ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಅಧಿಕಾರಿಗಳ ಅಮಾನತು, ವರ್ಗಾವಣೆ ಖಂಡಿತ: ಪ್ರಿಯಾಂಕ್ ಖರ್ಗೆ ಎಚ್ಚರಿಕೆ
ಕಲಬುರ್ಗಿ, ಆಗಸ್ಟ್ 04: ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಅಧಿಕಾರಿಗಳಿಗೆ ಸಸ್ಪೆಂಡ್ ಅಥವಾ ವರ್ಗಾವಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಚಿತ್ತಾಪುರ ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಅವರು, ಈ ಹಿಂದೆ ಕೆಲ ಅಧಿಕಾರಿಗಳು ಮೈಮರೆತಿದ್ದರು. ಆದರೆ, ಈಗ ಆ ತರ ಎಲ್ಲ ನಡೆಯುವುದಿಲ್ಲ. ನೀವು ಸರಿಯಾಗಿ ಕೆಲಸ ಮಾಡದಿದ್ದರೇ ನಾನೇ ನಿಮ್ಮನ್ನು ವರ್ಗಾವಣೆ ಮಾಡಿಸುತ್ತೇನೆ. ಇದನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಅನುಕೂಲವಾಗುವಂತ ಆಡಳಿತ ನೀಡಲು ನೀವು ಸಹಕಾರ ನೀಡಬೇಕು.

ಅನುದಾನ ತರುವುದು ನನಗೆ ಬಿಡಿ ಆದರೆ ಈಗಾಗಲೇ ಬಿಡುಗಡೆಯಾದ ಅನುದಾನ ಖರ್ಚು ಮಾಡುವುದರ ಕಡೆ ನೀವು ಗಮನಕೊಡಿ, ನೀವು ಅನುದಾನ ಖರ್ಚು ಮಾಡದಿದ್ದರೆ ಮುಂದಿನ ಆರ್ಥಿಕ ವರ್ಷದಲ್ಲಿ ಯಾವ ಇಲಾಖೆ ಅಡಿಯಲ್ಲಿ ನಿಮಗೆ ಅನುದಾನ ಸಿಗುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ಹೇಳಿದರು.
ಕೆಬಿಜೆಎನ್ಎಲ್, ಕೆಎನ್ಎನ್ಎಲ್, ಕೆಆರ್ಐಡಿಎಲ್, ಪಿಆರ್ ಇ, ನಿರ್ಮಿತಿ ಕೇಂದ್ರ, ಆರ್ ಡಿ ಡಬ್ಲ್ಯೂ ಇಲಾಖೆಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲೇಬೇಕು. ಇದು ನಿಮಗೆ ನೀಡುತ್ತಿರುವ ಎಚ್ಚರಿಕೆಯಾಗಿದೆ ಇದನ್ನು ಮತ್ತೊಮ್ಮೆ ಸರಿಯಾಗಿ ಅರಿತುಕೊಂಡು ಕೆಲಸ ಮಾಡಿ. ಅಧಿಕಾರಿಗಳು ಕೈಗೊಂಡ ಕಾಮಗಾರಿಗಳ ಕುರಿತು ಸಮಗ್ರ ಚರ್ಚೆಗೆ ಪ್ರತಿ ತಿಂಗಳು 5 ನೇ ತಾರೀಖು ಸಭೆ ನಡೆಸಿ ಅದರ ಅನುಪಾಲನಾ ವರದಿ 7 ನೇ ತಾರೀಖು ನನಗೆ ತಲುಪಿಸಬೇಕು ಈ ಬಗ್ಗೆ ಕಚೇರಿ ಆದೇಶ ಹೊರಡಿಸುವಂತೆ ತಹಸೀಲ್ದಾರ ಶಾವಲಿ ಅವರಿಗೆ ಸೂಚಿಸಿದರು.
ಅರಣ್ಯ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡು, ಸಾರ್ವಜನಿಕ ಸ್ಥಳ, ಶಾಲೆಗಳ ಹಾಗೂ ಸರ್ಕಾರಿ ಕಚೇರಿಗಳ ಆವರಣಗಳಲ್ಲಿ ಸಸಿ ನೆಡಬೇಕು. ಪದೇ ಪದೇ ಹೇಳಿದರೂ ಕೂಡಾ ಪಟ್ಟಣದಲ್ಲಿ ಒಂದೇ ಒಂದು ಸ್ವಚ್ಛವಾದ ಉದ್ಯಾನವನ ನಿರ್ಮಿಸಲಾಗಿಲ್ಲ. ಈ ಬಗ್ಗೆ ಕೂಡಲೇ ಈ ಎರಡು ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿ ಮಾಡಬೂಳ ಬಳಿ ಅಂದಾಜು ರೂ 29 ಕೋಟಿ ವೆಚ್ಚದಲ್ಲಿ ಪ್ರಾಣಿ ಸಂಗ್ರಹಾಲಯ ನಿರ್ಮಾಣಕ್ಕಾಗಿ ನಿರ್ಧರಿಸಲಾಗಿತ್ತು. ಈ ಕೂಡಲೇ ಪ್ರಸ್ತಾವನೆ ಸಲ್ಲಿಸಿ ಎಂದು ಅರಣ್ಯಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಚಿತ್ತಾಪುರ ಪಟ್ಟಣ ಹಾಗೂ ಗ್ರಾಮೀಣ ಭಾಗಗಳ ಅಭಿವೃದ್ದಿಗಾಗಿ ನೀಲನಕ್ಷೆ ತಯಾರಿಸಿಕೊಂಡು ಬನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಗೆ ಬಾರದ ಅಧಿಕಾರಿಗಳ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು ಅಂತವರ ವಿರುದ್ದ ಕಾರಣ ಕೇಳಿ ನೋಟೀಸು ಜಾರಿ ಮಾಡುವಂತೆ ಹೇಳಿ, ಪಿಡಿಓಗಳ ದುರ್ವರ್ತನೆ ಸೇರಿದಂತೆ ಕೆಳಹಂತದ ಅಧಿಕಾರಿಗಳ ಬೇಜವ್ದಾರಿತನವನ್ನು ಸಹಿಸಲಾಗದು ಅದಕ್ಕೆ ತಾಪಂ ಇಓಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಕಾನೂನು ಸುವ್ಯವಸ್ಥೆ ಕೈ ಜಾರದಂತೆ ನೋಡಿಕೊಳ್ಳಬೇಕು. ಅಕ್ರಮ ಮರಳು ಹಾಗೂ ಅಕ್ಕಿ ಮಾರಾಟಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು. ರೌಡಿಗಳ ನಿಗ್ರಹ ಮಾಡಬೇಕು. ಸಮಾಜಘಾತುಕ ಶಕ್ತಿಗಳನ್ನು ಕಾನೂನುಬದ್ದವಾಗಿ ಮಟ್ಟಹಾಕಬೇಕು. ಗಾಂಜಾ ಚಿಂಚೋಳಿ ಕಡೆಯಿಂದ ಸರಬರಾಜು ಆಗುತ್ತಿದೆ ಎಂದು ಮಾಹಿತಿ ಇದೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಕ್ರಮ ಮದ್ಯ ಮಾರಾಟ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕಿರಾಣ ಅಂಗಡಿಗಳಲ್ಲಿ ದಾಭಾಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅವಧಿಗೆ ಮೀರಿದ ಸಮಯದವರೆಗೆ ದಾಭಾಗಳು ತೆಗೆದಿರುತ್ತವೆ.ಈ ಬಗ್ಗೆ ಅಬಕಾರಿ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಸಚಿವರು ಬೇರೆ ಜಿಲ್ಲೆಯವರು ಎಷ್ಟಾದರೂ ಮದ್ಯ ಮಾರಾಟ ಮಾಡಲಿ, ಚಿತ್ತಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಮಾರಾಟ ಮಾಡಲು ಅನುವು ಮಾಡಿಕೊಡಬೇಡಿ ಎಂದು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications