Breaking; ಓಣಂ ಊಟ ಸವಿದ ಡಿಕೆಶಿ, ಟ್ವೀಟ್ ಬಾಣ ಬಿಟ್ಟ ಬಿಜೆಪಿ!
ಬೆಂಗಳೂರು, ಸೆಪ್ಟೆಂಬರ್ 09: ಕರ್ನಾಟಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಮುಂದುವರೆದಿದೆ. ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟ್ ಮಾಡಿದ್ದ ಕಾಂಗ್ರೆಸ್ಗೆ ಈಗ ಬಿಜೆಪಿ ತಿರುಗೇಟು ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಓಣಂ ಊಟ ಸವಿದು ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಶುಕ್ರವಾರ ಟ್ವೀಟ್ ಮಾಡಿದೆ.
ಕಾಂಗ್ರೆಸ್ಸಿಗರೇ, ನಮಗೂ ನಿಮ್ಮ ಹಾಗೆಯೇ,
— BJP Karnataka (@BJP4Karnataka) September 9, 2022
"ಜನರು ಸಂಕಷ್ಟದಲ್ಲಿರುವಾಗ ಜವಾಬ್ದಾರಿಯುತ ವಿಪಕ್ಷದ ರಾಜ್ಯ ಅಧ್ಯಕ್ಷನಾಗಿ ಬೆಂಗಳೂರಿನಲ್ಲೇ ಇರಬೇಕಾಗಿತ್ತು. ಆದರೆ ಭಾರತ್ ಜೋಡೋ ಯಾತ್ರೆ, ಹಬ್ಬದೂಟದಲ್ಲಿ ತೊಡಗಿಕೊಂಡಿದ್ದಾರೆ, ಎಂತಹ ಅಪ್ರಬುದ್ಧ ಕೆಪಿಸಿಸಿ ಅಧ್ಯಕ್ಷ" ಎನ್ನಬಹುದು.
ಆದರೆ ನಾವು ಆ ಕೆಲಸ ಮಾಡುವುದಿಲ್ಲ! pic.twitter.com/Ly8cwAmLml
'ಕಾಂಗ್ರೆಸ್ಸಿಗರೇ, ನಮಗೂ ನಿಮ್ಮ ಹಾಗೆಯೇ, ಜನರು ಸಂಕಷ್ಟದಲ್ಲಿರುವಾಗ ಜವಾಬ್ದಾರಿಯುತ ವಿಪಕ್ಷದ ರಾಜ್ಯ ಅಧ್ಯಕ್ಷನಾಗಿ ಬೆಂಗಳೂರಿನಲ್ಲೇ ಇರಬೇಕಾಗಿತ್ತು. ಆದರೆ ಭಾರತ್ ಜೋಡೋ ಯಾತ್ರೆ, ಹಬ್ಬದೂಟದಲ್ಲಿ ತೊಡಗಿಕೊಂಡಿದ್ದಾರೆ, ಎಂತಹ ಅಪ್ರಬುದ್ಧ ಕೆಪಿಸಿಸಿ ಅಧ್ಯಕ್ಷ ಎನ್ನಬಹುದು. ಆದರೆ ನಾವು ಆ ಕೆಲಸ ಮಾಡುವುದಿಲ್ಲ' ಎಂದು ಬಿಜೆಪಿ ಟ್ವೀಟ್ನಲ್ಲಿ ಹೇಳಿದೆ.

ಗುರುವಾರ ಡಿ. ಕೆ. ಶಿವಕುಮಾರ್ ಓಣಂ ಊಟ ಸವಿದಿದ್ದರು. ಈ ಕುರಿತ ಫೋಟೋ ಹಾಕಿ, 'ಕೇರಳದ ಸಂಸ್ಕೃತಿ, ವೈಭವದ ಪ್ರತೀಕವೇ ಓಣಂ. ಈ ಶುಭ ಸಂದರ್ಭದಲ್ಲಿ ಓಣಂ ಸಧ್ಯ (ಓಣಂ ಹಬ್ಬದೂಟ) ಸವಿಯುವ ಅವಕಾಶ ಒದಗಿ ಬಂತು' ಎಂದು ಬರೆದಿದ್ದರು.
ಬೆಂಗಳೂರು ಮಳೆ, ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಸಂಸದ ತೇಜಸ್ವಿ ಸೂರ್ಯ ದೋಸೆ ಸವಿಯುತ್ತಿದ್ದರು. ಆಗ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಪಕ್ಷ, 'ಮತಿ 'ದೋಷ' ಇರುವವರನ್ನು ಆಯ್ಕೆ ಮಾಡಿದರೆ, ಜನ ಮುಳುಗುವಾಗ 'ದೋಸೆ' ತಿನ್ನಲು ಹೋಗುತ್ತಾರೆ!' ಎಂದು ಟೀಕಿಸಿತ್ತು.
'ಬೆಂಗಳೂರು ಮುಳುಗಿದೆ, ಜನತೆ ಪರದಾಡುತ್ತಿದ್ದಾರೆ, ಆದರೆ ಬೆಂಗಳೂರು ದಕ್ಷಿಣದ ಸಂಸದ
ತೇಜಸ್ವಿ ಸೂರ್ಯಗೆ ದೋಸೆ ತಿನ್ನುವ ಟೆಂಪ್ಟ್ ಆಗಿದ್ಯಂತೆ. ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ?' ಎಂದು ಪ್ರಶ್ನೆ ಮಾಡಿತ್ತು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ












Click it and Unblock the Notifications