ಮೋದಿ ಬಲೂನಿನಂತೆ ಉಬ್ಬುತ್ತಿದ್ದಾರೆ: ದೇವೇಗೌಡ
ಕೊಲ್ಲೂರು, ನ. 20: ಅಪ್ಪನಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವಗ್ರಹ ಚಂಡಿಕಾಯಾಗ. ಈ ಮಧ್ಯೆ ಹಿರಿಯ ಪುತ್ರನಿಂದ 'ಕೈಯಲ್ಲಿ ನಿಂಬೆ ಹಣ್ಣು ಹಿಡಿದುಕೊಂಡೆ ಬೆಳಗಾವಿ ಅಧಿವೇಶನ ಪ್ರವೇಶಿಸುವೆ. ಸಿದ್ರಾಮಯ್ಯ ಸರಕಾರ ಮೂಢನಂಬಿಕೆ ಪ್ರತಿಬಂಧಕ ಕಾಯಿದೆಯಡಿ ಬೇಕಿದ್ದರೆ ನನ್ನನ್ನು ಬಂಧಿಸಬಹದು' ಎಂಬ ಸರಕಾರಿ ಸವಾಲ್!
ಇದಕ್ಕೆ ಸ್ವಲ್ಪ ವೈಜ್ಞಾನಿಕ ಟಚ್ ಸಹ ಇರಲಿ ಅಂತ ಮತ್ತೊಬ್ಬ ಪುತ್ರ ಎಚ್ ಡಿ ಕುಮಾರಸ್ವಾಮಿ ಅವರು ಭಾರತ ರತ ಗೌರವಕ್ಕೆ ಪಾತ್ರರಾಗಿರುವ ವಿಜ್ಞಾನಿ ಪ್ರೊ. ಸಿಎನ್ಆರ್ ರಾವ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಇವು ರಾಜ್ಯದ ಪ್ರಮುಖ ವಿರೋಧ ಪಕ್ಷವಾದ ಜೆಡಿಎಸ್ಸಿನಲ್ಲಿ ಪ್ರಮುಖ ಬೆಳವಣಿಗೆಗಳು.

ಮೂಢನಂಬಿಕೆ -ಮೂರ್ಖರ ಜತೆ ಚರ್ಚೆ ಮಾಡಬಾರದು
ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರ ನವಗ್ರಹ ಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಳೆದ 40 ವರ್ಷದಿಂದ ಕೊಲ್ಲೂರು ಕ್ಷೇತ್ರಕ್ಕೆ ಬರುತ್ತಿದ್ದೇನೆ. ಸೃಷ್ಟಿ ಲಯವನ್ನು ನಾವು ಒಪ್ಪಿಕೊಂಡಿದ್ದೇವೆ. ಇದು ಎಷ್ಟು ನಿಜ ಎಂದು ಯಾರೂ ಸಂಶೋಧನೆ ಮಾಡಿಲ್ಲ.
ಈ ಬಗ್ಗೆ ಮೂರ್ಖರ ಜತೆ ಚರ್ಚೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆತರಲು ಯತ್ನಿಸುತ್ತಿರುವ ಮೂಢನಂಬಿಕೆ ಪ್ರತಿಬಂಧಕ ಕಾಯಿದೆ ಬಗ್ಗೆ ದೇವೇಗೌಡರ ಸ್ಪಷ್ಟ ಅನಿಸಿಕೆ.

ಜೆಡಿಎಸ್ ಮುಗಿಸುವ ಸಂಚು
ಜೆಡಿಎಸ್ ಮುಗಿಸುವ ಸಂಚು ಎಲ್ಲೆಡೆ ನಡೆಯುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಬಲಪಡಿಸುವ ಹೋರಾಟ ಮುಂದುವರಿದಿದ್ದು, ರಾಜ್ಯದಲ್ಲಿ ಬಲಿಷ್ಠ ಪಕ್ಷವಾಗಿ ಮತ್ತೆ ಜೆಡಿಎಸ್ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದ ದೇವೇಗೌಡರು, ಶ್ರೀದೇವಿಯ ಪ್ರೇರಣೆಯಂತೆ ಪಕ್ಷ ಬಲಪಡಿಸುವ ಸಂಕಲ್ಪ ಕೈಗೊಂಡಿರುವುದಾಗಿ ಹೇಳಿದರು.

ಮೋದಿ ಬಲೂನಿನಂತೆ ಉಬ್ಬುತ್ತಿದ್ದಾರೆ:ದೇವೇಗೌಡ
ಈ ಮಧ್ಯೆ ಉಡುಪಿಯಲ್ಲಿ ಮಾತನಾಡಿರುವ ದೇವೇಗೌಡರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ನಡೆಸುತ್ತಿರುವ ಸಮಾವೇಶಗಳಿಂದ ಉಪಯೋಗವೇನೂ ಆಗುವುದಿಲ್ಲ. ಅದು ಬಿಜೆಪಿಯ ದೊಂಬರಾಟವಷ್ಟೇ' ಎಂದು ಕಟಕಿಯಾಡಿದ್ದಾರೆ.
ವಸಂತ ಸಾಲಿಯಾನ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಮೋದಿ ಬಲೂನಿನಂತೆ ಉಬ್ಬುತ್ತಿದ್ದಾರೆ. ಯಾವಾಗ ಠಪ್ ಅನ್ನುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.

ಸಿದ್ರಾಮಯ್ಯ ಮಲತಾಯಿ ಧೋರಣೆ
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಜೆಡಿಎಸ್ ನಾಯಕ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರು ಕೈಯಲ್ಲಿ ನಿಂಬೆ ಹಣ್ಣು ಹಣ್ಣು ಹಿಡಿದುಕೊಂಡೇ ಬೆಳಗಾವಿ ಅಧಿವೇಶನಕ್ಕೆ ಪ್ರವೇಶಿಸುವೆ. ಸಿದ್ರಾಮಯ್ಯ ಸರಕಾರ ಮೂಢನಂಬಿಕೆ ಪ್ರತಿಬಂಧಕ ಕಾಯಿದೆಯಡಿ ಬೇಕಿದ್ದರೆ ನನ್ನನ್ನು ಬಂಧಿಸಬಹದು' ಎಂಬ ಸರಕಾರಿ ಸವಾಲ್ ಎಸೆದಿದ್ದಾರೆ.
ಮೂಢನಂಬಿಕೆ/ಅಪವಾದ ದೂರಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕಾಏಕಿ ಆ ಜಿಲ್ಲೆಗೆ 1,600 ಕೋಟಿ ರೂ. ನೆರವು ಘೋಷಣೆ ಮಾಡಿದರು. ಆದರೆ, ಹಾಸನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ನಯಾಪೈಸೆ ನೆರವು ಘೋಷಣೆ ಮಾಡಲಿಲ್ಲ. ಈ ಮಲತಾಯಿ ಧೋರಣೆ ಏಕೆ ಎಂದು ರೇವಣ್ಣ ಟೀಕಿಸಿದರು.

ಸಿಎನ್ಆರ್ ರಾವ್ ಅಭಿನಂದನೆಗಳ ಮಹಾಪೂರ
ಭಾರತ ರತ ಗೌರವಕ್ಕೆ ಪಾತ್ರರಾಗಿರುವ ವಿಜ್ಞಾನಿ ಪ್ರೊ. ಸಿಎನ್ಆರ್ ರಾವ್ ಅವರಿಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಈ ನಡುವೆ ರಾಜ್ಯದ ಹೆಮ್ಮೆಯ ವಿಜ್ಞಾನಿಗೆ ರಾಜ್ಯದ ರಾಜಕೀಯ ನಾಯಕರು, ಮುಖಂಡರು, ವಿಜ್ಞಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಮಂಗಳವಾರ ನಗರದಲ್ಲಿ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಎಸ್ ಆರ್ ಪಾಟೀಲ, ವಿರೋಧ ಪಕ್ಷದ ನಾಯಕ ಎಚ್ಡಿ ಕುಮಾರಸ್ವಾಮಿ ಅಭಿನಂದಿಸಿ ಸನ್ಮಾನಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications