Get Updates
Get notified of breaking news, exclusive insights, and must-see stories!

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದು ಕಾಂಗ್ರೆಸ್, ಬೇರೆ ಯಾರೂ ಅಲ್ಲ: ಸಿಎಂ

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದು ಕಾಂಗ್ರೆಸ್ ಹೊರತು ಬೇರೆ ಯಾರೂ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 1925ರಲ್ಲೇ ಆರ್‌ಎಸ್‌ಎಸ್‌ ಸ್ಥಾಪನೆಯಾಗಿತ್ತು. ಆಗ ಸ್ವಾತಂತ್ರ್ಯ ಹೋರಾಟ ಬಹಳ ಬಿರುಸಾಗಿ ನಡೆಯುತ್ತಿತ್ತು. ಕೆ.ಬಿ.ಹೆಡ್ಗೆವಾರ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ಆರ್.ಎಸ್.ಎಸ್ ಕಾರ್ಯಕರ್ತರಿಗೆ ಕರೆ ನೀಡಲಿಲ್ಲ ಎಂದು ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಹಾಗೂ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಸಾವರ್ಕರ್ ಮತ್ತು ಹಿಂದೂ ಮಹಾಸಭಾದ ಅಧ್ಯಕ್ಷ ಗೋಲ್ವಾಲ್ಕರ್ ಇಬ್ಬರೂ ಸಂವಿಧಾನವನ್ನು ವಿರೋಧಿಸಿದವರು. ಮನುವಾದಿಗಳು, ಚತುರ್ವರ್ಣ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟುಕೊಂಡವರು ಯಾವತ್ತೂ ಸಂವಿಧಾನದ ಪರವಾಗಿಲ್ಲ ಎಂದಿದ್ದಾರೆ. ಬಿಜೆಪಿಯವರು ನೆಹರೂ ಅವರನ್ನ ಟೀಕಿಸುತ್ತಾರೆ. ಆದರೆ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರಬೋಸ್ ಸೇರಿ ಅನೇಕರ ಜೊತೆಗೂಡಿ ಹೋರಾಡಿದರು. ಇಂದು ದೇಶ ಸ್ವತಂತ್ರವಾಗಿದ್ದರೆ, ಅದು ಅವರ ಹೋರಾಟದ ಫಲ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ. ಸಾವರ್ಕರ್, ಗೋಲ್ವಾಲ್ಕರ್ ಆಗಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಈಗ ಬಿಜೆಪಿಯವರು ಮಹಾನ್ ದೇಶಭಕ್ತರಂತೆ ಮಾತನಾಡುತ್ತಾರೆ. ಇದು ಬಿಜೆಪಿಯವರ ಢೋಂಗಿತನ ಎಂದಿದ್ದಾರೆ.

Only Congress Fought For India Freedom Not Anyone Else CM Siddaramaiah

ಇಂದಿರಾ ಗಾಂಧಿಯವರು ದೇಶಕ್ಕಾಗಿ ಹುತಾತ್ಮರಾದರು. ಆದರೆ ಅವರ ಆದರ್ಶಗಳು ನಮ್ಮೊಂದಿಗೆ ಇವೆ. ಅವುಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ. ಬಾಂಗ್ಲಾದೇಶದ ವಿಮೋಚನಾ ಸಂದರ್ಭದಲ್ಲಿ ವಾಜಪೇಯಿಯವರು ದುರ್ಗೆಯೆಂದು ಇಂದಿರಾ ಅವರನ್ನು ಕರೆದಿದ್ದರು. ಪಾಕಿಸ್ತಾನವನ್ನು ಸದೆಬಡೆದು ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದ ಈ ಯುದ್ಧದಲ್ಲಿ ಸುಮಾರು 90 ಸಾವಿರ ಪಾಕಿಸ್ತಾನ ಸೈನಿಕರು ಸೆರೆಯಾಗಿದ್ದರು. ಇಂದಿರಾ ಗಾಂಧಿಯವರ ದಿಟ್ಟತನಕ್ಕೆ ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯಲಾಗುತ್ತಿತ್ತು ಎಂದು ನೆನೆದಿದ್ದಾರೆ.

ಇಂದಿರಾ ಗಾಂಧಿ ಧೀಮಂತ ನಾಯಕಿ. ದೀರ್ಘ ಕಾಲದವರೆಗೆ ದೇಶವನ್ನಾಳಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಅವಧಿಯಲ್ಲಿ ಬಡತನ ನಿರ್ಮೂಲನೆಗೊಳಿಸುವ 'ಗರೀಬಿ ಹಠಾವೋ' ಘೋಷಣೆ ಮಾಡಿದ್ದರು. ಭಾರತದಲ್ಲಿ ಅಸಮಾನತೆ ಇದೆ. ಇಂದಿರಾಗಾಂಧಿಯವರ ಕಾಲಘಟ್ಟದಲ್ಲಿ ಬಡವರ ಸಂಖ್ಯೆ ಹೆಚ್ಚಿತ್ತು. ಆದ್ದರಿಂದ ಬಡತನ ಹೋಗಲಾಡಿಸಲು 20 ಅಂಶಗಳ ಕಾರ್ಯಕ್ರಮವನ್ನು ಅವರು ಜಾರಿಗೆ ತಂದರು ಎಂದು ಶ್ಲಾಘಿಸಿದ್ದಾರೆ.

ಬಸವಣ್ಣನ ಹಾದಿಯಲ್ಲಿ ಇಂದಿರಾಗಾಂಧಿ

ನಮ್ಮ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕು ನೀಡಿದೆ. ಜಾತಿ ವ್ಯವಸ್ಥೆಯಿಂದ ಅಸಮಾನತೆ ಹೆಚ್ಚಿದ್ದು, ಬಹುಸಂಖ್ಯಾತ ಜನರು, ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮೇಲ್ವರ್ಗದ ಹೆಣ್ಣುಮಕ್ಕಳೂ ಸಹ ಶಿಕ್ಷಣದಿಂದ ವಂಚಿತರಾಗಿದ್ದರು. ಸಮಸಮಾಜ ಪರಿಕಲ್ಪನೆಗೆ ಜೀವತುಂಬಿದ್ದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದರು. ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣವರ ಫೋಟೋವನ್ನು ಅಳವಡಿಸಲು ಆದೇಶ ನೀಡಿದೆ. ಇಂದಿರಾ ಗಾಂಧಿಯವರು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲೇ ನಡೆಯುವ ಪ್ರಯತ್ನವನ್ನು ಮಾಡಿದ್ದರು ಎಂದಿದ್ದಾರೆ.

ವಲ್ಲಭಭಾಯಿ ಪಟೇಲರು ದೇಶದ ಉಪ ಪ್ರಧಾನಿಗಳಾಗಿದ್ದರು. ಅಲ್ಲದೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ಅಗ್ರಗಣ್ಯರು. ಸ್ವಾತಂತ್ರ್ಯ ಗಳಿಸಿದಾಗ ದೇಶದಲ್ಲಿ 562 ಸಂಸ್ಥಾನಗಳನ್ನು ಭಾರತಕ್ಕೆ ಸೇರಿಸಲು ಆಗ ಗೃಹ ಸಚಿವರಾಗಿದ್ದ ಪಟೇಲರ ಪ್ರಯತ್ನವೇ ಕಾರಣ. ಅದಕ್ಕಾಗಿಯೇ ಅವರನ್ನು ಉಕ್ಕಿನ ಮನುಷ್ಯ ಎಂದು ಕರೆಯುತ್ತೇವೆ. ಅವರ 150ನೇ ಜನ್ಮದಿನದಂದು ಗೌರವದಿಂದ ಸ್ಮರಿಸುತ್ತೇನೆ ಎಂದು ಸಿದ್ದರಾಮಯ್ಯ ನೆನೆದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+