ಇಬ್ಬರು ಪಕ್ಷೇತರರಲ್ಲಿ ಒಬ್ಬರು ಮಾತ್ರ ಸದನಕ್ಕೆ ಹಾಜರು ಸಾಧ್ಯತೆ
ಬೆಂಗಳೂರು, ಜುಲೈ 23: ಇಬ್ಬರು ಪಕ್ಷೇತರ ಶಾಸಕರಲ್ಲಿ ಒಬ್ಬರು ಮಾತ್ರವೇ ಇಂದು ವಿಶ್ವಾಸಮತ ಯಾಚನೆ ಸಂದರ್ಭ ಹಾಜರಾಗುತ್ತಾರೆ ಎನ್ನಲಾಗಿದೆ.
ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮಾತ್ರವೇ ಇಂದು ವಿಶ್ವಾಸಮತ ಯಾಚನೆ ಸಂದರ್ಭ ಸದನಕ್ಕೆ ಬರುತ್ತಾರೆ, ಮತ್ತೊಬ್ಬ ಶಾಸಕ ಆರ್.ಶಂಕರ್ ಅವರು ಇಂದು ಸದನಕ್ಕೆ ಬರುವುದಿಲ್ಲ.
ಈಗಾಗಲೇ ಶಾಸಕರ ಎಚ್.ನಾಗೇಶ್ ಅವರನ್ನು ವಿಧಾನಸೌಧದ ಬಳಿಯ ಸಮೀಪದ ಹೊಟೆಲ್ನಲ್ಲಿ ತಂದು ಇರಿಸಲಾಗಿದ್ದು, ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾಗುವುದಕ್ಕೆ ಹತ್ತು ನಿಮಿಷ ಮೊದಲು ಅವರನ್ನು ಸದನಕ್ಕೆ ಕರೆದುಕೊಂಡು ಬರಲು ಬಿಜೆಪಿಯವರು ಯೋಜನೆ ಹಾಕಿಕೊಂಡಿದ್ದಾರೆ.

ವಿಶ್ವಾಸಮತ ಆರಂಭವಾದ ದಿನ ಗುರುವಾರವೇ ಬಿಜೆಪಿಯ ಆರ್.ಅಶೋಕ್ ಹಾಗೂ ಅಶ್ವಥ್ನಾರಾಯಣ ಅವರ ಜೊತೆ ಎಚ್.ನಾಗೇಶ್ ಒಬ್ಬರೇ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದರು. ಅಂದು ಬೆಳಂಬೆಳಿಗ್ಗೆ ಎಚ್.ನಾಗೇಶ್ ಅವರನ್ನು ಆರ್.ಅಶೋಕ್ ಅವರು ತಮ್ಮ ನಿವಾಸಕ್ಕೆ ಕರೆದುಕೊಂಡು ಹೋಗಿದ್ದರು. ಅವರು ಅಂದಿನಿಂದಲೂ ಬೆಂಗಳೂರಿನ ಹೊಟೆಲ್ ಒಂದರಲ್ಲಿ ಇದ್ದಾರೆ ಎನ್ನಲಾಗಿದೆ.
ಪಕ್ಷೇತರ ಎಂದೇ ಗುರುತಿಸಲಾಗುತ್ತಿರುವ ಆರ್.ಶಂಕರ್ ಅವರು ಕೆಪಿಜೆಪಿ ಪಕ್ಷದಿಂದ ಗೆದ್ದಿದ್ದರು. ಆದರೆ ಕೆಲವು ದಿನಗಳ ಹಿಂದೆ ಅವರಿಗೆ ಎರಡನೇ ಬಾರಿ ಸಚಿವ ಸ್ಥಾನ ನೀಡಿದಾಗ ಅವರು ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್ ಪಕ್ಷದ ಜೊತೆ ವಿಲೀನ ಮಾಡಿದ್ದರು. ಹಾಗಾಗಿ ಅವರಿಗೆ ವ್ಹಿಪ್ ಜಾರಿ ಆಗಿದ್ದು ಹಾಗಾಗಿ ಅವರು ಬರುವುದಿಲ್ಲ ಎನ್ನಲಾಗುತ್ತಿದೆ.
ಪಕ್ಷೇತರ ಶಾಸಕರನ್ನು ಕರೆದುಕೊಂಡು ಬಂದಿದ್ದಾರೆ. ವಿಧಾನಸೌಧದಿಂದ ಒಂದೂವರೆ ಕಿ.ಮೀ ದೂರದಲ್ಲಿ ಅವರನ್ನು ಇರಿಸಿದ್ದಾರೆ. ಅವರು ಹೇಗೆ ಸರ್ಕಾರದ ವಿರುದ್ಧ ಮತ ಹಾಕುತ್ತಾರೋ ನೋಡೋಣ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications