Onion Price Hike: ಈರುಳ್ಳಿ ದರ ಏರಿಕೆ-ಅಂಕಿಅಂಶಗಳ ವಿವರ ಇಲ್ಲಿದೆ
Onion Price Hike: ಈರುಳ್ಳಿ ದರ ಏರಿಕೆಯಾಗಿದ್ದು, ಇದರಿಂದ ಬೆಳಗಾರರ ಮುಖದಲ್ಲಿ ಸಂತಸ ಮೂಡಿದಂತಾಗಿದೆ. ಮತ್ತೊಂದೆಡೆ ಗ್ರಾಹಕರ ಕಣ್ಣಲ್ಲಿ ಕಣ್ಣೀರು ತರಿಸುತ್ತಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಕೆ.ಜಿ. ಈರುಳ್ಳಿ ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರಿನಲ್ಲಿ ಕೆ.ಜಿ. ಈರುಳ್ಳಿ ದರ 100 ರೂಪಾಯಿ ಮುಟ್ಟುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ, ಯಶವಂತಪುರ ಎಪಿಎಂಸಿ ಸೇರಿ ಬೆಂಗಳೂರು ಮಹಾನಗರದ ಹಲವು ಮಾರುಕಟ್ಟೆಗಳಲ್ಲಿ ಹಳೇ ಈರುಳ್ಳಿ ಬೆಲೆ ಏರಿಕೆಯಾಗಿದೆ.

ಅದರಲ್ಲೂ ಮಹಾರಾಷ್ಟ್ರದಿಂದ ಪೂರೈಕೆ ಆಗುತ್ತಿರುವ ಉತ್ತಮ ಗುಣಮಟ್ಟದ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿದೆ. ಇದರ ದರ ವಾರಗಳ ಹಿಂದೆ ಕ್ವಿಂಟಾಲ್ಗೆ 5,000 ರೂಪಾಯಿ ಇದ್ದು, ಇದೀಗ 7,500 ರೂಪಾಯಿ ಆಸುಪಾಸು ಬಂದಿದೆ. ಇನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ. ಈರುಳ್ಳಿ ದರ 70-90 ರೂಪಾಯಿ ಇದೆ. ಇನ್ನೂ ಕೆಲವೇ ದಿನಗಳಲ್ಲಿ 100 ರೂಪಾಯಿ ಮುಟ್ಟುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮಹಾರಾಷ್ಟ್ರ, ನಾಗಪುರದಿಂದ ಬರುವ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿದೆ. ಕೆಲವು ವಾರಗಳ ಹಿಂದೆ ಈ ಈರುಳ್ಳಿ ಬೆಲೆ ಕ್ವಿಂಟಾಲ್ಗೆ 5000 ರೂಪಾಯಿ ಇತ್ತು. ಇದೀಗ 7,200-7500 ರೂಪಾಯಿಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನು ಅಕಾಲಿಕ ಮಳೆ ಹಿನ್ನೆಲೆ ಈರುಳ್ಳಿ ಬೆಳೆ ಹಾನಿಯಾಗಿದ್ದು, ಅವುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದಂತಾಗಿದೆ.
ಇದೀಗ ಹಳೇ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿದೆ. ಹೋಟೆಲ್ ಉದ್ಯಮವು ಹೆಚ್ಚು ದಿನ ಬಾಳಿಕೆ ಬರುವ ಈರುಳ್ಳಿಯನ್ನೇ ಕೇಳುತ್ತಿದೆ. ಆದ್ದರಿಂದ ಮಹಾರಾಷ್ಟ್ರದ ಈರುಳ್ಳಿ ಕಡೆಗೆ ಗಮನಹರಿಸಿದ್ದು, ಬೆಂಗಳೂರಿಗೆ ಬೇಕಾದ ಈರುಳ್ಳಿ ಮಹಾರಾಷ್ಟ್ರದಿಂದಲೇ ಪೂರೈಕೆ ಆಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಯಶವಂತಪುರದ ಎಪಿಎಂಸಿಗೆ ಮಹಾರಾಷ್ಟ್ರದಿಂದ ಈಗಾಗಲೇ 500 ಟ್ರಕ್ ಈರುಳ್ಳಿ ಪೂರೈಕೆ ಆಗಿದೆ. ಅಂದರೆ, 1,00,480 ಚೀಲ ಈರುಳ್ಳಿ ಯಶವಂತಪುರ ಎಪಿಎಂಸಿಗೆ ಪೂರೈಕೆ ಆಗಿದೆ. ಇದರಲ್ಲಿ ಮಧ್ಯಮ ಗಾತ್ರದ ಈರುಳ್ಳಿ ಪ್ರತಿ ಕ್ವಿಂಟಲ್ಗೆ 5,000-5,500 ರೂಪಾಯಿ ದರದಲ್ಲಿ ಖರೀದಿ ಆಯಿತು. ನಾಗಪುರ ಭಾಗದ ಈರುಳ್ಳಿ ಹಳೇ ಈರುಳ್ಳಿ ಆಗಿದ್ದು, ಇವುಗಳನ್ನೇ ಹೋಟೆಲ್ನವರು ಹೆಚ್ಚಾಗಿ ಖರೀದಿ ಮಾಡುತ್ತಿದ್ದಾರೆ.
ರಾಜ್ಯದ ಹಲವು ಭಾಗಗಳಿಂದ ಒಟ್ಟು 485 ಟ್ರಕ್ಗಳಲ್ಲಿ ಈರುಳ್ಳಿ ಪೂರೈಕೆಯಾಗಿದೆ. ಇದು ಹೊಸ ಈರುಳ್ಳಿಯಾಗಿದ್ದು, ಕೂಡಲೇ ಬಳಸಬೇಕಾಗುತ್ತದೆ. ಆದ್ದರಿಮದ ಇದಕ್ಕೆ ಬೇಡಿಕೆ ಕಡಿಮೆಯಿದೆ. ಈ ಈರುಳ್ಳಿ ಪ್ರತಿ ಕ್ವಿಂಟಲ್ಗೆ 5,000-5,500 ರೂಪಾಯಿ ವರೆಗೂ ಮಾರಾಟ ಆಗಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications