ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಕಾಂಗ್ರೆಸ್ ಸೋನಿಯಾ ಗಾಂಧಿ ಕಿವಿಮಾತು

By ವಿಕಾಸ್ ನಂಜಪ್ಪ
|
Google Oneindia Kannada News

Recommended Video

ಸೋನಿಯಾ ಗಾಂಧಿಯವರಿಂದ ಕರ್ನಾಟಕ ಕಾಂಗ್ರೆಸ್ ನಾಯಕರಿಗೊಂದು ಕಿವಿಮಾತು | Oneindia Kannada

ಮುಂಬೈ, ಮಾರ್ಚ್ 10: 'ಆತ್ಮವಿಶ್ವಾಸದಿಂದಿರಿ, ಆದರೆ ಅತಿಯಾದ ಆತ್ಮವಿಶ್ವಾಸ ಬೇಡ..' ಹೀಗೊಂದು ಕಿವಿಮಾತನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.

"ಕರ್ನಾಟಕ ರಾಜ್ಯ ನಮ್ಮ ಪಾಲಿಗೆ ಅತೀ ಮುಖ್ಯ. ಇಲ್ಲಿ ಮತ್ತೆ ಅಧಿಕಾರಕ್ಕೆ ಮರಳಲು ನಾವು ನಮ್ಮ ಅತ್ಯುತ್ತಮ ಪ್ರಯತ್ನ ಮಾಡಬೇಕಾಗಿದೆ," ಎಂದು ಇಂಡಿಯಾ ಟುಡೇ ಕಾನ್ಕ್ಲೇವ್ ನಲ್ಲಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಕರ್ನಾಟಕದಲ್ಲಿ ಕಾಂಗ್ರೆಸ್ ನವರು ಈ ವಿಚಾರದಲ್ಲಿ ಆತ್ಮವಿಶ್ವಾಸದಲ್ಲಿದ್ದಾರೆ. ಅತಿಯಾದ ಆತ್ಮವಿಶ್ವಾದಲ್ಲಿರುವುದಕ್ಕಿಂತ ಕೊನೆಯ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವುದು ಉತ್ತಮ ಎಂದು ಅವರು ಕಿವಿಮಾತು ಹೇಳಿದ್ದಾರೆ.

"ನೆಹರೂ-ಗಾಂಧಿ ಅಲ್ಲದವರಿಗೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸಿಕ್ಕುತ್ತಾ?"

On Karnataka polls, Sonia tells Cong to be confident, not over-confident

ಇತ್ತೀಚಿಗಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಫಲಿತಾಂಶ ದಾಖಲಿಸಿದೆ. ರಾಜಸ್ಥಾನದ ಎರಡು ವಿಧಾನಸಭಾ ಸ್ಥಾನಗಳಿಗೆ ಮತ್ತು ಲೋಕಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯನ್ನು ನಾವು ಗೆದ್ದಿದ್ದೇವೆ. ಮಧ್ಯಪ್ರದೇಶದಲ್ಲೂ ನಾವು ಎರಡು ಸ್ಥಾನಗಳನ್ನು ಗೆದಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಇತ್ತೀಚಿನ ಫಲಿತಾಂಶಗಳನ್ನು ಅವರು ವಿಶ್ಲೇಷಿಸಿದ್ದಾರೆ.

English summary
Be confident, but not over-confident was the message to the Karnataka Congress from the former chief of the party, Sonia Gandhi. Karnataka is an important state for us and we have to do our best to return to power, Sonia Gandhi said at the India Today conclave in Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X