Government Employees: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಹಳೆ ಪಿಂಚಣಿ ಯೋಜನೆ ಜಾರಿ ಬಗ್ಗೆ ಸದನದಲ್ಲಿ ಚರ್ಚೆಯಾಗಿದ್ದೇನು?
ಬೆಂಗಳೂರು, ಡಿಸೆಂಬರ್ 11: ಕರ್ನಾಟಕ ಸರಕಾರಿ ನೌಕರರ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ನೀಡದ ಭರವಸೆಯಂತೆ ಹೊಸ ಪಿಂಚಣಿ ಯೋಜನೆಯನ್ನ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
2006ರ ಎಪ್ರಿಲ್ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಈ ಹಿಂದೆ ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಿದೆ. ಇದೀಗ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ದು ಮಾಡಿ, ಹಳೆಯ ಪಿಂಚಣಿ ಯೋಜನೆ ಜಾರಿ ಬಗ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ವೇದವ್ಯಾಸ್ ಕಾಮತ್ ಅವರು ನೂತನ ಪಿಂಚಣಿಗೆ ಒಳಪಡುವ ಇಲಾಖಾವಾರು ನೌಕರರ ಮಾಹಿತಿಯನ್ನ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎನ್ ಪಿ ಎಸ್ ನೌಕರರ ಸಂಖ್ಯೆ:2,88,054 ಇಲಾಖಾವಾರು ನೌಕರರ ವಿವರವನ್ನು ಅನುಬಂಧದಲ್ಲಿ ನೀಡಲಾಗಿದೆ.
ಇನ್ನೂ ದಿನಾಂಕ 01.04.2026 ರಿಂದ ನೇಮಕಾತಿ ಹೊಂದಿದ ಸರ್ಕಾರಿ ಸಿಬ್ಬಂದಿಗಳಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಸರ್ಕಾರಿ ನೌಕರರನ್ನು ಹಿಂದಿನ ಹಳೆ ಪಿಂಚಣೀ ಯೋಜನೆಗೆ ಒಳಪಡಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು ಎಂದು ವೇದವ್ಯಾಸ್ ಕಾಮತ್ ಅವರು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಯೋಜನೆಗೆ ಸೂಕ್ತ ಬದಲಾವಣೆ / ಮಾರ್ಪಾಡು ಮಾಡಲು ಸಮಗ್ರವಾಗಿ ಪರಿಶೀಲಿಸಲು ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 11.12.20180 : 01.03.2023 ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ದಿನಾಂಕ: 16.08.2024ರಲ್ಲಿ ಪುನರ್ ರಚಿಸಿ ಆದೇಶಿಸಲಾಗಿರುತ್ತದೆ. ಸಮಿತಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ಧು ಮಾಡಿ ಹಳೆ ಪಿಂಚಣಿ (Old pension scheme) ಜಾರಿ ಮಾಡಲು ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ವರದಿಯನ್ನು ಒಂದು ವಾರದೊಳಗಾಗಿ ಸರ್ಕಾರಕ್ಕೆ ಸಲ್ಲಿಸುವ ಭರವಸೆ ನೀಡಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಹೋಗಲಾಡಿಸಿ, ಈ ಹಿಂದಿನ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಸಂಬಂಧ, ಒಪಿಎಸ್ ಜಾರಿಗೊಳಿಸಿರುವ ದೇಶದ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸಮಿತಿ ರಚಿಸಿತ್ತು.
ಸಮಿತಿಯು ಈ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನೌಕರರ ಸಂಘ ಒತ್ತಾಯಿಸುತ್ತಲೆ ಬಂದಿತ್ತು. ಕಳೆದ ಡಿ. 03 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದ ನಿಯೋಗವು ಎನ್ಪಿಎಸ್ ಸಮಿತಿಯ ಸದಸ್ಯರು ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಎಂ.ಟಿ. ರೇಜು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ, ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ಒಂದು ವಾರದೊಳಗೆ ಸಮಿತಿಯು ಸಭೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿರುತ್ತಾರೆ.
-
ಡಿಕೆಶಿ ನನ್ನದು ಹಾಲು-ಜೇನಿನಂತಹ ಸಂಬಂಧ, ಹುಳಿ ಹಿಂಡಲು ಬರಬೇಡಿ: ಅಶೋಕ್-ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್ -
ಕರ್ನಾಟಕ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ಚರ್ಚೆ ಜೋರು: ಗೃಹ ಸಚಿವರು ಹೇಳಿದ್ದೇನು? -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು












Click it and Unblock the Notifications