ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಸೋಲಿಸಲು ಬಯಸಿದ್ದ ಸಿದ್ದರಾಮಯ್ಯ!
ಬೆಂಗಳೂರು, ಮೇ 3: ಎರಡು ಅಸೆಂಬ್ಲಿ ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಬಿಜೆಪಿ ಗೆದ್ದರೆ, ಮಸ್ಕಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆ.
— H D Kumaraswamy (@hd_kumaraswamy) May 3, 2021
3/4
ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಸೋಲಲು ಜೆಡಿಎಸ್ ತಮ್ಮ ಅಭ್ಯರ್ಥಿ ನಿಲ್ಲಿಸಿದ್ದೇ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಬೇಕೆಂದು ಖುದ್ದು ಸಿದ್ದರಾಮಯ್ಯನವರೇ ಬಯಸಿದ್ದರು ಎನ್ನುವ ಗಂಭಿರ ಆರೋಪವನ್ನು ಎಚ್ಡಿಕೆ ಮಾಡಿದ್ದಾರೆ.
ಈ ಬಗ್ಗೆ ಎಚ್ಡಿಕೆ ಟ್ವೀಟ್ ಮಾಡಿದ್ದು ಹೀಗೆ, " ಮಾನ್ಯ ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ.. ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

"ಬಸವಕಲ್ಯಾಣದಲ್ಲಿ ಜೆಡಿಎಸ್ ಪಡೆದ ಮತಗಳು ನಮ್ಮ ಮತಗಳು ಎಂದಿದ್ದೀರಿ. ಇದು ಪ್ರಜ್ಞಾವಂತ ಮತದಾರನಿಗೆ ನೀವು ಮಾಡಿದ ಅವಮಾನ ಅಲ್ಲದೆ ಮತ್ತೇನು? ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ? ಜನಾದೇಶವನ್ನು ಒಪ್ಪಿಕೊಳ್ಳುವ ನಿಸ್ಪೃಹ ಮನಸ್ಸು ನಿಮಗೂ ಇರಬೇಕಲ್ಲವೇ? ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ?" ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
"ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆ"ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
"ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಪಕ್ಷ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಲ್ಲ ಸ್ವಾತಂತ್ರ್ಯವನ್ನು ಹೊಂದಿದೆ ಮತ್ತು ಬರುವ ದಿನಗಳಲ್ಲಿ ಮತ್ತಷ್ಟು ಸಮರ್ಥವಾಗಿ ಜನರ ವಿಶ್ವಾಸ ಗೆಲ್ಲಲಿದೆ ಎಂಬುದು ನಿಮಗೆ ಗೊತ್ತಿರಲಿ"ಎನ್ನುವ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತ ಪಡಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications