ವಾಹನಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ: ಒಂದು ವರ್ಷ ಅವಕಾಶ
ಬೆಂಗಳೂರು, ಏಪ್ರಿಲ್ 25: ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಪ್ಯಾಸೆಂಜರ್ ವಾಹನಗಳಲ್ಲಿ ಟ್ರ್ಯಾಕಿಂಗ್ ಯುನಿಟ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಆದೇಶವನ್ನು 2019ರ ಏಪ್ರಿಲ್ 1ರವರೆಗೆ ಮುಂದೂಡಿದೆ.
ಈ ನಿರ್ಧಾರದಿಂದ ಪ್ಯಾಸೆಂಜರ್ ಟ್ಯಾಕ್ಸಿ ಮಾಲೀಕರು, ರಾಜ್ಯ ರಸ್ತೆ ಸಾರಿಗೆ ನಿಗಮಗಳು ನಿರಾಳವಾಗಿದೆ.
ನಿರ್ಭಯಾ ಪ್ರಕರಣ ನಂತರ ಮಹಿಳಾ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ 23ಸೀಟಿಗಿಂತ ಅಧಿಕವಿರುವ ಬಸ್ ಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ ಆದೇಶವನ್ನು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಮೊಟ್ಟ ಮೊದಲು ಮಾಡಿತ್ತು.
ಇದಾದ ನಂತರ 2016-17ರಲ್ಲಿ ಪ್ಯಾಸೆಂಜರ್ ವಾಹನಗಳ ಮೇಲೆ ನಿಗಾ ಇಡಲು ಸಿಸಿ ಕ್ಯಾಮರಾ ಜತೆಗೆ 2018 ಏ.1ರಿಂದ ವಿಟಿಯು ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಆದೇಶವನ್ನು ಸಚಿವಾಲಯ ಮಾಡಿತ್ತು.

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈ ಆದೇಶ ಸೂಕ್ತವಾಗಿ ಅನುಷ್ಠಾನವಾಗದ ಹಿನ್ನೆಲೆಯಲ್ಲಿ ಯೋಜನೆಯನ್ನು 1 ವರ್ಷಗಳ ಕಾಲ ಮುಂದೂಡಲಾಗಿದೆ ಎನ್ನಲಾಗಿದೆ. ವಿಟಿಯು ಮತ್ತು ಪ್ಯಾನಿಕ್ ಅಳವಡಿಕೆಯಾಗಿರುವ ವಾಹನಗಳ ಮೇಲೆ ನಿಗಾ ಇಡಲು ಬೇಕಾದಂತಹ ಕಂಟ್ರೋಲ್ ರೂಂ ಸ್ಥಾಪಿಸುವಲ್ಲಿ ರಾಜ್ಯದ ಸಾರಿಗೆ ಇಲಾಖೆ ವಿಫಲವಾಗಿದೆ.
ಹೀಗಾಗಿ ವಿಟಿಯು, ಪ್ಯಾನಿಕ್ ಬಟನ್ ಅಳವಡಿಸಿಯೂ ಯಾವ ಪ್ರಯೋಜನವೂ ಇಲ್ಲ. ಕಂಟ್ರೋಲ್ ರೂಂ ಸ್ಥಾಪನೆಯಾದರೆ ವಾಹನ ಎಲ್ಲಿ ಸಂಚರಿಸುತ್ತಿದೆ. ರಹದಾರಿ ನಿಯಮ ಉಲ್ಲಂಘಿಸುತ್ತಿರುವ ವಾಹನ ಯಾವುದು. ಯಾವ ವಾಹನದಲ್ಲಿ ಪ್ಯಾನಿಕ್ ಬಟನ್ ಅಳವಡಿಸಲಾಗಿದೆ ಎನ್ನುವ ಕ್ಷಣಕ್ಷಣದ ಮಾಹಿತಿ ಪೊಲೀಸರಿಗೆ ಲಭ್ಯವಾಗಲಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications