Government Employees: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: OPS ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು, ಜೂನ್ 07: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಕೊನೆಗೂ ಗುಡ್ ನ್ಯೂಸ್ ಒಂದನ್ನ ನೀಡಿದೆ. ಒಪಿಎಸ್ ಪ್ರಸ್ತಾವನೆ ಪರಿಶೀಲಿಸಲು ರಾಜ್ಯ ಸರ್ಕಾರವು 3 ತಂಡ ರಚನೆ ಮಾಡಿ ಆದೇಶ ಹೊರಡಿಸಿದೆ.
ದಿನಾಂಕ: 24.1.2024ರ ಆದೇಶದನ್ವಯ ಒಪಿಎಸ್ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ಈ ಕೆಳಕಂಡ ಅಧಿಕಾರಿ/ನೌಕರರನ್ನೊಳಗೊಂಡಂತೆ ಮೂರು ತಂಡಗಳಾಗಿ ರಚಿಸಿ ಕಾರ್ಯ ಹಂಚಿಕೆ ಮಾಡಿದೆ ಹಾಗೂ ಸದರಿ ಅಧಿಕಾರಿ ಹಾಗೂ ನೌಕರರು ಪ್ರತಿ ದಿನ ಅಪರಾಹ್ನ ಕಡ್ಡಾಯವಾಗಿ ಹಾಜರಾಗಿ ದಿನಾಂಕ:24.1.2024ರ ಆದೇಶದನ್ವಯ ಒಪಿಎಸ್ಗೆ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ಆದೇಶಿಸಿದೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದಂತೆ, 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
* 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ, ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
* ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು
* ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪುಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.
* 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ನಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು, ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು ಎಂಬುದಾಗಿ ಎಂದು ಈ ಹಿಂದೆ ತಿಳಿಸಿದ್ದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications