ಕಲಬುರಗಿ, ವಿಜಯಾಪುರ ಹೆಸರಿನಲ್ಲಿ ಹಲವು ಗೊಂದಲ
ಕಲಬುರಗಿ, ನ.5 : ಕರ್ನಾಟಕ ಸರ್ಕಾರ ನ.1ರಿಂದ ಜಾರಿಗೆ ಬರುವಂತೆ ರಾಜ್ಯದ 12 ನಗರಗಳ ಹೆಸರುಗಳನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಗುಲ್ಬರ್ಗ ಮತ್ತು ಬಿಜಾಪುರದ ಹೆಸರು ಬದಲಾವಣೆ ಮಾಡಿರುವುದು ಹಲವು ಗೊಂದಲಗಳಿಗೆ ಕಾರಣವಾಗಿದೆ.
ಮರು ನಾಮಕರಣದ ವೇಳೆ ಗುಲ್ಬರ್ಗದ ಹೆಸರನ್ನು ಕಲಬುರಗಿ ಎಂದು ಮತ್ತು ಬಿಜಾಪುರದ ಹೆಸರನ್ನು ವಿಜಯಾಪುರ ಎಂದು ಮರು ನಾಮಕರಣ ಮಾಡಿದ ಆದೇಶ ಜಿಲ್ಲೆಗಳಿಗೆ ತಲುಪಿದೆ. ಆದರೆ, ಈ ಆದೇಶದ ಬಗ್ಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. [12 ನಗರಗಳಿಗೆ ಇಂದಿನಿಂದ ಹೊಸ ಹೆಸರು]

ಕನ್ನಡಪರ ಸಂಘಟನೆಗಳು ಹೆಸರು ಬದಲಾವಣೆಯನ್ನು ಸ್ವಾಗತಿಸಿದರೆ, ಈ ನಿರ್ಧಾರ ಮುಸ್ಲಿಂ ವಿರೋಧಿ ಎಂದು ಆರೋಪಿಸಿರುವ ವಿವಿಧ ಮುಸ್ಲಿಂ ಸಂಘಟನೆಗಳು ಈ ಕುರಿತು ಪ್ರತಿಭಟನೆ ನಡೆಸಿವೆ. ಉಳಿದ 10 ನಗರಗಳ ಹೆಸರಿಗೂ ಯಾವುದೇ ವಿರೋಧ ವ್ಯಕ್ತವಾಗದಿದ್ದರೂ, ಕಲಬುರಗಿ ಮತ್ತು ವಿಜಯಾಪುರದ ಹೆಸರು ಗೊಂದಲ ಉಂಟು ಮಾಡಿದೆ. [ಗುಲ್ಬರ್ಗಾ ಹೆಸರು ಬದಲಾವಣೆಗೆ ಮುಸ್ಲಿಂ ವಿರೋಧ]
ವಿಜಯಪುರ, ವಿಜಯಾಪುರ : ಮರುನಾಮಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ 'ವಿಜಯಪುರ' ಎಂದು ಮುದ್ರಿತವಾಗಿದೆ. ಆದರೆ, ಕರ್ನಾಟಕ ಸರ್ಕಾರ ನ.1ರಂದು ಹೊರಡಿಸಿರುವ ಆದೇಶದಲ್ಲಿ 'ವಿಜಯಪುರ'ದ ಬದಲು 'ವಿಜಯಾಪುರ' ಎಂದಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಿಜಯಪುರ ಎಂದು ಮರು ನಾಮಕರಣಕ್ಕೆ ಕೇಂದ್ರ ಸರ್ಕಾರಕ್ಕೆ ಕೋರಲಾಗಿತ್ತು. ಆದರೆ, ಈಗ ವಿಜಯಾಪುರ ಎಂದಾಗಿದೆ. ಈ ಕುರಿತು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ 'ವಿಜಯಪುರ' ಎಂದು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಲಬುರಗಿ ಗೊಂದಲವೇನು : ಗುಲ್ಬರ್ಗದ ಹೆಸರನ್ನು ಕಲಬುರಗಿ ಎಂದು ಮರು ನಾಮಕರಣ ಮಾಡಲಾಗಿದೆ. ಇದು ಕನ್ನಡ ಮತ್ತು ಉರ್ದು ಭಾಷೆಗಳ ಮಧ್ಯೆ ಕಂದಕ ಉಂಟು ಮಾಡುವ ಪ್ರಯತ್ನ ಎಂದು ಹಲವು ಸಂಘಟನೆಗಳು ಆರೋಪಿಸಿವೆ. ಕಲಬುರಗಿ, ಕಲ್ಬುರ್ಗಿ ಇವುಗಳಲ್ಲಿ ಯಾವುದನ್ನು ಬರೆಯಬೇಕು ಎಂಬುದು ಗೊಂದಲ ಉಂಟುಮಾಡಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications