ಕೊಪ್ಪದಲ್ಲಿ ಸಂಭವಿಸಿದ್ದು ಭೂಕಂಪವಲ್ಲ, ಅಧಿಕಾರಿಗಳು ನೀಡಿದ ವರದಿಯಲ್ಲೇನಿದೆ?
ಚಿಕ್ಕಮಗಳೂರು, ಆಗಸ್ಟ್.29: ಕೊಪ್ಪದಲ್ಲಿ ಭಾರೀ ಶಬ್ದಕ್ಕೆ ಜನರು ಬೆಚ್ಚಿಬಿದ್ದ ಘಟನೆ ಇತ್ತೀಚೆಗೆ ಸಂಭವಿಸಿತ್ತು. ಜನರು ಈ ಶಬ್ದ ಕೇಳಿ ಭೂಕಂಪನ ಇರಬಹುದು ಎಂದು ಭಾವಿಸಿದ್ದರು. ಆದರೆ ಇದೀಗ ಇದು ಭೂಕಂಪನ ಅಲ್ಲ, ಅತೀ ಹೆಚ್ಚು ಮಳೆಯಾದಾಗ ಸಂಭವಿಸುವ ಶಬ್ದ ಎಂದು ಗಣಿ ಮತ್ತ ಭೂವಿಜ್ಞಾನ ಅಧಿಕಾರಿಗಳು ವರದಿ ನೀಡಿದ್ದಾರೆ.
2 ರಿಂದ 3 ರೀತಿಯಲ್ಲಿ ಶಬ್ದ ಬರುವ ಸಾಧ್ಯತೆಯಿದ್ದು, ಕಲ್ಲುಗಳ ಮಧ್ಯೆ ನೀರಿನ ಹರಿವಿನಿಂದಲೇ ಭಾರೀ ಶಬ್ದ ಬರುತ್ತಿದೆ ಎನ್ನುವ ವರದಿಯನ್ನು ಅಧಿಕಾರಿಗಳ ತಂಡ ನೀಡಿದೆ.
ಕಳೆದ ತಿಂಗಳಿನಿಂದ ಕೊಗ್ರೆ, ಶಾಂತಿಗ್ರಾಮ, ಅಭಿಕಲ್ಲು, ಅನಮಕ್ಕಿ, ಗುಡ್ಡ ಬರಗೋಡು, ನಾಯಕರ ಕಟ್ಟೆ ಗ್ರಾಮದಲ್ಲಿ ಭಾರಿ ಶಬ್ದ ಕೇಳಿ ಬರುತ್ತಿತ್ತು. ಹೆಚ್ಚಿನ ತನಿಖೆ ನಡೆಸಿದರೆ ಶಬ್ದಕ್ಕೆ ಸಂಪೂರ್ಣ ಕಾರಣ ಹಾಗೂ ಮಾಹಿತಿ ಸಿಗಲಿದೆ ಎನ್ನುವುದು ತಂಡದ ಅಭಿಪ್ರಾಯವಾಗಿತ್ತು.

ಆಗಸ್ಟ್ 14 ರಂದು ಜಿಲ್ಲೆಯ ಕೊಪ್ಪ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿದ್ದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಭೂಮಿಯೊಳಗಿಂದ ಭಾರೀ ಶಬ್ದ ಕೇಳಿ ಬರುತ್ತಿದ್ದು, ಕೆಲ ಮನೆಗಳು ಬಿರುಕು ಬಿಟ್ಟಿದ್ದವು. ಕೊಗ್ರೆ ಹಾಗೂ ಸುತ್ತಲ ಗ್ರಾಮಗಳಲ್ಲಿ ಪದೇಪದೆ ಭೂಮಿಯೊಳಗಿಂದ ಶಬ್ದ ಕೇಳಿ ಬರುತ್ತಿದ್ದು, ಭೂಮಿ ಕಂಪಿಸಿದ ಅನುಭವವಾಗುತ್ತಿತ್ತು.

ಈ ಹಿಂದೆಯೂ ಕೆಲ ಮನೆಗಳು ಬಿರುಕು ಬಿಟ್ಟಿದ್ದವು. ನಿರಂತರ ಶಬ್ದ, ಭೂಕುಸಿತದಿಂದ ಜನ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications