Oneindia Kannada Impact: ರೈತರ ಸಾಲ ವಸೂಲಿ; ಸಿಎಂಗೆ ದೇಶಪಾಂಡೆ ಪತ್ರ
ಬೆಂಗಳೂರು, ಮೇ 25: ಲಾಕ್ಡೌನ್ ಜಾರಿಯಲ್ಲಿರುವಾಗಲೇ ರೈತರ ಸಾಲ ವಸೂಲಿ ಕುರಿತು ಸರ್ಕಾರ ಹೊರಡಿಸಿರುವ ಆದೇಶ ಹಿಂದಕ್ಕೆ ಪಡೆಯುವಂತೆ ಮಾಜಿ ಸಚಿವ ಆರ್. ವಿ. ದೇಶಪಾಂಡೆ ಅವರು ಸಿಎಂಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಶೂನ್ಯ ಬಡ್ಡಿ ದರದ ಸಾಲ ಮರುಪಾವತಿಗೆ, ಸಾಲ ಪಡೆಯಲು ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ನ್ನು ಆಧಾರವಾಗಿಟ್ಟು ಕೊಳ್ಳಬಾರದು. ಹಿಂದಿನ ನಿಯಮಾವಯಂತೆ ಸಾಲ ಮರುಪಾವತಿ ಹಾಗೂ ಸಾಲ ನೀಡಿಕೆಗೆ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಸಾಲ ವಸೂಲಿ ಸಂದರ್ಭದಲ್ಲಿ ರಾಜ್ಯ ಸಹಕಾರ ಇಲಾಖೆ ರೈತರಿಗೆ ಕೊಟ್ಟಿದ್ದ ಶೂನ್ಯದರ ಸಾಲಕ್ಕೆ ಬಡ್ಡಿ ವಸೂಲಿ, ಪಡಿತರ ಚೀಟಿ ಖಡ್ಡಾಯ ಸೇರಿದಂತೆ ಹಲವು ನಿಯಮಾವಳಿ ತಿದ್ದುಪಡಿ ಮಾಡಿ ಸುತ್ತೋಲೆ ಹೊರಡಿಸಿರುವ ಬಗ್ಗೆ 'ಒನ್ಇಂಡಿಯಾ ಕನ್ನಡ' ಸವಿಸ್ತಾರವಾದ ವರದಿ ಪ್ರಕಟಿಸಿತ್ತು. ಜೊತೆಗೆ ಸರ್ಕಾರದ ನೂತನ ನಿಯಮಗಳಿಂದ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗಿತ್ತು. ಇದೀಗ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು "ಒನ್ಇಂಡಿಯಾ ಕನ್ನಡ'ದ ವರದಿಗೆ ಸ್ಪಂಧಿಸಿ, ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೃಷಿ ಭೂಮಿ ಇದ್ದ ಕ್ಷೇತ್ರದಲ್ಲಿ ವಾಸವಾಗಿರದೆ ಇರುವವರಿಂದ ಶೇ. 7ರಷ್ಟು ಬಡ್ಡಿ ವಸೂಲಿ ಮಾಡುವಂತೆ ಹಾಗೂ ಆ ಕ್ಷೇತ್ರದಲ್ಲಿ ವಾಸವಾಗಿರದೇ ಇರುವವರಿಗೆ ಹೊಸ ಸಾಲ ನೀಡದಂತೆ ಸರ್ಕಾರಿ ಆದೇಶ ನೀಡಲಾಗಿದೆ. ತಕ್ಷಣ ಸರ್ಕಾರದ ಆದೇಶಕ್ಕೆ ತಿದ್ದುಪಡಿ ತರಬೇಕೆಂದು ದೇಶಪಾಂಡೆ ಅವರು ಒತ್ತಾಯಿಸಿದ್ದಾರೆ.

ಕೃಷಿ ಸಾಲವನ್ನು ಕೃಷಿ ಚಟುವಟಿಕೆಗೆ ನೀಡಲಾಗುತ್ತದೆಯೇ ಹೊರತು ಅವರ ಮನೆಯನ್ನು ಆಧಾರವಾಗಿಟ್ಟುಕೊಂಡು ಸಾಲ ನೀಡುವುದಿಲ್ಲ. ಆದರೆ ಹೊಸ ಆದೇಶದಲ್ಲಿ ಸಾಲ ನೀಡುವಾಗ ಸಹಕಾರ ಸಂಘಗಳು ಆಧಾರ್ ಕಾರ್ಡ್ ವಿಳಾಸವನ್ನು ಪರಿಗಣಿಸಿ ಸಾಲ ನೀಡಬೇಕೆಂದು ಆದೇಶಿಸಲಾಗಿದೆ, ಇದು ರೈತರು ಹಾಗೂ ಸಹಕಾರ ಸಂಘಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗುತ್ತದೆ.
ಕೂಡಲೇ ಸರ್ಕಾರ ಇದಕ್ಕೆ ತಿದ್ದುಪಡಿ ತಂದು ಕೃಷಿ ಚಟುವಟಿಕೆ ನಡೆಸುವ ಪ್ರತಿಯೊಬ್ಬರಿಗೂ ಸಾಲ ನೀಡಲು ಸೂಚಿಸಬೇಕಾಗಿ ಮನವಿ ಮಾಡುತ್ತೇನೆ. ಅಲ್ಲದೆ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವಾಗ ಪಡಿತರ ಚೀಟಿಯಲ್ಲಿನ ವಿಳಾಸ ಹಾಗೂ ಆಧಾರ್ ಕಾರ್ಡ್ ವಿಳಾಸವನ್ನೇ ಸಾಲ ನೀಡಲು, ಸಾಲ ಮರುಪಾತಿಗೆ ಪ್ರಮುಖ ಆಧಾರವನ್ನಾಗಿ ಪರಿಗಣಿಸಬಾರದು. ಇದನ್ನು ಪುನರ್ ಪರಿಶೀಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ಒತ್ತಾಯಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications