವು ಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ಬಳಿ ಮಾತನಾಡುವುದಾಗಿ ಖಾದರ್ ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications