ಕಾವೇರಿ ವಿವಾದ, ಓಣಂ ನೆಪ ಕೇರಳಗರಿಗೆ ವಿಶೇಷ ರೈಲು
ಬೆಂಗಳೂರು, ಸೆ. 13: ಕಾವೇರಿ ವಿವಾದದಿಂದ ಕರ್ನಾಟಕದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕೇರಳಿಗರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮನವಿ ಮಾಡಿದ್ದಾರೆ. ಜೊತೆಗೆ ಓಣಂ ವಿಶೇಷ ರೈಲುಗಳನ್ನು ಕೇರಳಕ್ಕೆ ಬಿಡುವಂತೆ ಕೋರಿದ್ದಾರೆ.
ಕೇರಳದ ಮನವಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದ ಕರ್ನಾಟಕ ಸರ್ಕಾರವು ಭಾರತೀಯ ರೈಲ್ವೆಗೆ ತುರ್ತು ಮನವಿ ಮಾಡಿಕೊಂಡಿದ್ದು, ಓಣಂ ಹಬ್ಬದ ಪ್ರಯುಕ್ತ ಮಂಗಳವಾರ ರೈಲ್ವೆ ನಿಗಮ ಬೆಂಗಳೂರಿನಿಂದ ಕೇರಳಕ್ಕೆ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸಿವೆ.
ಯಶವಂತಪುರದಿಂದ ಕಣ್ಣಾನೂರಿಗೆ ವಿಶೇಷ ರೈಲು (ಸಂಖ್ಯೆ 06527) ಸಂಜೆ 6.50ಕ್ಕೆ ಯಶವಂತಪುರದಿಂದ ಹೊರಟು ಧರ್ಮಪುರಿ, ಸೇಲಂ, ಕೊಯಮತ್ತೂರು ಮತ್ತು ತಿರೂರು ಆಗಿ ಕಣ್ಣಾನೂರು ತಲುಪಲಿದೆ. [ಪ್ರಜೆಗಳನ್ನು ನೋಡಲು ಬಲಿ ಚಕ್ರವರ್ತಿ ಬರ್ತಾನಂತೆ!]

ಕಣ್ಣೂರಿನಿಂದ ಹುಬ್ಬಳ್ಳಿಗೆ (ರೈಲು ಸಂಖ್ಯೆ 06528) ರೈಲು ಬೆಳಗ್ಗೆ 11 ಗಂಟೆಗೆ ಕಣ್ಣಾನೂರಿನಿಂದ ಹೊರಡುವ ರೈಲು ತಿರೂರು, ಕೊಯಂಬತ್ತೂರು, ಧರ್ಮಪುರಿ, ಯಶವಂತಪುರ, ಅರಸೀಕೆರೆ, ದಾವಣಗೆರೆ ಮತ್ತು ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ ತಲುಪಲಿದೆ.
ಜನಸಾಧಾರಣ ವಿಶೇಷ ಎಕ್ಸ್ ಪ್ರೆಸ್ : (ರೈಲು ಸಂಖ್ಯೆ 06525/ 06526) ಬೆಂಗಳೂರಿನ ಕಂಠೀರವ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ತಿರುವನಂತಪುರಕ್ಕೆ ಸಂಚರಿಸಲಿದೆ. ಅದು ಬೆಳಗ್ಗೆ 11.15ಕ್ಕೆ ನಗರ ರೈಲು ನಿಲ್ದಾಣದಿಂದ ಧರ್ಮಪುರಿ, ಕೊಯಂಬತ್ತೂರು, ತ್ರಿಶೂರು, ಕ್ವಿಲ್ಲೊನ್ ಮತ್ತು ಕೊಚುವೆಲಿ ಮಾರ್ಗವಾಗಿ ತಿರುವನಂತಪುರಂ ತಲುಪಲಿದೆ.
ತಿರುವನಂತಪುರ ರೈಲು ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ಹೊರಡುವ ರೈಲು ಕೊಚುವೇಲಿ, ಕ್ವಿಲಾನ್, ಎರ್ನಾಕುಲಂ, ತ್ರಿಶೂರು, ಕೊಯಂಬತ್ತೂರು ಮತ್ತು ಧರ್ಮಪುರಿಯಾಗಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ನಿಲ್ದಾಣ ತಲುಪಲಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಪ್ರಕಟಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications