"ಸಾರ್ವಜನಿಕರೇ ರಸ್ತೆಗುಂಡಿಗಳನ್ನು ಗಮನಿಸಿ ಮಾಹಿತಿ ನೀಡುವ ವ್ಯವಸ್ಥೆ ಕರ್ನಾಟಕದಲ್ಲಿ ಮಾತ್ರ"
ಬೆಂಗಳೂರು, ಅಕ್ಟೋಬರ್01: ಸಾರ್ವಜನಿಕರೇ ರಸ್ತೆಗುಂಡಿಗಳನ್ನು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ ಇದ್ದರೆ ಅದು ಕರ್ನಾಟಕದಲ್ಲಿ ಮಾತ್ರ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ನಗರ ಪ್ರದಕ್ಷಿಣೆ, ರಸ್ತೆ ಕಾಮಗಾರಿಗಳ ಗುಣಮಟ್ಟ ಹಾಗೂ ಕಾಮಗಾರಿ ನಡೆದ ಸ್ಥಳಗಳಲ್ಲಿ ರಸ್ತೆಗಳು ಮತ್ತೆ ಹಾಳಾಗಿರುವ ಆರೋಪದ ಕುರಿತು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಇದೆಲ್ಲವೂ ಸುಳ್ಳು ಆರೋಪಗಳು. ರಸ್ತೆಗುಂಡಿಗಳ ದುರಸ್ತಿ ಕೆಲಸ ನಿರಂತರ ಪ್ರಕ್ರಿಯೆ. ಗುಣಮಟ್ಟ ಪರಿಶೀಲನೆ ನಡೆಸುವ ಸಲುವಾಗಿ ನಗರ ಪ್ರದಕ್ಷಿಣೆ ಮಾಡಲಾಗುತ್ತಿದೆ. ಸಾರ್ವಜನಿಕರ ಜೊತೆ ಚರ್ಚೆ ನಡೆಸುವ ಕಾರ್ಯಕ್ರಮದ ಬಗ್ಗೆಯೂ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ನಾವು ನಮ್ಮ ಪಾಲಿನ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಕೇವಲ ಗುಂಡಿಗಳನ್ನು ಮಾತ್ರ ಮುಚ್ಚದೇ ಅದರ ಸುತ್ತಲೂ ಅಚ್ಚುಕಟ್ಟಾಗಿ ಡಾಂಬರು ಹಾಕಿ ಗಟ್ಟಿ ಮಾಡಲಾಗುತ್ತಿದೆ. ಕೆಲವೊಂದು ಕಡೆ ಸುತ್ತಲಿನ ಮೇಲ್ಪದರವನ್ನೂ ದುರಸ್ತಿ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ನಗರದಲ್ಲಿ 1.20 ಕೋಟಿ ವಾಹನಗಳಿವೆ. ಪ್ರತಿನಿತ್ಯ ಹೊರಗಡೆಯಿಂದ 50 ಲಕ್ಷ ವಾಹನಗಳು ಬರುತ್ತವೆ. ಇಷ್ಟು ಒತ್ತಡವನ್ನು ನಮ್ಮ ರಸ್ತೆಗಳು ತಾಳಿಕೊಳ್ಳುತ್ತಿವೆ. ಹಲವಾರು ಕಡೆ ವೈಟ್ ಟಾಪಿಂಗ್ ಕಾಮಗಾರಿಯೂ ನಡೆಯುತ್ತಿದೆ ಎಂದರು.
ಕಂಜೆಕ್ಷನ್ ಶುಲ್ಕದ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಇದರ ಬಗ್ಗೆ ಒಂದಷ್ಟು ಜನರು ಸಲಹೆ ನೀಡಿದ್ದಾರೆ ಹೊರತು ಸರ್ಕಾರದ ಮುಂದೆ ಈ ರೀತಿಯ ಯಾವುದೇ ಪ್ರಸ್ತಾವನೆಯಿಲ್ಲ ಎಂದ ಅವರು, ಕಾವೇರಿ ಆರತಿಯೂ ಅತ್ಯಂತ ಸುಗಮವಾಗಿ ನೆರವೇರಿದೆ. ಈ ಕಾರ್ಯಕ್ರಮ ಮುಂದುವರೆಸುವ ಶಕ್ತಿ ನಮಗೆಲ್ಲರಿಗೂ ದೊರಕಲಿ. ಕಾವೇರಿ ನದಿ 3 ಕೋಟಿಗೂ ಅಧಿಕ ಜನರಿಗೆ ಜೀವನಾಡಿ. ಕರ್ನಾಟಕ, ತಮಿಳುನಾಡು ಜನರಿಗೆ ಇದರಿಂದ ಅನುಕೂಲವಾಗುತ್ತಿದೆ. ಪ್ರತಿವರ್ಷ ಇದೇ ರೀತಿ ತುಂಬಿ ಹರಿಯಲಿ ಎಂದು ನಾವೆಲ್ಲರೂ ಪ್ರಾರ್ಥಿಸೋಣ ಎಂದು ಡಿ ಕೆ ಶಿವಕುಮಾರ್ ಹೇಳಿದರು. ಕರ್ನಾಟಕದ ಹಾಗೂ ಈ ದೇಶದ ಸರ್ವರಿಗೆ, ರೈತರಿಗೆ ಆ ದುರ್ಗಾ ದೇವಿ ದಸರಾ ಹಬ್ಬದ ಸಂದರ್ಭದಲ್ಲಿ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications