ಮತ್ತೆ ಮತ್ತೆ ಸಿಎಂ ಯಡಿಯೂರಪ್ಪ ಹಿಂದೆ ಬಿದ್ದ ಎಚ್.ವಿಶ್ವನಾಥ್
ಮೈಸೂರು, ಫೆ 19: ಬಿಜೆಪಿಯ ನಾಮನಿರ್ದೇಶಿತ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ದಂಬಾಲು ಬಿದ್ದಿದ್ದಾರೆ ಎನ್ನುವ ಮಾಹಿತಿಯಿದೆ.
ಕಾರಣ, ಅದೇ ಸಚಿವ ಸ್ಥಾನಕ್ಕಾಗಿ ಹೊರತು ಬೇರೆ ಇನ್ನೇನಕ್ಕೂ ಅಲ್ಲ. ನಾಮ ನಿರ್ದೇಶಿತ ಸದಸ್ಯರು ಸಚಿವರಾಗುವಂತಿಲ್ಲ ಎನ್ನುವ ಸುಪ್ರೀಂಕೋರ್ಟ್ ನಿರ್ದೇಶನದ ನಂತರ ವಿಶ್ವನಾಥ್ ಗೆ ಭಾರೀ ಹಿನ್ನಡೆಯಾಗಿತ್ತು.
ಸುಪ್ರೀಂಕೋರ್ಟ್ ಆದೇಶಕ್ಕೂ ಬಿಜೆಪಿಯ ಕೆಲವು ಮುಖಂಡರ ವಿರುದ್ದ ಕಿಡಿಕಾರಿದ್ದ ವಿಶ್ವನಾಥ್, ತಮ್ಮ ಮುಂಬೈ ಫ್ರೆಂಡ್ಸ್ ಸಚಿವರ ವಿರುದ್ದವೂ ಗರಂ ಆಗಿದ್ದರು. ನನ್ನ ಜೊತೆಗಿದ್ದವರೆಲ್ಲಾ ಸಚಿವರಾಗಿದ್ದಾರೆ, ನಾನು ಮಾತ್ರ ಏಕಾಂಗಿಯಾದೆ ಎನ್ನುವ ನೋವನ್ನು ವಿಶ್ವನಾಥ್ ತೋಡಿಕೊಂಡಿದ್ದಾರೆ.
ಈಗ, ಮತ್ತೆ ಮುಖ್ಯಮಂತ್ರಿಗಳ ಹಿಂದೆ ಬಿದ್ದಿರುವ ವಿಶ್ವನಾಥ್, ವಿಧಾನ ಪರಿಷತ್ ಗೆ ಡೈರೆಕ್ಟ್ ಎಂಟ್ರಿ ಬಯಸಿದ್ದಾರೆ. ಮುಖ್ಯಮಂತ್ರಿಗಳು ಯಾವರೀತಿ ಇದಕ್ಕೆ ಸ್ಪಂದಿಸಿದ್ದಾರೆ ಎನ್ನುವುದರ ಬಗ್ಗೆ ಸದ್ಯಕ್ಕೆ ಮಾಹಿತಿಯಿಲ್ಲ. ಅದು ಹೇಗೆ, ಡೈರೆಕ್ಟ್ ಎಂಟ್ರಿ, ಮುಂದೆ ಓದಿ..

ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ತೆರುವಾಗಿದ್ದ ಸ್ಥಾನ
ವಿಧಾನ ಪರಿಷತ್ ಜೆಡಿಎಸ್ ಸದಸ್ಯರಾಗಿದ್ದ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ತೆರುವಾಗಿದ್ದ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಘೊಷಣೆ ಮಾಡಿದೆ. ಕಳೆದ ಡಿಸೆಂಬರ್ 28, 2020ರಂದು ಜೆಡಿಎಸ್ ಸದಸ್ಯರಾಗಿದ್ದ ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.

ವಿಧಾನ ಪರಿಷತ್ ಚುನಾವಣೆ
ಮಾರ್ಚ್ 15 ರಂದು ಚುನಾವಣೆ ನಡೆಯಲಿದ್ದು, ಇದೇ ಫೆ. 25 ರಂದು ಅಧಿಸೂಚನೆ ಜಾರಿಯಾಗಲಿದೆ. ಮಾರ್ಚ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್ 15 ರಂದು ಬೆಳಗ್ಗೆ 9 ಗಂಟೆಯಿಂದ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಬಳಿಕ ಅಂದು 5ಗಂಟೆಗೆ ಮತ ಎಣಿಕೆ ಬಳಿಕ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.

ಬಿಜೆಪಿ ಟಿಕೆಟ್ ಗಾಗಿ ಹಿಂದೆ ಬಿದ್ದಿರುವ ಎಚ್.ವಿಶ್ವನಾಥ್
ಈ ಸ್ಥಾನಕ್ಕೆ ಸ್ಪರ್ಧಿಸಲು ಎಚ್.ವಿಶ್ವನಾಥ್ ಮುಖ್ಯಮಂತ್ರಿ ಯಡಿಯೂರಪ್ಪನವರ ಹಿಂದೆ ಬಿದ್ದಿದ್ದಾರೆ. ತಮಗೆ ಈ ಸ್ಥಾನಕ್ಕೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಬೇಕೆಂದು ವಿಶ್ವನಾಥ್ ಒತ್ತಡವನ್ನು ಹೇರುತ್ತಿದ್ದಾರೆ. ಮುಖ್ಯಮಂತ್ರಿಗಳು ವಿಶ್ವನಾಥ್ ಅವರಿಗೆ ಏನಾದರೂ ಭರವಸೆಯನ್ನು ನೀಡಿದ್ದಾರೆ ಎನ್ನುವುದರ ಬಗ್ಗೆ ಸದ್ಯಕ್ಕೆ ಮಾಹಿತಿಯಿಲ್ಲ.
Recommended Video

ಬಿಜೆಪಿ ಯಾವರೀತಿ ಸ್ಪಂದಿಸಲಿದೆ ಎನ್ನುವುದು ಸದ್ಯದಲ್ಲೇ ಗೊತ್ತಾಗಲಿದೆ
ಈ ಏಕೈಕ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ, ಇದರಲ್ಲಿ ಗೆದ್ದರೆ, ಸಚಿವ ಸ್ಥಾನ ಪಡೆದುಕೊಳ್ಳಲು ಕೋರ್ಟಿನಿಂದ ತಕರಾರು ಇರುವುದಿಲ್ಲ. ಸಚಿವ ಸ್ಥಾನಕ್ಕಾಗಿ ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿರುವ ವಿಶ್ವನಾಥ್ ಅವರ ಬೇಡಿಕೆಗೆ ಬಿಜೆಪಿ ಯಾವರೀತಿ ಸ್ಪಂದಿಸಲಿದೆ ಎನ್ನುವುದು ಸದ್ಯದಲ್ಲೇ ಗೊತ್ತಾಗಲಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications