ಕೊಪ್ಪದಲ್ಲಿ ಸಂಭವಿಸಿದ್ದು ಭೂಕಂಪವಲ್ಲ, ಅಧಿಕಾರಿಗಳು ನೀಡಿದ ವರದಿಯಲ್ಲೇನಿದೆ?
ಚಿಕ್ಕಮಗಳೂರು, ಆಗಸ್ಟ್.29: ಕೊಪ್ಪದಲ್ಲಿ ಭಾರೀ ಶಬ್ದಕ್ಕೆ ಜನರು ಬೆಚ್ಚಿಬಿದ್ದ ಘಟನೆ ಇತ್ತೀಚೆಗೆ ಸಂಭವಿಸಿತ್ತು. ಜನರು ಈ ಶಬ್ದ ಕೇಳಿ ಭೂಕಂಪನ ಇರಬಹುದು ಎಂದು ಭಾವಿಸಿದ್ದರು. ಆದರೆ ಇದೀಗ ಇದು ಭೂಕಂಪನ ಅಲ್ಲ, ಅತೀ ಹೆಚ್ಚು ಮಳೆಯಾದಾಗ ಸಂಭವಿಸುವ ಶಬ್ದ ಎಂದು ಗಣಿ ಮತ್ತ ಭೂವಿಜ್ಞಾನ ಅಧಿಕಾರಿಗಳು ವರದಿ ನೀಡಿದ್ದಾರೆ.
2 ರಿಂದ 3 ರೀತಿಯಲ್ಲಿ ಶಬ್ದ ಬರುವ ಸಾಧ್ಯತೆಯಿದ್ದು, ಕಲ್ಲುಗಳ ಮಧ್ಯೆ ನೀರಿನ ಹರಿವಿನಿಂದಲೇ ಭಾರೀ ಶಬ್ದ ಬರುತ್ತಿದೆ ಎನ್ನುವ ವರದಿಯನ್ನು ಅಧಿಕಾರಿಗಳ ತಂಡ ನೀಡಿದೆ.
ಕಳೆದ ತಿಂಗಳಿನಿಂದ ಕೊಗ್ರೆ, ಶಾಂತಿಗ್ರಾಮ, ಅಭಿಕಲ್ಲು, ಅನಮಕ್ಕಿ, ಗುಡ್ಡ ಬರಗೋಡು, ನಾಯಕರ ಕಟ್ಟೆ ಗ್ರಾಮದಲ್ಲಿ ಭಾರಿ ಶಬ್ದ ಕೇಳಿ ಬರುತ್ತಿತ್ತು. ಹೆಚ್ಚಿನ ತನಿಖೆ ನಡೆಸಿದರೆ ಶಬ್ದಕ್ಕೆ ಸಂಪೂರ್ಣ ಕಾರಣ ಹಾಗೂ ಮಾಹಿತಿ ಸಿಗಲಿದೆ ಎನ್ನುವುದು ತಂಡದ ಅಭಿಪ್ರಾಯವಾಗಿತ್ತು.

ಆಗಸ್ಟ್ 14 ರಂದು ಜಿಲ್ಲೆಯ ಕೊಪ್ಪ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿದ್ದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಭೂಮಿಯೊಳಗಿಂದ ಭಾರೀ ಶಬ್ದ ಕೇಳಿ ಬರುತ್ತಿದ್ದು, ಕೆಲ ಮನೆಗಳು ಬಿರುಕು ಬಿಟ್ಟಿದ್ದವು. ಕೊಗ್ರೆ ಹಾಗೂ ಸುತ್ತಲ ಗ್ರಾಮಗಳಲ್ಲಿ ಪದೇಪದೆ ಭೂಮಿಯೊಳಗಿಂದ ಶಬ್ದ ಕೇಳಿ ಬರುತ್ತಿದ್ದು, ಭೂಮಿ ಕಂಪಿಸಿದ ಅನುಭವವಾಗುತ್ತಿತ್ತು.

ಈ ಹಿಂದೆಯೂ ಕೆಲ ಮನೆಗಳು ಬಿರುಕು ಬಿಟ್ಟಿದ್ದವು. ನಿರಂತರ ಶಬ್ದ, ಭೂಕುಸಿತದಿಂದ ಜನ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications