ತನಗೆ ಅನ್ನಬಾರದ್ದನ್ನೆಲ್ಲಾ ಅಂದಿದ್ದ, ಅದೇ ಕಾಂಗ್ರೆಸ್ ಅಭ್ಯರ್ಥಿ ಪರ ಸಿದ್ದರಾಮಯ್ಯ ಭರ್ಜರಿ ಪ್ರಚಾರ
ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಉಪಚುನಾವಣೆಯ ಫಲಿತಾಂಶ, ಸರಕಾರದ ಅಳಿವು ಉಳಿವಿನ ಪ್ರಶ್ನೆಯಾದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಇದು ಪ್ರತಿಷ್ಠೆಯ ಪ್ರಶ್ನೆ.
ಹಾಗಾಗಿ, ಕಾಲಿಗೆ ಚಕ್ರ ಇಟ್ಟುಕೊಂಡ ಹಾಗೇ, ಇಬ್ಬರೂ ನಾಯಕರು, ಎಲ್ಲಾ ಹದಿನೈದು ಕ್ಷೇತ್ರಗಳಲ್ಲಿ ಸಂಚರಿಸುತ್ತಾ, ಪಕ್ಷದ ಅಭ್ಯರ್ಥಿಯ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಟಿಕೆಟ್ ಹಂಚಿಕೆಯಲ್ಲಿ ಮೇಲುಗೈ ಸಾಧಿಸಿದ್ದ ಸಿದ್ದರಾಮಯ್ಯ, ಪಕ್ಷದ ಪ್ರಚಾರದಲ್ಲೂ ಮಂಚೂಣಿಯಲ್ಲಿದ್ದಾರೆ. "ನೀವು ಒಮ್ಮೆ ಪ್ರಚಾರಕ್ಕೆ ಬರಲೇ ಬೇಕು ಸಾರ್" ಎನ್ನುವ ಒತ್ತಡ, ಸಿದ್ದರಾಮಯ್ಯನವರಿಗೆ ಹೆಚ್ಚಾಗುತ್ತಿದೆ.
ಸಿದ್ದರಾಮಯ್ಯನವರಿಗೆ ತಮ್ಮ ಪಕ್ಷದಲ್ಲೇ ವಿರೋಧಿಗಳು ಇರುವುದು ಗೊತ್ತಿರುವ ವಿಚಾರ. ವರ್ಷಗಳ ಹಿಂದೆ, "ಸಿದ್ದರಾಮಯ್ಯನವರ ಮೈಯಲ್ಲಿ ಕಾಂಗ್ರೆಸ್ ರಕ್ತವೇ ಇಲ್ಲ" ಎಂದು ಟೀಕಿಸಿದ್ದ, ಅದೇ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ, ಸಿದ್ದರಾಮಯ್ಯ ಸ್ಟಾರ್ ಪ್ರಚಾರಕರಾಗಿ, ಒಂದು ರೌಂಡ್, ಪ್ರಚಾರ ಮಾಡಿಬಂದಿದ್ದಾರೆ.

ತನ್ನ ಸೋಲಿಗೆ, ಸಿದ್ದರಾಮಯ್ಯನೇ ಕಾರಣ
ಕಾಲಚಕ್ರ ಹೇಗೆ ತಿರುಗುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಾಗಬಲ್ಲದು. 2018ರ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ , ಕೃಷ್ಣಪ್ಪ ಭೀಮಪ್ಪ ಕೋಳಿವಾಡ, ರಾಣೆಬೆನ್ನೂರು ಕ್ಷೇತ್ರದಿಂದ ಪರಾಭವಗೊಂಡಿದ್ದರು. ಕೋಳಿವಾಡ, ಕೆಪಿಜೆಪಿ ಅಭ್ಯರ್ಥಿ ಆರ್. ಶಂಕರ್ ಎದುರು, 4,338 ಮತಗಳ ಅಂತರದಿಂದ ಸೋತಿದ್ದರು. ಚುನಾವಣೆ ಎಂದ ಮೇಲೆ, ಸೋಲು ಗೆಲುವು ಸಹಜ. ಆದರೆ, ತನ್ನ ಸೋಲಿಗೆ, ಸಿದ್ದರಾಮಯ್ಯನೇ ಕಾರಣ ಎಂದು ಕೋಳಿವಾಡ, ಏಕವಚನದಲ್ಲಿ ಹರಿಹಾಯ್ಡಿದ್ದರು.

ಸಿದ್ದರಾಮಯ್ಯನವರ ಮೈಯಲ್ಲಿ ಕಾಂಗ್ರೆಸ್ ರಕ್ತವೇ ಇಲ್ಲ
"ಸಿದ್ದರಾಮಯ್ಯನವರಿಂದ ಕಾಂಗ್ರೆಸ್ಸಿಗೆ ಅನುಕೂಲವಾಗುವುದಿಲ್ಲ, ಪಕ್ಷ ಅವನತಿ ಹೊಂದುತ್ತದೆ. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ಪಕ್ಷದಲ್ಲಿ ಉಳಿಸಿಕೊಳ್ಳಬಾರದು. ಅವರಲ್ಲಿ ಕಾಂಗ್ರೆಸ್ ರಕ್ತವೇ ಇಲ್ಲ. ಸಿದ್ದರಾಮಯ್ಯನವರಿಗೆ ಯಾವುದೇ ಜವಾಬ್ದಾರಿಯುತ ಸ್ಥಾನ ಕೊಡಬೇಡಿ ಎಂದು ನಾನೇ ರಾಹುಲ್ ಗಾಂಧಿಗೆ ಹೇಳುತ್ತೇನೆ" ಎಂದು ಕೋಳಿವಾಡ ಹೇಳಿದ್ದರು.

ಕೋಳಿವಾಡ್, ಸಿದ್ದರಾಮಯ್ಯ ವಿರುದ್ದ ಗುಡುಗಿದ್ದರು
ಆದರೆ, ಕೋಳಿವಾಡ ಅವರ ಯಾವ ಆರೋಪಕ್ಕೂ ಸಿದ್ದರಾಮಯ್ಯ ಅಂದು ಉತ್ತರಿಸಿರಲಿಲ್ಲ. ಅದಾದ ನಂತರ, ಲೋಕಸಭಾ ಚುನಾವಣಾ ಫಲಿತಾಂಶ ಬಂದಾಗಲೂ, ಕೋಳಿವಾಡ, ಸಿದ್ದರಾಮಯ್ಯ ವಿರುದ್ದ ಗುಡುಗಿದ್ದರು. ಕೆಪಿಸಿಸಿ ಅವರಿಗೆ ಕಾರಣ ಕೇಳಿ ನೊಟೀಸ್ ಜಾರಿ ಮಾಡಿತ್ತು. ಈಗ, ಅದೇ ಕೋಳಿವಾಡಗೆ ರಾಣೆಬೆನ್ನೂರು ಟಿಕೆಟ್ ಸಿಗಲು ಕಾರಣವಾಗಿದ್ದು, ಸಿದ್ದರಾಮಯ್ಯ.

ಕಾಂಗ್ರೆಸ್ ಪಕ್ಷದ ಬೃಹತ್ ಬಹಿರಂಗ ಸಭೆ
ರಾಣೆಬೆನ್ನೂರಿನಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಬಹಿರಂಗ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಕೆ.ಬಿ ಕೋಳಿವಾಡ ಅವರಿಗೆ ಮತ ನೀಡುವಂತೆ ಸಿದ್ದರಾಮಯ್ಯ ಕೋರಿದ್ದರು. "ಹಣ ಮತ್ತು ಅಧಿಕಾರದ ದುರಾಸೆಗೆ ಪಕ್ಷಾಂತರ ಮಾಡಿದ ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸಬೇಕೆಂದರೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅರ್ಹ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿ" ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದರು.

ರಾಜಕೀಯ ವೃತ್ತಿಪರತೆ ತೋರಿದ ಸಿದ್ದರಾಮಯ್ಯ
ಕ್ಷೇತ್ರದಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೋಳಿವಾಡ ಪರ ಮತ ಯಾಚಿಸಿದರು. ಅಂದು ಸಿದ್ದರಾಮಯ್ಯನವರ ಮೈಯಲ್ಲಿ ಕಾಂಗ್ರೆಸ್ ರಕ್ತ ಇಲ್ಲ ಎಂದಿದ್ದ ಕೋಳಿವಾಡ ಅವರಿಗೆ, ಸಿದ್ದರಾಮಯ್ಯನವರ ಪ್ರಚಾರ ಬೇಕಾಯಿತಾ ಅಥವಾ ಕ್ಷೇತ್ರವನ್ನು ಗೆಲ್ಲುವುದು ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯಾಯಿತಾ? ಒಟ್ಟಿನಲ್ಲಿ, ತನಗೆ ಅನ್ನಬಾರದ್ದೆಲ್ಲಾ ಅಂದಿದ್ದ, ಅದೇ ಕಾಂಗ್ರೆಸ್ ಅಭ್ಯರ್ಥಿ ಪರ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿ, ರಾಜಕೀಯ ವೃತ್ತಿಪರತೆ ತೋರಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications