ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಯಲ್ಲಿನ ಗೊಂದಲ: ಡೌಟ್ ಕ್ಲಿಯರ್ ಮಾಡಿದ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 15: ಪ್ರಸಕ್ತ ವಿಧಾನಮಂಡಲ ಅಧಿವೇಶನದ ಬಜೆಟ್ ಮೇಲಿನ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
"ಮುಂದಿನ ಚುನಾವಣೆಯಲ್ಲಿ ನೀವು ಸ್ಪರ್ಧಿಸುತ್ತೀರೋ, ಇಲ್ಲವೋ ಎನ್ನುವ ಗೊಂದಲ ಬಹಳಷ್ಟಿದೆ, ಮೊದಲು ಸದನದಲ್ಲಿ ಅದಕ್ಕೆ ಉತ್ತರ ಕೊಡಿ"ಎಂದು ಸ್ಪೀಕರ್ ಕಾಗೇರಿಯವರು, ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.
ಆಗ ಎದ್ದು ನಿಂತ ಮಾಜಿ ಸ್ಪೀಕರ್ ಮತ್ತು ಸಿದ್ದರಾಮಯ್ಯನವರ ಪರಮಾಪ್ತ ರಮೇಶ್ ಕುಮಾರ್, "ಅವರು ನಿಲ್ಲದೇ ಇರುವ ಪ್ರಮೇಯವೇ ಇಲ್ಲ, ಅವರು ಚುನಾವಣೆಗೆ ನಿಂತೇ ನಿಲ್ಲುತ್ತಾರೆ, ಮುಂದೆ ಇತಿಹಾಸ ಏನಾಗುತ್ತೆ ನೋಡೋಣ"ಎಂದು ಹೇಳಿದರು.

ಆಗ ಮಾತನಾಡಿದ ಸಿದ್ದರಾಮಯ್ಯ, "ಐ ಡೋಂಟ್ ರನ್ ವೇ..ನಾನು ಚುನಾವಣೆಗೆ ನಿಂತೇ ನಿಲ್ಲುತ್ತೇನೆ. ಈಗ ರಾಜ್ಯದ ಜನರಿಗೆ ಇರುವ ಡೌಟ್ ಎಲ್ಲಾ ಕ್ಲಿಯರ್ ಆಯಿತಲ್ವಾ"ಎಂದು ಸಿದ್ದರಾಮಯ್ಯನವರು ಸ್ಪರ್ಧೆಯ ವಿಚಾರದಲ್ಲಿ ಸ್ಪಷ್ಟನೆಯನ್ನು ನೀಡಿದರು.
ಆಗ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಎಂದು ಸಚಿವ ಅಶೋಕ್ ಪ್ರಶ್ನಿಸಿದಾಗ, "ನಾನು ಪದ್ಮನಾಭ ನಗರದಿಂದ ಸ್ಪರ್ಧಿಸುತ್ತೇನೆ"ಎಂದು ಸಿದ್ದರಾಮಯ್ಯ ಹೇಳಿದಾಗ, "ಯು ಆರ್ ಮೋಸ್ಟ್ ವೆಲ್ಕಂ" ಎಂದು ಅಶೋಕ್ ಪ್ರತಿಕ್ರಿಯೆ ನೀಡಿದರು.
"ನಾನು ಈಗ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿದ್ದೇನೆ. ಮುಂದಿನ ಚುನಾವಣೆಯಲ್ಲೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ"ಎಂದು ಸಿದ್ದರಾಮಯ್ಯ ಹೇಳಿದಾಗ, "ನಮ್ ಕಡೆ ಬನ್ನಿ ಸಿದ್ರಾಮಣ್ಣ"ಎಂದು ಎಚ್.ಡಿ.ರೇವಣ್ಣ ಆಹ್ವಾನ ನೀಡಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications