ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು ಅಂತಿಂತವಲ್ಲ

ಬೆಂಗಳೂರು, ಆ 21: ಕೆಜೆ ಹಳ್ಳಿಯಲ್ಲಿ ನಡೆದ ಗಲಭೆಯ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ದಿನ ಹೋದಂತೆ ತೀವ್ರಗೊಳ್ಳುತ್ತಿದೆ. ಏಟಿಗೆ ಎದಿರೇಟು, ಆರೋಪಕ್ಕೆ ಪ್ರತ್ಯಾರೋಪ ಮುಗಿಲು ಮುಟ್ಟುತ್ತಿದೆ.

Recommended Video

      Sumalatha ಸೊಂಟಕ್ಕೆ ಕೈ ಹಾಕಿದ Yediyurappa | Onendia Kannada

      "ಸಿದ್ದರಾಮಯ್ಯ ಹಿಂದುಳಿದ ವರ್ಗದ ನಕಲಿ ನಾಯಕ. ಅವರು ಮುಖ್ಯಮಂತ್ರಿಯಾಗಿದ್ದ ವೇಳೆ, ಕರಾವಳಿ ಭಾಗದಲ್ಲಿ 23 ಹಿಂದೂ ಯುವಕರು ಸಾವನ್ನಪ್ಪಿದ್ದಾರೆ"ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದರು.

      ಇದಕ್ಕೆ ಸಾಲುಸಾಲು ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, "ಬೌದ್ದಿಕ ದಾರಿದ್ಯ್ರದಿಂದಾಗಿ ನಳಿನ್ ಕುಮಾರ್‌ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ" ಎಂದು ಕಿಡಿಕಾರಿದ್ದಾರೆ.

      ಸಿದ್ದರಾಮಯ್ಯ ಮಾಡಿರುವಾ ಟ್ವೀಟ್ ಹೀಗಿದೆ, "@nalinkateel ಅವರೇ, 2013-18ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ".

      ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆ

      ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆ

      "2013-18ರ ಅವಧಿಯಲ್ಲಿ ಕೋಮುಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?" - ಸಿದ್ದರಾಮಯ್ಯ ಟ್ವೀಟ್.

      ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿದ್ದು

      ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿದ್ದು

      "ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ @nalinkateel?" - ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್.

      ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ

      ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ

      "ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ @nalinkateel ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ?" - ಸಿದ್ದರಾಮಯ್ಯ.

      ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್

      ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್

      "ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ @nalinkateel ಅವರೇ, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ?" - ಸಿದ್ದರಾಮಯ್ಯ.

      ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈ

      ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈ

      "ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ?" - ಸಿದ್ದರಾಮಯ್ಯ.

      ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆ

      ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆ

      "ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, @nalinkateel ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು" - ಇದು ಸಿದ್ದರಾಮಯ್ಯ ಮಾಡಿದ ಟ್ವೀಟ್.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+