ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಬ್ಬರಿಗೆ ಒಂದು ಹುದ್ದೆ ರಾಹುಲ್ ಸೂಚನೆ, ಡಿಕೆಶಿಗೆ ನಿರಾಸೆ!

By Gururaj
|
Google Oneindia Kannada News

Recommended Video

ರಾಹುಲ್ ಗಾಂಧಿ ಕೊಟ್ಟ ಸೂಚನೆಯಿಂದ ಡಿ ಕೆ ಶಿವಕುಮಾರ್ ಗೆ ಬಾರಿ ನಿರಾಸೆ | Oneindia Kannada

ಬೆಂಗಳೂರು, ಜೂನ್ 05 : 'ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಸೂಕ್ತ ಅವಕಾಶ ಸಿಗಬೇಕು. ಒಬ್ಬರಿಗೆ ಒಂದು ಹುದ್ದೆ ಮಾತ್ರ ನೀಡಬೇಕು' ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದರು.

ಮಂಗಳವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದರು. ಸಂಪುಟ ರಚನೆ, ಯಾರಿಗೆ ಯಾವ ಖಾತೆ? ಎಂದು ರಾಜ್ಯದ ನಾಯಕರ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಲವಾರು ಸೂಚನೆಗಳನ್ನು ಅವರು ನೀಡಿದ್ದಾರೆ.

ಸಂಪುಟ ಸೇರಲಿರುವ ಜೆಡಿಎಸ್ + ಬಿಎಸ್ಪಿ ಶಾಸಕರ ಸಂಭಾವ್ಯ ಪಟ್ಟಿಸಂಪುಟ ಸೇರಲಿರುವ ಜೆಡಿಎಸ್ + ಬಿಎಸ್ಪಿ ಶಾಸಕರ ಸಂಭಾವ್ಯ ಪಟ್ಟಿ

'ಪಕ್ಷ ಅಧಿಕಾರದಲ್ಲಿ ಇರುವಾಗ ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಅವಕಾಶ ಸಿಗಬೇಕು. ಆದ್ದರಿಂದ, ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವನ್ನು ನಾವು ಪಾಲಿಸಬೇಕು' ಎಂದು ರಾಹುಲ್ ಗಾಂಧಿ ಸೂಚನೆ ಕೊಟ್ಟಿದ್ದಾರೆ.

Rahul Gandhi

ಡಿಕೆಶಿಗೆ ನಿರಾಸೆ : ರಾಹುಲ್ ಗಾಂಧಿ ಅವರ ಸೂಚನೆಯಿಂದಾಗಿ ಡಿ.ಕೆ.ಶಿವಕುಮಾರ್ ಅವರಿಗೆ ನಿರಾಸೆ ಉಂಟಾಗುವ ಸಾಧ್ಯತೆ ಇದೆ. ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು.

ಮುಜರಾಯಿ ಕೊಡಿ, ಸುತ್ತಾಡಿಕೊಂಡಿರುತ್ತೇನೆ ಗುಡಿ : ಡಿಕೆಶಿ ಪ್ರಲಾಪಮುಜರಾಯಿ ಕೊಡಿ, ಸುತ್ತಾಡಿಕೊಂಡಿರುತ್ತೇನೆ ಗುಡಿ : ಡಿಕೆಶಿ ಪ್ರಲಾಪ

ಆದರೆ, ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಿಂದಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಒಂದೇ ಹುದ್ದೆ ಸಿಗುವ ಸಾಧ್ಯತೆ ಇದೆ. ಅವರಿಗೆ ಸಚಿವ ಸ್ಥಾನ ಅಥವ ಕೆಪಿಸಿಸಿ ಅಧ್ಯಕ್ಷ ಸ್ಥಾನ ಒಂದು ಸಿಗುವ ಸಾಧ್ಯತೆ ಇದೆ.

English summary
In a meeting with Karnataka leaders AICC President Rahul Gandi said that, all party activists should get chance. We should follow one man, one post rule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X