ಆನ್ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಗೊಳಿಸಿ ಕರ್ನಾಟಕ ಸರ್ಕಾರ ನೀಡಿದ್ದ ಆದೇಶ ರದ್ದು
ಬೆಂಗಳೂರು, ಫೆ.14: ರಾಜ್ಯದಲ್ಲಿ ಎಲ್ಲ ಬಗೆಯ ಆನ್ ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಿಸಿ ಕರ್ನಾಟಕ ಸರ್ಕಾರವು ಹೊರ ತಂದಿದ್ದ ಕರ್ನಾಟಕ ಪೊಲೀಸ್ ಕಾಯ್ದೆಗೆ ಮಾಡಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.
ತಿದ್ದುಪಡಿ ಸಂವಿಧಾನಬಾಹಿರವೆಂದು ಸಾರಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ ಹೊಸ ಕಾಯಿದೆ ಮಾಡಬಹುದೆಂದು ಆದೇಶಿಸಿದೆ.
ಅಲ್ಲದೆ, ಸದ್ಯಕ್ಕೆ ಸರ್ಕಾರ ಆನ್ ಲೈನ್ ಗೇಮ್ಸ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು, ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.
ಸರ್ಕಾರಕ್ಕೆ ಜೂಜು-ಫ್ಯಾಂಟಸಿ ಗೇಮ್ ನಡುವಿನ ವ್ಯತ್ಯಾಸ ತಿಳಿಯಲಿ
ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಮತ್ತಿತರ ಕಂಪನಿಗಳು ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಶೇಷ ವಿಭಾಗೀಯ ಪೀಠ ಸೋಮವಾರ ತೀರ್ಪು ಪ್ರಕಟಿಸಿತು.
120 ಪುಟಗಳ ತೀರ್ಪಿನಲ್ಲಿ ವಿಭಾಗೀಯಪೀಠ, ಅರ್ಜಿಗಳನ್ನು ಪುರಸ್ಕರಿಸಿ 2021ರಲ್ಲಿ ಸರ್ಕಾರ ಪೊಲೀಸ್ ಕಾಯಿದೆಗೆ ಮಾಡಿದ್ದ ಸಂಪೂರ್ಣ ತಿದ್ದುಪಡಿಯನ್ನು ರದ್ದುಪಡಿಸಿಲ್ಲ. ಆದರೆ ಆನ್ ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಕ್ಕೆ ಸಂಬಂಧಿಸಿದ ನಿಯಮಗಳನ್ನು ಸಂವಿಧಾನಬಾಹಿರ ಮತ್ತು ನಿಯಮ ಬದ್ಧವಾಗಿಲ್ಲವೆಂದು ಸಾರಿದೆ.
ಬೆಟ್ಟಿಂಗ್ ಬಾಜಿಗೆ ಸಮ:
ಸರಕಾರದ ಪರ ವಾದ ಮಂಡಿಸಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ''ಆಟದ ಫಲಿತಾಂಶದ ಬಗ್ಗೆ ತಿಳಿಯದಿರುವಾಗ ಆಟದ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟುವುದು ಆಯ್ಕೆಯೋ ಅಥವಾ ಕೌಶಲವೋ ಅದು ಬಾಜಿಗೆ ಸಮನಾಗಿರುತ್ತದೆ,'' ಎಂದು ವಾದಿಸಿದ್ದರು.
ಆನ್ಲೈನ್ ಆಟಗಳ ನಿಷೇಧ, ಸಾವಿರಾರು ಉದ್ಯೋಗಗಳಿಗೆ ಅಪಾಯ
''ಬಾಜಿ ಅಥವಾ ಬೆಟ್ಟಿಂಗ್ ಅನ್ನು ಸರಳ ಭಾಷೆಯಲ್ಲಿ ಹೇಳುವುದಾದರೆ ಒಬ್ಬರಿಂದ ಹಣ ಸಂಗ್ರಹಿಸಿ, ಹಣದ ರೂಪದಲ್ಲಿ ಬಹುಮಾನದ ಮೊತ್ತ ಹಂಚಿಕೆ ಮಾಡುವುದಾಗಿದೆ. ಮುಂದೆ ಹೊರ ಹೊಮ್ಮಬಹುದಾದ ಫಲಿತಾಂಶದ ಬಗ್ಗೆ ತಿಳಿಯದೇ ತಮ್ಮ ಹಣ ಅಥವಾ ಇನ್ಯಾವುದಾದರ ಮೇಲೆ ರಿಸ್ಕ್ ತೆಗೆದುಕೊಳ್ಳುವುದು ಬಾಜಿ ಅಥವಾ ಬೆಟ್ಟಿಂಗ್ಗೆ ಸಮನಾಗುತ್ತದೆ. ಗೊತ್ತಿಲ್ಲದ ಫಲಿತಾಂಶವು ಆಯ್ಕೆಯ ಆಟ ಅಥವಾ ಕೌಶಲದ ಆಟವಾಗಿರಬಹುದು,'' ಎಂದು ಹೇಳಿದ್ದರು.
ಆನ್ಲೈನ್ ಜೂಜಾಟ ಪ್ರಶ್ನಿಸಿದ್ದ ಮನವಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್
ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಉದಾಹರಿಸಿದ ಎಜಿ ನಾವದಗಿ ಅವರು ''ಭಾರತ ವರ್ಸಸ್ ಪಾಕಿಸ್ತಾನ ಆಟವಾಡುತ್ತಿದ್ದರೆ ಅದು ಕೌಶಲ್ಯದ ಆಟ. ಸದರಿ ಆಟದ ಫಲಿತಾಂಶ ತಿಳಿಯದಿರುವಾಗ ಹಲವರಿಂದ ಬೆಟ್ಟಿಂಗ್ ಹಣವನ್ನು ನಾನು ಸಂಗ್ರಹಿಸುತ್ತೇನೆ. ಅದು ಕೌಶಲ್ಯದ ಆಟವಾಗಿರಬಹುದು,'' ಎಂದು ನಾವದಗಿ ಹೇಳಿದರು.
ಕಾಯಿದೆಯನ್ನು ಪ್ರಶ್ನಿಸಿರುವ ಯಾವುದೇ ಅರ್ಜಿದಾರರ ವಿರುದ್ಧ ದೂರು ದಾಖಲಿಸಲಾಗಿಲ್ಲ ಎಂದ ನಾವದಗಿ ಅವರು ತಡೆಯಾಜ್ಞೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದರು.
ಸರ್ಕಾರಕ್ಕೆ ಅಧಿಕಾರವಿಲ್ಲ:
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ ''ಆನ್ ಲೈನ್ ಗೇಮ್ಗಳನ್ನು ನಿಷೇಧಸಲು ಸರ್ಕಾರಕ್ಕೆ ಅಧಿಕಾರವಿಲ್ಲ. ಗೇಮ್ಸ್ಗೂ ಸ್ಕಿಲ್ ಗೂ ವ್ಯತ್ಯಾಸವಿದೆ. ಆದರೆ ಸರ್ಕಾರ ತಪ್ಪಾಗಿ ಅರ್ಥಿಸಿಕೊಂಡು ನಿಷೇಧಿಸಿದೆ. ಈ ಕಾನೂನಿನಿಂದ ನಮ್ಮ ರಾಜ್ಯವು ಆದಾಯ, ಉದ್ಯೋಗ ನಷ್ಟ ಅನುಭವಿಸಲಿದೆ. ರಾಜ್ಯ ಸರ್ಕಾರದ ಕಾಯಿದೆಯು 19(1)(g) ಅಡಿ ನಮ್ಮ ಹಕ್ಕುಗಳನ್ನು ಕಸಿಯಲಿದೆ. ಇದು ಸ್ವೇಚ್ಛೆಯಿಂದ ಕೂಡಿದ್ದು, ಅರ್ಥಹೀನವಾಗಿದೆ'' ಎಂದು ವಿರೋಧ ದಾಖಲಿಸಿದರು.
ಈಗಾಗಲೇ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಪರ ಹಿರಿಯ ವಕೀಲರಾದ ಆರ್ಯನ್ ಸುಂದರಂ, ಮುಕುಲ್ ರೋಹಟಗಿ, ಸಜ್ಜನ್ ಪೂವಯ್ಯ , ಡಿಎಲ್ಎನ್ ರಾವ್ ಸೇರಿದಂತೆ ಹಲವರು ಪ್ರಬಲ ವಾದ ಮಂಡಿಸಿದ್ದರು.