ಎಲ್ಲ ಚಾರಣಪಥಕ್ಕೂ ಆನ್ ಲೈನ್ ಟಿಕೆಟ್: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಅಕ್ಟೋಬರ್04: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದೆ. ಆದರೆ, ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬುದು ಸರ್ಕಾರದ ಕಾಳಜಿಯಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿಂದು ಆನ್ ಲೈನ್ ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸುವ https://aranyavihaara.karnataka.gov.in ವೆಬ್ ಸೈಟ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಜನವರಿ 26, 27ರಂದು ಕುಮಾರಪರ್ವತಕ್ಕೆ 5-6 ಸಾವಿರ ಪ್ರವಾಸಿಗರು ಒಂದೇ ದಿನ ಆಗಮಿಸಿದ ಹಿನ್ನೆಲೆಯಲ್ಲಿ ಗೊಂದಲ ಆಗಿತ್ತು. ಇಂತಹ ಗೊಂದಲ ನಿವಾರಿಸಲು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗಿದೆ ಎಂದರು.

ಈ ಅಂತರ್ಜಾಲ ತಾಣದಲ್ಲಿ ರಾಜ್ಯ ಎಲ್ಲ ಚಾರಣ ಪಥಗಳ ಟಿಕೆಟ್ ಅನ್ನೂ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್ ಸಿಗದವರು ಬೇರೆ ಚಾರಣಪಥವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಪ್ರಸ್ತುತ 5 ತಾಣಗಳಿಗೆ ಅಂದರೆ ಕುಮಾರ ಪರ್ವತದಿಂದ ಸುಬ್ರಹ್ಮಣ್ಯ, ಬೀದಹಳ್ಳಿಯಿಂದ - ಕುಮಾರ ಪರ್ವತ, ಬೀದಹಳ್ಳಿ -ಕುಮಾರ ಪರ್ವತ - ಸುಬ್ರಹ್ಮಣ್ಯ, ಚಾಮರಾಜನಗರ - ನಾಗಮಲೈ, ತಲಕಾವೇರಿಯಿಂದ-ನಿಶಾನೆಮೊಟ್ಟೆ ಚಾರಣ ತಾಣಗಳಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ಈ ಮಾಸಾಂತ್ಯದೊಳಗೆ 40 ಚಾರಣ ಪಥಗಳನ್ನು ಈ ಅಂತರ್ಜಾಲ ತಾಣದಲ್ಲಿ ಸೇರಿಸಲಾಗುವುದು. ಜೊತೆಗೆ ವನ್ಯಜೀವಿ ಸಫಾರಿ ಮತ್ತು ಬೋಟ್ ಸಫಾರಿಗೂ ಇದರಲ್ಲೇ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.
ಒಂದು ಫೋನ್ ನಂಬರ್ ನಲ್ಲಿ 10 ಟಿಕೆಟ್ ಮುಂಗಡ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು, 7 ದಿನ ಮೊದಲು ರದ್ದು ಮಾಡಿದರೆ ಪೂರ್ಣ ಹಣ ಮರಳಿಸಲು ಅವಕಾಶ ಇರುತ್ತದೆ. ನಂತರದ ರದ್ದತಿಗೆ ಪೂರ್ಣ ಹಣ ಸಿಗುವುದಿಲ್ಲ, ಭಾಗಶಃ ಕಡಿತ ಮಾಡಲಾಗುವುದು ಎಂದರು.
ಅಂತರ್ಜಾಲ ತಾಣದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳ ಚಿತ್ರ, ಅವುಗಳ ವಿಶೇಷ ಕುರಿತಂತೆ ಸಂಕ್ಷಿಪ್ತ ಮಾಹಿತಿ ಒದಗಿಸಲಾಗಿದೆ. ಇದರಿಂದ ಚಾರಣಿಗರಿಗೆ ಮತ್ತು ಪ್ರವಾಸಿಗರಿಗೆ ಮಾಹಿತಿಯೂ ಲಭಿಸುತ್ತದೆ. ಟಿಕೆಟ್ ಅನ್ನು ಮುಂಗಡ ಕಾಯ್ದಿರಿಸಲು ಅವಕಾಶವೂ ಆಗುತ್ತದೆ ಎಂದರು.
ಮುಂಗಾರು ಮಳೆ ಸುರಿಯುವ ಸಮಯದಲ್ಲಿ ಚಾರಣ ಮಾಡುವುದು ಸೂಕ್ತವಲ್ಲ. ಅನುಭವ ಇಲ್ಲದ ಚಾರಣಿಗರು ಜಾರಿ ಬೀಳುವ ಅಪಾಯ ಇರುತ್ತದೆ. ಜೊತೆಗೆ ಕೀಟ, ಜೀವ ಜಂತುಗಳಿಗೂ ತೊಂದರೆ ಆಗುತ್ತದೆ. ಹೀಗಾಗಿ ಮಳೆಗಾಲದಲ್ಲಿ ಚಾರಣ ನಿರ್ಬಂಧಿಸುವುದು ಒಂದು ಕಾರಣವಾಗಿತ್ತು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಈ ಚಾರಣ ಪಥಗಳ ಟಿಕೆಟ್ ಅನ್ನು ಚಾರಣ ಏರ್ಪಡಿಸುವ ಕೆಲವು ಖಾಸಗಿ ಸಂಸ್ಥೆಗಳು ಸಗಟು ಖರೀದಿ ಮಾಡುತ್ತವೆ. ಹೀಗಾಗಿ ನೈಜ ಚಾರಣಿಗರಿಗೆ ಟಿಕೆಟ್ ಲಭಿಸದಂತಾಗಿದೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಸರ್ಕಾರದ ಭಾವಚಿತ್ರ ಸಹಿತ ಗುರುತಿನ ಚೀಟಿ ಅಪ್ ಲೋಡ್ ಮಾಡಿ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಚಾರಣಕ್ಕೆ ಬರುವವರಿಗೆ ಆ ಗಿರಿ ಪ್ರದೇಶದಲ್ಲಿರುವ ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ಬಗ್ಗೆ ಮಾಹಿತಿ ನೀಡಲು ಮತ್ತು ಆ ಪ್ರದೇಶದ ಸಂಕ್ಷಿಪ್ತ ಇತಿಹಾಸ ತಿಳಿಸಲು ಹಾಗೂ ಚಾರಣದ ವೇಳೆ ಏನೆಲ್ಲಾ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಪ್ರತಿ 10 - 20 ಚಾರಣಿಗರಿಗೆ ಒಬ್ಬರಂತೆ ಗೈಡ್ ಗಳನ್ನೂ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಅರಣ್ಯ ಇಲಾಖೆಯ ಭಾಗವಾಗಿರುವ ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದ ಚಿಕ್ಕಬಳ್ಳಾಪುರದ ಸ್ಕಂದಗಿರಿ ಚಾರಣಪಥದಲ್ಲಿ ಆನ್ ಲೈನ್ ನಲ್ಲಿ ಟಿಕೆಟ್ ಗಳನ್ನು ಬ್ಲಾಕ್ ಮಾಡಲು ಖಾಸಗಿ ಪ್ರವಾಸೋದ್ಯಮ ಸಂಸ್ಥೆಗಳೊಂದಿಗೆ ಕೆಲವು ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ನೀಡಲಾಗಿದೆ, ಕೆಲವು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು. ನಕಲಿ ಟಿಕೆಟ್ ಬಳಸಿ ಕಲವರು ಚಾರಣಕ್ಕೆ ಹೋಗುತ್ತಿದ್ದಾರೆ. ಕೆಲವು ಚಾರಣ ಪಥದಲ್ಲಿ ಸಿಬ್ಬಂದಿಯೇ ನಕಲಿ ಟಿಕೆಟ್ ಮಾಡಿಸಿ ಚಾರಣಿಗರಿಗೆ ಒಳ ಹೋಗಲು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪವೂ ಇದ್ದು, ಇದಕ್ಕಾಗಿ ಕೆ.ಎಸ್.ಆರ್.ಟಿ.ಸಿ.ಯಲ್ಲಿ ಇರುವಂತೆ ಸಂಚಾರಿ ದಳ ರಚಿಸಲಾಗುವುದು. ಈ ಸಂಚಾರಿ ದಳ ಅನಿರೀಕ್ಷಿತವಾಗಿ ಚಾರಣ ಪಥಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ. ನಕಲಿ ಟಿಕೆಟ್ ಕಂಡು ಬಂದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಚಾರಣಪಥ ಮತ್ತು ಅರಣ್ಯದೊಳಗಿನ ರಸ್ತೆಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ನೀರಿನ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ ಇತ್ಯಾದಿ ನಿಷೇಧಿಸಲಾಗುವುದು. ಕಾಡಿನಲ್ಲಿ ಸಂಚರಿಸುವ ವಾಹನ ಸವಾರರಿಗೆ ಮತ್ತು ಚಾರಣಕ್ಕೆ ಬರುವವರಿಗೆ ಮೊದಲ ಹಂತದಲ್ಲಿ ನಿಷೇಧಿತ ವಸ್ತುವನ್ನು ಸ್ವಯಂ ಕಸದ ಬುಟ್ಟಿಗೆ ಹಾಕಲು ತಿಳಿಸಲಾಗುವುದು. 2ನೇ ಹಂತದಲ್ಲಿ ತಪಾಸಣೆ ನಡೆಸಲಾಗುವುದು. ತಪಾಸಣೆ ವೇಳೆ ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್, ಮದ್ಯದ ಬಾಟಲಿ, ಸಿಗರೇಟ್, ಬೆಂಕಿಪೊಟ್ಟಣ ಇತ್ಯಾದಿ ಕಂಡುಬಂದರೆ ದಂಡ ವಿಧಿಸಲಾಗುವುದು ಎಂದು ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications