ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‌ಗೆ ಲಿಖಿತ ದೂರು

|
Google Oneindia Kannada News

Recommended Video

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಬೇಡ , ಹೈ ಕಮಾಂಡ್ ಗೆ ದೂರು | Oneindia Kannada

ಬೆಂಗಳೂರು, ಸೆಪ್ಟೆಂಬರ್ 09 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ. ಪಕ್ಷದ ಹಿರಿಯ ನಾಯಕರು ಸಿದ್ದರಾಮಯ್ಯ ವಿರುದ್ಧ ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರಿಗೆ ದೂರು ಕೊಟ್ಟಿದ್ದಾರೆ.

ಮೈತ್ರಿ ಸರ್ಕಾರ ಪತನಗೊಳ್ಳಲು ಸಿದ್ದರಾಮಯ್ಯ ಕಾರಣ ಎಂಬ ವಿಚಾರದ ಬಗ್ಗೆ ಭಾರಿ ಚರ್ಚೆ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮಾತಿನ ಸಮರ ದೆಹಲಿ ಮಟ್ಟಕ್ಕೆ ತಲುಪಿತ್ತು. ಹೈಕಮಾಂಡ್ ನಾಯಕರ ಸೂಚನೆ ಬಳಿಕ ಎಲ್ಲರೂ ಮೌನಕ್ಕೆ ಶರಣಾಗಿದ್ದರು.

ನನ್ನನ್ನು ಸೋಲಿಸಿದ್ದು ಜನ, ಯಾವ ನಾಯಕರೂ ಅಲ್ಲ: ಸಿದ್ದರಾಮಯ್ಯನನ್ನನ್ನು ಸೋಲಿಸಿದ್ದು ಜನ, ಯಾವ ನಾಯಕರೂ ಅಲ್ಲ: ಸಿದ್ದರಾಮಯ್ಯ

ಈಗ ಸಿದ್ದರಾಮಯ್ಯ ವಿರುದ್ಧ ಪಕ್ಷದ ಅಧ್ಯಕ್ಷರಾಗಿ ದೂರು ನೀಡಲಾಗಿದೆ. ಗಮನಿಸಬೇಕಾದ ಅಂಶವೆಂದರೆ ದೂರು ನೀಡಿರುವವರು ದೆಹಲಿ ಮಟ್ಟದಲ್ಲಿ ಪ್ರಭಾವ ಹೊಂದಿರುವ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರು.

ಗೋಕಾಕ್ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಿದ ಸಿದ್ದರಾಮಯ್ಯ?ಗೋಕಾಕ್ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಿದ ಸಿದ್ದರಾಮಯ್ಯ?

ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್‌ ಹೊಸಬರನ್ನು ತರಲು ಚಿಂತನೆ ನಡೆಸುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕನ ಸ್ಥಾನ ನೀಡಬಾರದು ಎಂಬುದು ಕೆಲವು ಹಿರಿಯ ನಾಯಕರ ಒತ್ತಾಯ. ಇದಕ್ಕೆ ಪೂರಕವಾದ ಅಂಶಗಳನ್ನು ಉಲ್ಲೇಖಿಸಿ ಲಿಖಿತ ರೂಪದಲ್ಲಿ ದೂರು ಕೊಡಲಾಗಿದೆ.

ತಾವು ಸಿಎಂ ಆಗಲು ಕಾರಣಕರ್ತರನ್ನು ನೆನೆದ ಸಿದ್ದರಾಮಯ್ಯತಾವು ಸಿಎಂ ಆಗಲು ಕಾರಣಕರ್ತರನ್ನು ನೆನೆದ ಸಿದ್ದರಾಮಯ್ಯ

ಬೇರೆಯವರಿಗೆ ಅವಕಾಶ ಕೊಡಿ

ಬೇರೆಯವರಿಗೆ ಅವಕಾಶ ಕೊಡಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಆರೋಪವಿದೆ. ಅವರಿಗೆ ಇದುವರೆಗೂ ಅಧಿಕಾರ ನೀಡಿದ್ದು ಸಾಕು. ಐದು ವರ್ಷ ಅವರು ಸಿಎಂ ಆಗಿದ್ದರು. ಈಗ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಬೇರೆಯವರಿಗೆ ನೀಡಿ, ಬೇರೆ ನಾಯಕರನ್ನು ಬೆಳೆಸಿದರೆ ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ಪತ್ರದಲ್ಲಿ ವಿವರಣೆ ನೀಡಲಾಗಿದೆ.

ಯಾರ ಹೆಸರು ಚಾಲ್ತಿಯಲ್ಲಿದೆ?

ಯಾರ ಹೆಸರು ಚಾಲ್ತಿಯಲ್ಲಿದೆ?

ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ನಿಂದ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ಎಚ್. ಕೆ. ಪಾಟೀಲ್ ಹೆಸರುಗಳು ಕೇಳಿ ಬರುತ್ತಿವೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಚ್‌. ಕೆ. ಪಾಟೀಲ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಡಿ. ಕೆ. ಶಿವಕುಮಾರ್‌ ಸಾಧ್ಯವಿಲ್ಲ

ಡಿ. ಕೆ. ಶಿವಕುಮಾರ್‌ ಸಾಧ್ಯವಿಲ್ಲ

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿ. ಕೆ. ಶಿವಕುಮಾರ್‌ಗೆ ಸದ್ಯಕ್ಕೆ ಪಕ್ಷದಲ್ಲಿ ಯಾವುದೇ ಸ್ಥಾನ ನೀಡುವ ಸಾಧ್ಯತೆ ಕಡಿಮೆ. ಆದ್ದರಿಂದ, ಎಚ್. ಕೆ. ಪಾಟೀಲ್ ಮತ್ತು ಸಿದ್ದರಾಮಯ್ಯ ರೇಸ್‌ನಲ್ಲಿ ಉಳಿಯುತ್ತಾರೆ. ಪಕ್ಷದ ಶಾಸಕರು ಯಾರಿಗೆ ಬೆಂಬಲ ನೀಡಲಿದ್ದಾರೆ? ಎಂಬುದನ್ನು ಕಾದು ನೋಡಬೇಕಿದೆ.

ಗಂಭೀರವಾಗಿ ಪರಿಗಣಿಸಲಿದೆಯೇ?

ಗಂಭೀರವಾಗಿ ಪರಿಗಣಿಸಲಿದೆಯೇ?

ಮೈತ್ರಿ ಸರ್ಕಾರ ಪತನವಾದಾಗ ಎಚ್. ಡಿ. ದೇವೇಗೌಡರು ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‌ಗೆ ದೂರು ಕೊಟ್ಟಿದ್ದರು. ಈಗ ಸ್ವತಃ ಪಕ್ಷದ ಹಿರಿಯ ನಾಯಕರೇ ದೂರು ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪದೇ ಪದೇ ದೂರು ಬರುತ್ತಿರುವ ಹಿನ್ನಲೆಯಲ್ಲಿ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಲಿದೆಯೇ?.

English summary
Section of the Karnataka Congress senior leaders complaint to party high command against former chief minister Siddaramaiah and urged not to elect him as opposition leader of the assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X