ನಾಯಕತ್ವ ಇಲ್ಲದೆ ದಿಕ್ಕು ಕಾಣದಂತಾದ ಇಂಡಿಯಾ ಒಕ್ಕೂಟ: ಆರ್‌. ಅಶೋಕ್‌

ಬೆಂಗಳೂರು, ಮಾರ್ಚ್ 23: ಈಚೆಗೆ ನಡೆದ 4 ರಾಜ್ಯಗಳ ಚುನಾವಣಾ ಸೆಮಿಫೈನಲ್‍ನಲ್ಲಿ 3 ರಾಜ್ಯಗಳನ್ನು ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಕಾಂಗ್ರೆಸ್ ಸೆಮಿಫೈನಲ್‍ನಲ್ಲಿ ಸೋತು ಸುಣ್ಣವಾಗಿದೆ. ನಾವಂತೂ ಫೈನಲ್‌ ತಲುಪಿದ್ದೇವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಕಾಂಗ್ರೆಸ್‌ ಪಕ್ಷದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ವಿಪಕ್ಷಗಳ ಇಂಡಿಯಾ ಒಕ್ಕೂಟ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. ಇಂಡಿಯಾ ಒಕ್ಕೂಟವು ನಾಯಕತ್ವ ಇಲ್ಲದೆ ದಿಕ್ಕು ಕಾಣದಂತಾಗಿದೆ ಎಂದರು.

Opposition Leader R Ashok Sarcasm Against I N D I A Union

ಮ್ಯಾಚ್ (ಚುನಾವಣೆ), ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ ಎಂದು ಇಂಡಿಯಾ ಒಕ್ಕೂಟ ವಿರುದ್ಧ ಲೇವಡಿ ಆಡಿದರು.

ಜನರ ಭಾವನೆ, ಜನಮಿಡಿತದೊಂದಿಗೆ ಮೋದಿಯವರು ಗೆಲ್ಲಲಿದ್ದಾರೆ. ನಾಯಕತ್ವ ಘೋಷಣೆ ಆಗುವ ಮೊದಲೇ ಮ್ಯಾಚ್ (ಚುನಾವಣೆ) ನಡೆಯಲಿದ್ದು, ಇಂಡಿಯಾ ಒಕ್ಕೂಟ ಸೋತು ಸುಣ್ಣವಾಗಲಿದೆ. ಕರ್ನಾಟಕದಲ್ಲೂ ನಮಗೆ ಒಳ್ಳೆಯ ವಾತಾವರಣ ಇದೆ. 10 ತಿಂಗಳಲ್ಲಿ 10 ತಪ್ಪು, 10 ಭ್ರಷ್ಟಾಚಾರಗಳನ್ನು, ಸಮಾಜದ್ರೋಹಿಯಾದ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ ಎಂದರು.

ಮಂಡ್ಯದಲ್ಲಿ ಹನುಮಧ್ವಜ ಇಳಿಸಿ ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರ ರಾಮ ಜನ್ಮಭೂಮಿಯ ಕೇಸ್‌ಅನ್ನು 24 ವರ್ಷಗಳ ಬಳಿಕ ಕೆದಕಿ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು, ಅವರು ಕಾಂಗ್ರೆಸ್ ಕಾರ್ಯಕರ್ತರೆಂದು ಸಾಬೀತಾಗಿದೆ ಎಂದು ತಿಳಿಸಿದರು.

ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇ ರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು ಎಂದರು. ಹಾಗೂ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+