ಶ್ರೀಗಳ ಆಶೀರ್ವಾದದಿಂದ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವಂತಾಗಲಿ: ಪಿ ವಿ ಸಿಂಧು
ಬೆಂಗಳೂರು, ಸೆ 8: ರಿಯೋ ಒಲಿಂಪಿಕ್ಸ್ ನಲ್ಲಿ ರಜತ ಪದಕ ಪಡೆದ ಪಿ ವಿ ಸಿಂಧು, ಅವರ ಕೋಚ್ ಪದ್ಮಭೂಷಣ ಗೋಪಿಚಂದ್ ಮತ್ತು ಅರವಿಂದ್ ಭಟ್ ಗುರುವಾರ (ಸೆ 8) ರಾಮಚಂದ್ರಾಪುರದ ಶಾಖಾಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಶ್ರೀಗಳ ಅನುಗ್ರಹ ಪಡೆದು ಮಾತನಾಡಿದ ಪಿ ವಿ ಸಿಂಧು, ರಾಘವೇಶ್ವರ ಶ್ರೀಗಳ ಆಶೀರ್ವಾದ ದೊರಕಿದ್ದು ತುಂಬಾ ಖುಷಿ ಆಗಿದೆ, ಶ್ರೀಗಳ ಆಶೀರ್ವಾದದಿಂದ ಮುಂದಿನ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವಂತಾಗಲಿ ಎಂದು ಹೇಳಿದ್ದಾರೆ. (ಸಾಕ್ಷಿ ಮಲಿಕ್ ವರಿಸಲಿದ್ದಾರೆ ಈ ಕುಸ್ತಿ ಪಟುವನ್ನು)

ಕ್ರೀಡಾಕೂಟಕ್ಕೆ ತೆರಳುವಾಗ ಪ್ರತಿ ಬಾರಿಯೂ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದೆ, ಶ್ರೀಗಳಿಂದ ಪ್ರೇರಣೆ ಪಡೆದಿದ್ದೇನೆ. ಗೋಸಂಪತ್ತು ಇಂದು ಅವಸಾನದ ಹಾದಿಯಲ್ಲಿದ್ದು, ಗೋವಿನ ಕುರಿತಾಗಿ ಶ್ರೀಮಠದ ಆಂದೋಲನ ಶ್ಲಾಘನೀಯ ಎಂದು ಪದ್ಮಭೂಷಣ ಗೋಪಿಚಂದ್ ಸಂತೋಷ ವ್ಯಕ್ತ ಪಡಿಸಿದ್ದಾರೆ.
ದೇಶಕ್ಕೆ ಗೌರವ ತಂದು ಕೊಟ್ಟವರು ಶ್ರೀಮಠಕ್ಕೆ ಆಗಮಿಸಿರುವುದು ಸಂತಸದ ವಿಚಾರ, ಇವರುಗಳಲ್ಲಿರುವ ಸರಳತೆ, ವಿನಯ ಶ್ಲಾಘನೀಯ. ಸಿಂಧು, ಗೋಪೀಚಂದ್ ಮತ್ತು ಅರವಿಂದ್ ಭಟ್ ತಮ್ಮ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಿ, ದೇಶದ ಗೌರವವನ್ನು ಮತ್ತಷ್ಟು ಹೆಚ್ಚಿಸಲಿ ಎಂದು ರಾಘವೇಶ್ವರ ಶ್ರೀಗಳು ಆಶೀರ್ವದಿಸಿದ್ದಾರೆ.
ಗುರುವಾರ ಗೋಚಾತುರ್ಮಾಸ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಮಾತನಾಡುತ್ತಿದ್ದ ಶ್ರೀಗಳು, ಗೋವು ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಅದನ್ನು ಬೀದಿಗೆ ತಳ್ಳುತ್ತೇವೆ.

ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಾಗಿರುವುದು ಮನುಷ್ಯ ಕುಲಕ್ಕೇ ಕಳಂಕ, ದಿಕ್ಕಿಲ್ಲದ ದೇಶೀ ಗೋವುಗಳನ್ನು ಕಾನೂನಿನ್ವಯ ನೀಡಿದರೆ ಅವುಗಳಿಗೆ ಆಶ್ರಯ ಒದಗಿಸಲು ಶ್ರೀಮಠವು ಸಿದ್ದವಿದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಈ ಸಂದರ್ಭದಲ್ಲಿ ಹೇಳಿದರು.
ಕಟುಕರಿಗೆ ಇಂತಹ ಗೋವುಗಳು ಸುಲಭದ ತುತ್ತಾಗಿದ್ದು, ದಿಕ್ಕಿಲ್ಲದ ಗೋವುಗಳಿಗೆ ಶ್ರೀಮಠ ದಿಕ್ಕಾಗಲಿದೆ. ಮುಂದೆ ನಡೆಯಲಿರುವ ಗೋಯಾತ್ರೆಯಲ್ಲಿಯೂ ಈ ಕುರಿತು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ರಾಘವೇಶ್ವರ ಶ್ರೀಗಳು ಹೇಳಿದರು. (ಮೋದಿ ಯೋಜನೆಗೆ ಸಿಂಧು ರಾಯಭಾರಿ)

ತಮ್ಮ ಹೋಟೆಲ್ ನಲ್ಲಿ ತಂಗಿದವರಿಂದ ನಿತ್ಯ ಗೋಪೂಜೆ ಮಾಡಿಸಿ, ವಿಶಿಷ್ಟರೀತಿಯಲ್ಲಿ ಗೋಸೇವೆಯಲ್ಲಿ ತೊಡಗಿಕೊಂಡಿರುವ ಯೋಗೀಶ್ ಭಟ್ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು.
ಶ್ರೀಭಾರತೀಪ್ರಕಾಶನವು ಹೊರತಂದ ಮಂಗಲಪಾಂಡೆ ಕಥಾಧಾರಿತ ಗೋಕಥಾ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಸಾನ್ನಿಧ್ಯ ವಹಿಸಿದ್ದ ಸಂತರು ಹಾಗೂ ಒಲಿಂಪಿಕ್ಸ್ ಪದಕ ವಿಜೇತೆ ಪಿ ವಿ ಸಿಂಧು ಮತ್ತು ಗೋಪಿಚಂದ್ ಲೋಕಾರ್ಪಣೆ ಮಾಡಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications