ಬಜೆಟ್ನಲ್ಲಿ ಕರ್ನಾಟಕ ಕಡಗಣನೆ; ಆಂಧ್ರಪ್ರದೇಶ, ಬಿಹಾರ ಭರ್ಜರಿ ಕೊಡುಗೆ: ಎಚ್.ಕೆ. ಪಾಟೀಲ ಏನಂದ್ರು?
ಬೆಂಗಳೂರು, ಜುಲೈ 24: ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್ ಭಾರತೀಯ ಮಾನವ ಸಂಪನ್ಮೂಲದ ಸದ್ಭಳಕೆಗೆ ಯಾವುದೇ ರೀತಿಯ ಕಾರ್ಯಕ್ರಮ ರೂಪಿಸದೇ ಕೇವಲ ಅಂಕಿ-ಸಂಖ್ಯೆಗಳ ಮೂಲಕ ಗೊಂದಲ ಸೃಷ್ಟಿಸಿ, ನಿರಾಸೆ ಮೂಡಿಸಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
"ವಿಕಸಿತ ಭಾರತ" ಎಂಬ ಹುಸಿ ಕಲ್ಪನೆಯನ್ನು ಅನಾವರಣಗೊಳಿಸಿರುವ ಕೇಂದ್ರದ ಬಜೆಟ್ ಐದು ವರ್ಷಗಳ ಅವಧಿಯಲ್ಲಿ 135 ಕೋಟಿ ಭಾರತೀಯ ಜನಸಂಖ್ಯೆಯ ಪೈಕಿ 20 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವ ಬಗ್ಗೆ ಪ್ರಸ್ತಾಪಿಸಿರುವುದು ಹಾಸ್ಯಸ್ಪದವಾಗಿದೆ. ರೂ.7.50 ಲಕ್ಷ ಸಾಲ ನೀಡುವ ಕಲ್ಪನೆ ಕೇವಲ ಕಲ್ಪನೆಯಾಗಿಯೇ ಉಳಿಯಲಿದೆ, ಏಕೆಂದರೆ ಇಲ್ಲಿಯವರೆಗೂ ಬ್ಯಾಂಕ್ಗಳು ನಿರುದ್ಯೋಗಿಗಳಿಗೆ ಭದ್ರತೆ ರಹಿತ ಸಾಲವನ್ನೇ ನೀಡಿಲ್ಲ. ಇದರಿಂದಾಗಿ ಇಂತಹ ಯೋಜನೆಗಳು ಕೇವಲ ಕಣ್ಣೊರೆಸುವ ತಂತ್ರಗಳಾಗಿವೆ.

ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತದ ಇತರ ರಾಜ್ಯಗಳನ್ನು ಕಡೆಗಣಿಸಿದೆ. ರಾಷ್ಟ್ರೀಯ ಸಹಕಾರ ನೀತಿಯನ್ನು ಜಾರಿಗೆ ತರುವ ಪ್ರಸ್ತಾಪಿಸಿರುವ ಹಣಕಾಸು ಸಚಿವರು ಸಹಕಾರಿ ರಂಗದ ಬ್ಯಾಂಕ್ಗಳು ಮತ್ತು ಇತರ ಪತ್ತಿನ ಸಹಕಾರಿ ಸಂಘಗಳ ಕಾರ್ಯನಿರ್ವಹಣೆಗೆ ಅಡೆತಡೆ ತರುವ ಕೆಲವು ಕೇಂದ್ರದ ನೀತಿಗಳ ಕುರಿತು ಯಾವುದೇ ಪ್ರಸ್ತಾಪ ಮಾಡಿರುವುದಿಲ್ಲ.
"ಪ್ರಧಾನ ಮಂತ್ರಿ ನಗರ ಆವಾಸ್ ಯೋಜನೆ-2" 1 ಕೋಟಿ ನಗರ ಪ್ರದೇಶದ ಬಡವರು ಮತ್ತು ಮಧ್ಯಮವರ್ಗದ ಕುಟುಂಬದವರಿಗೆ ವಸತಿ ಯೋಜನೆ ಒದಗಿಸುವ ಉದ್ದೇಶಕ್ಕಾಗಿ ರೂ.10.00 ಲಕ್ಷ ಕೋಟಿ ರೂಪಾಯಿಗಳನ್ನು ಒದಗಿಸಿರುವುದಾಗಿ ಹೇಳಿದೆ. ಆದರೆ "ಪ್ರಧಾನ ಮಂತ್ರಿ ನಗರ ಆವಾಸ್ ಯೋಜನೆ-1" 2 ಕೋಟಿ ಮನೆಗಳನ್ನು ಒದಗಿಸುವ ಯೋಜನೆ ಕಾರ್ಯಗತಗೊಂಡಿಲ್ಲ. ಇದೊಂದು ಕೇವಲ ಕಾಗದದ ಹುಲಿಯಾಗಿದೆ.
ಕೇಂದ್ರ ಸರ್ಕಾರದ ಈ ಮುಂಗಡ ಪತ್ರವು ಕೇವಲ ಶ್ರೀಮಂತರು, ಮೇಲ್ಮಧ್ಯಮ ವರ್ಗದವರ ಅವಶ್ಯಕತೆಗಳನ್ನು ಪೂರೈಸುವತ್ತ ಅತೀ ಹೆಚ್ಚು ಗಮನಹರಿಸಿದ್ದು, ಬಡವರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ ಮತ್ತು ಜನಾಂಗದ ಹಾಗೂ ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತರ ಅವಕಾಶ ವಂಚಿತ ಜನರ ಕಲ್ಯಾಣಕ್ಕಾಗಿ ಪರಿಣಾಮಕಾರಿಯಾದ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ.
ಅರ್ಥ ವ್ಯವಸ್ಥೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಯಾವುದೇ ಯೋಜನೆಗಳನ್ನು ಪ್ರಕಟಿಸದ ಕೇಂದ್ರ ಸರ್ಕಾರ ರಾಷ್ಟçದ ಜನತೆಗೆ ನಿರಾಸೆ ಮೂಡಿಸಿದೆ. ಕರ್ನಾಟಕದ ಯಾವುದೇ ಪರಿಣಾಮಕಾರಿ ನೀರಾವರಿ ಯೋಜನೆಯಾಗಲಿ ಅಥವಾ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ರೀತಿಯ ಹಣ ಒದಗಿಸದೇ ಕರ್ನಾಟಕ ರಾಜ್ಯಕ್ಕೆ ಏಮ್ಸ್ ಮತ್ತು ಐಐಟಿಗಳ ಪ್ರಸ್ತಾಪಗಳಿಲ್ಲದೇ ಮಂಡಿಸಿರುವ ಈ ಮುಂಗಡ ಪತ್ರ ಕರ್ನಾಟಕದ ಜನತೆಗೆ ಬಿಜೆಪಿ ಭ್ರಮನಿರಸನಗೊಳಿಸಿದೆ.
ಯಾವುದೇ ದೂರದೃಷ್ಟಿಯಿಲ್ಲದ ಪುರೋಗಾಮಿಯಾಗಿರದ ಈ ಮುಂಗಡ ಪತ್ರ ರಾಷ್ಟ್ರದ ಜನತೆಗೆ ಸಂಪೂರ್ಣವಾಗಿ ಮೋಸಗೊಳಿಸಿದೆ. ಆದರೆ ಈ ಮುಂಗಡ ಪತ್ರದ ಭಾಷಣದಲ್ಲಿ ಅರ್ಥ ಸಚಿವೆ ಶ್ರೀಮತಿ. ನಿರ್ಮಲ ಸೀತಾರಾಮನ ರವರು ಲೋಕಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಪುಟ 30ರಲ್ಲಿ ವಿವರಿಸಿರುವ ಉದ್ಯೋಗಕ್ಕೆ ಉತ್ತೇಜನ ನೀಡುವ ವಿಷಯವನ್ನು ಬಜೆಟ್ನಲ್ಲಿ ಅಳವಡಿಸಿಕೊಂಡಿರುವುದಕ್ಕೆ ನನಗೆ ಸಂತಸವಾಗಿದೆ. ನಿರುದ್ಯೋಗಿಗಳಿಗೆ ಅಪ್ರೆಂಟಿಸ್ಶಿಪ್ ಭತ್ಯೆಯೊಂದಿಗೆ ಯಥಾವತ್ತಾಗಿ ಕಾಂಗ್ರೆಸ್ನ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಭರವಸೆಯ ಪರಿಣಾಮಕಾರಿ ಯೋಜನೆಯನ್ನು ಅತ್ಯಂತ ವ್ಯಾಪಕವಾಗಿ ಬಿಂಬಿಸಿರುವುದಕ್ಕೆ ಅಭಿನಂದಿಸುವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications