ಕುಟುಂಬ ರಾಜಕಾರಣ: 3 ಕಾಂಗ್ರೆಸ್ ನಾಯಕರ ಮಕ್ಕಳಿಗೆ ಮಾತ್ರ ಟಿಕೆಟ್!
Recommended Video

ಬೆಂಗಳೂರು, ಏಪ್ರಿಲ್ 12: ಕರ್ನಾಟಕ ವಿಧಾನಸಭೆ ಚುನಾವಣೆ 2018ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಯಾವುದೇ ಕ್ಷಣದಲ್ಲಾದರೂ ಹೊರ ಬೀಳಬಹುದು. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವು ಕಾಂಗ್ರೆಸ್ ನಾಯಕರ ಮಕ್ಕಳು ತುದಿಗಾಲಲ್ಲಿ ನಿಂತಿದ್ದರು. ಆದರೆ ಅವರೆಲ್ಲರಿಗೂ ಕಾಂಗ್ರೆಸ್ ಹೈಕಮಾಂಡ್ ನಿರಾಸೆ ತಂದಿದೆ.
ಮೂಲಗಳ ಪ್ರಕಾರ ಕೇವಲ ಮೂವರು ಕಾಂಗ್ರೆಸ್ ನಾಯಕರ ಮಕ್ಕಳಿಗೆ ಮಾತ್ರ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ, ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಮಕ್ಕಳಿಗೆ ಟಿಕೆಟ್ ನೀಡುವ ಸಂಭವ ಇದೆ. ಇವರಲ್ಲದೆ ಸುಮಾರು 8 ನಾಯಕರು ತಮ್ಮ ಮಕ್ಕಳಿಗೆ ಟಿಕೆಟ್ ಕೇಳಿದ್ದರು. ಆದರೆ ಅವರಿಗೆ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕರ ಮಕ್ಕಳು ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಗಳನ್ನು ಅಳೆದು ತೂಗಿ ಈ ನಿರ್ಧಾರಕ್ಕೆ ಬರಲಾಗಿದೆಯಂತೆ. ಜತೆಗೆ ಜಾತಿ ರಾಜಕಾರಣವನ್ನೂ ಇಲ್ಲಿ ಲೆಕ್ಕ ಹಾಕಲಾಗಿದೆ.

ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಿಂದ ಟಿಕೆಟ್ ಪಡೆಯಲಿದ್ದಾರೆ. ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಜಯನಗರ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಲಿದ್ದಾರೆ.
ಇದೇ ಶುಕ್ರವಾರ 10 ಗಂಟೆಗೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಸೇರಲಿದ್ದು ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಮುದ್ರೆ ಒತ್ತಲಿದೆ. ಹೀಗಾಗಿ ಶುಕ್ರವಾರವೇ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ.












Click it and Unblock the Notifications