ಬೆಲೆ ಏರಿಕೆ : 6 ಕೋಟಿ ಮೌಲ್ಯದ ತೊಗರಿ ಬೇಳೆ ವಶಕ್ಕೆ
ಬೆಂಗಳೂರು, ಅಕ್ಟೋಬರ್ 22 : ಮಾರುಕಟ್ಟೆಯಲ್ಲಿ ದ್ವಿ-ದಳ ಧಾನ್ಯಗಳ ದರಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂಚನೆಯಂತೆ ರಾಜ್ಯದ ಕೆಲವು ಪ್ರಮುಖ ನಗರಗಳಲ್ಲಿ ಕಳೆದ ಎರಡು ದಿನಗಳಿಂದ ಗೋದಾಮುಗಳ ಮೇಲೆ ನಡೆದ ದಾಳಿಯಲ್ಲಿ ಅಕ್ರಮ ದಾಸ್ತಾನಾಗಿದ್ದ 4,800 ಕ್ವಿಂಟಾಲ್ ತೊಗರಿ ಬೇಳೆಯನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ದಿನೇಶ್ ಗುಂಡೂರಾವ್ ಅವರು 'ಎರಡು ದಿನದಲ್ಲಿ ಸುಮಾರು 6 ಕೋಟಿ ಮೌಲ್ಯದ ತೊಗರಿ ಬೇಳೆಯನ್ನು ವಶಪಡಿಸಿಕೊಳ್ಳಲಾಗಿದೆ' ಎಂದರು.[ತೊಗರಿ ಬೇಳೆಗೆ ಬಂಗಾರದ ಬೆಲೆ ಬರಲು ಕಾರಣವೇನು?]

'ಕೇಂದ್ರ ಸರ್ಕಾರ ಹೊರಡಿಸಿರುವ ಸೂಚನೆಯಂತೆ ಸಗಟು ಮಾರಾಟಗಾರರು ಹಾಗೂ ಮಾಲ್ಗಳಲ್ಲಿ ಗರಿಷ್ಠ 2 ಸಾವಿರ ಕ್ವಿಂಟಾಲ್ ಗಿಂತಲೂ ಹೆಚ್ಚು ಬೇಳೆ ಕಾಳುಗಳನ್ನು ದಾಸ್ತಾನು ಮಾಡುವಂತಿಲ್ಲ. ಈ ಮಾರ್ಗ ಸೂಚಿಯ ಆಧಾರದ ಮೇಲೆಯೇ ದಾಳಿ ನಡೆಸಲಾಗಿದೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು. [ತೊಗರಿ ಬೇಳೆ ಪ್ರತಿ ಕೆ.ಜಿಗೆ 110 ರು ಮಾತ್ರ]
'ಮಂಗಳವಾರ ಆರಂಭವಾದ ಮಳಿಗೆಗಳ ಮೇಲಿನ ದಾಳಿಯಲ್ಲಿ ಮೈಸೂರು ನಗರದಲ್ಲಿ 3,600 ಕ್ವಿಂಟಾಲ್ ಮತ್ತು ಬೀದರ್ ನಗರದಲ್ಲಿ 1,200 ಕ್ವಿಂಟಾಲ್ ತೊಗರಿ ಬೇಳೆ ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯು ನಿರಂತರವಾಗಿ ಮುಂದುವರೆಯಲಿದೆ' ಎಂದು ಸಚಿವರು ತಿಳಿಸಿದರು.
'ದಾಳಿಯ ವೇಳೆ ವಶಪಡಿಸಿಕೊಂಡಿರುವ ದ್ವಿ-ದಳ ಧಾನ್ಯಗಳನ್ನು ಹರಾಜು ಮಾಡಿ, ಸ್ವೀಕೃತವಾಗುವ ಹಣವನ್ನು ಖಜಾನೆಯಲ್ಲಿ ಜಮೆ ಮಾಡಲಾಗುವುದು. ಎಲ್ಲಾ ಜಿಲ್ಲಾಧಿಕಾರಿಗಳು ನೋಡೆಲ್ ಅಧಿಕಾರಿಗಳಾಗಿರುವುದಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೇ ಅಕ್ರಮ ದಾಸ್ತಾನು ಪತ್ತೆ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಲು ನಿರ್ದೇಶನ ನೀಡಲಾಗಿದೆ' ಎಂದರು.
'ಬೆಂಗಳೂರು, ಮೈಸೂರು, ಮಂಗಳೂರು, ಕಾರವಾರ, ಬೀದರ್, ಕಲಬುರಗಿಯಲ್ಲಿ ದಾಳಿ ಮುಂದುವರೆಯುತ್ತವೆ. ಬೇರೆ ಬೇರೆ ಪ್ರದೇಶಗಳಿಂದ ಬಂದರು ಮೂಲಕ ದ್ವಿ-ದಳ ಧಾನ್ಯಗಳನ್ನು ಭಾರೀ ಪ್ರಮಾಣದಲ್ಲಿ ಖರೀದಿಸಿ, ದಾಸ್ತಾನು ಮಾಡುವವರ ಮೇಲೂ ಆಹಾರ ಇಲಾಖೆ ನಿಗಾ ಇಡಲಿದೆ' ಎಂದು ಸಚಿವರು ಹೇಳಿದರು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Gruha Arogya Scheme: ಗೃಹ ಆರೋಗ್ಯ ಯೋಜನೆ ವರದಿ ಶಾಕ್: ಗ್ರಾಮೀಣ ಪ್ರದೇಶದಲ್ಲೇ ಈ ಆರೋಗ್ಯ ಸಮಸ್ಯೆ ಹೆಚ್ಚು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications