Breaking; ಓಣಂ ಊಟ ಸವಿದ ಡಿಕೆಶಿ, ಟ್ವೀಟ್ ಬಾಣ ಬಿಟ್ಟ ಬಿಜೆಪಿ!
ಬೆಂಗಳೂರು, ಸೆಪ್ಟೆಂಬರ್ 09: ಕರ್ನಾಟಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಮುಂದುವರೆದಿದೆ. ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟ್ ಮಾಡಿದ್ದ ಕಾಂಗ್ರೆಸ್ಗೆ ಈಗ ಬಿಜೆಪಿ ತಿರುಗೇಟು ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಓಣಂ ಊಟ ಸವಿದು ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಶುಕ್ರವಾರ ಟ್ವೀಟ್ ಮಾಡಿದೆ.
ಕಾಂಗ್ರೆಸ್ಸಿಗರೇ, ನಮಗೂ ನಿಮ್ಮ ಹಾಗೆಯೇ,
— BJP Karnataka (@BJP4Karnataka) September 9, 2022
"ಜನರು ಸಂಕಷ್ಟದಲ್ಲಿರುವಾಗ ಜವಾಬ್ದಾರಿಯುತ ವಿಪಕ್ಷದ ರಾಜ್ಯ ಅಧ್ಯಕ್ಷನಾಗಿ ಬೆಂಗಳೂರಿನಲ್ಲೇ ಇರಬೇಕಾಗಿತ್ತು. ಆದರೆ ಭಾರತ್ ಜೋಡೋ ಯಾತ್ರೆ, ಹಬ್ಬದೂಟದಲ್ಲಿ ತೊಡಗಿಕೊಂಡಿದ್ದಾರೆ, ಎಂತಹ ಅಪ್ರಬುದ್ಧ ಕೆಪಿಸಿಸಿ ಅಧ್ಯಕ್ಷ" ಎನ್ನಬಹುದು.
ಆದರೆ ನಾವು ಆ ಕೆಲಸ ಮಾಡುವುದಿಲ್ಲ! pic.twitter.com/Ly8cwAmLml
'ಕಾಂಗ್ರೆಸ್ಸಿಗರೇ, ನಮಗೂ ನಿಮ್ಮ ಹಾಗೆಯೇ, ಜನರು ಸಂಕಷ್ಟದಲ್ಲಿರುವಾಗ ಜವಾಬ್ದಾರಿಯುತ ವಿಪಕ್ಷದ ರಾಜ್ಯ ಅಧ್ಯಕ್ಷನಾಗಿ ಬೆಂಗಳೂರಿನಲ್ಲೇ ಇರಬೇಕಾಗಿತ್ತು. ಆದರೆ ಭಾರತ್ ಜೋಡೋ ಯಾತ್ರೆ, ಹಬ್ಬದೂಟದಲ್ಲಿ ತೊಡಗಿಕೊಂಡಿದ್ದಾರೆ, ಎಂತಹ ಅಪ್ರಬುದ್ಧ ಕೆಪಿಸಿಸಿ ಅಧ್ಯಕ್ಷ ಎನ್ನಬಹುದು. ಆದರೆ ನಾವು ಆ ಕೆಲಸ ಮಾಡುವುದಿಲ್ಲ' ಎಂದು ಬಿಜೆಪಿ ಟ್ವೀಟ್ನಲ್ಲಿ ಹೇಳಿದೆ.

ಗುರುವಾರ ಡಿ. ಕೆ. ಶಿವಕುಮಾರ್ ಓಣಂ ಊಟ ಸವಿದಿದ್ದರು. ಈ ಕುರಿತ ಫೋಟೋ ಹಾಕಿ, 'ಕೇರಳದ ಸಂಸ್ಕೃತಿ, ವೈಭವದ ಪ್ರತೀಕವೇ ಓಣಂ. ಈ ಶುಭ ಸಂದರ್ಭದಲ್ಲಿ ಓಣಂ ಸಧ್ಯ (ಓಣಂ ಹಬ್ಬದೂಟ) ಸವಿಯುವ ಅವಕಾಶ ಒದಗಿ ಬಂತು' ಎಂದು ಬರೆದಿದ್ದರು.
ಬೆಂಗಳೂರು ಮಳೆ, ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಸಂಸದ ತೇಜಸ್ವಿ ಸೂರ್ಯ ದೋಸೆ ಸವಿಯುತ್ತಿದ್ದರು. ಆಗ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಪಕ್ಷ, 'ಮತಿ 'ದೋಷ' ಇರುವವರನ್ನು ಆಯ್ಕೆ ಮಾಡಿದರೆ, ಜನ ಮುಳುಗುವಾಗ 'ದೋಸೆ' ತಿನ್ನಲು ಹೋಗುತ್ತಾರೆ!' ಎಂದು ಟೀಕಿಸಿತ್ತು.
'ಬೆಂಗಳೂರು ಮುಳುಗಿದೆ, ಜನತೆ ಪರದಾಡುತ್ತಿದ್ದಾರೆ, ಆದರೆ ಬೆಂಗಳೂರು ದಕ್ಷಿಣದ ಸಂಸದ
ತೇಜಸ್ವಿ ಸೂರ್ಯಗೆ ದೋಸೆ ತಿನ್ನುವ ಟೆಂಪ್ಟ್ ಆಗಿದ್ಯಂತೆ. ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ?' ಎಂದು ಪ್ರಶ್ನೆ ಮಾಡಿತ್ತು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ












Click it and Unblock the Notifications