ಕರ್ನಾಟಕದಿಂದ ಕಾಂಗ್ರೆಸ್ ಕಿತ್ತೆಸೆಯೋಣ: ಬಿ.ಎನ್. ವಿಜಯಕುಮಾರ್
ಬೆಂಗಳೂರು, ಮಾರ್ಚ್ 10: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬೆಂಗಳೂರು ಸಮಸ್ಯೆಯ ಬೀಡಾಗಿದೆ. ಡ್ರಗ್ಸ್ ಮಾಫಿಯಾ ಹೆಚ್ಚಿದೆ, ಇರಾನಿಗಳು, ಸೌತ್ ಆಫ್ರಿಕಾದದಿಂದ ಬಂದಿರುವವರು ಡ್ರಗ್ ಮಾಫಿಯಾ ನಡೆಸುತ್ತಿದ್ದಾರೆ. ನಿಮ್ಮ ಮಕ್ಕಳು ತಿನ್ನೋ ಸೌತೆಕಾಯಿ, ಪಾನಿ ಪುರಿ ಎಲ್ಲದರಲ್ಲೂ ಡ್ರಗ್ಸ್ ಇರುತ್ತೆ ಎಂದು ಬಿಜೆಪಿ ಮುಖಂಡ, ಜಯನಗರ ಶಾಸಕ ಬಿ.ಎನ್.ವಿಜಯಕುಮಾರ್ ಹೇಳಿದರು.
ರಾಜ್ಯ ಬಿಜೆಪಿ ನಡೆಸುತ್ತಿರುವ ಬೆಂಗಳೂರು ರಕ್ಷಿಸಿ ಯಾತ್ರೆ ಇಂದು(ಮಾ.10) ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಜಯನಗರದಲ್ಲಿ ಬಿಜೆಪಿ ನಾಯಕರು ಪಾದಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ್, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕೆಲಸಗಳು ಆಗುತ್ತಿಲ್ಲ. ಕಸದ ಸಮಸ್ಯೆ ನಿವಾರಣೆ ಮಾಡೋದಕ್ಕೆ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕೆ. ಆರ್ ಪುರಂ ಕ್ಷೇತ್ರದಲ್ಲಿ 118 ಕೊಲೆಗಾಳಾಗಿವೆ. ಇಷ್ಟೆಲ್ಲ ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರಕ್ಕೆ ಇವನ್ನೆಲ್ಲ ನಿಯಂತ್ರಣಕ್ಕೆ ತರುವುದಕ್ಕೆ ಸಾಧ್ಯವಾಗುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಬಗ್ಗೆ ಚಿಂತಿಸುತ್ತಿಲ್ಲ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಬೆಂಗಳೂರು ಉಳಿಯಬೇಕು ಅಂದ್ರೆ ಮೊದಲು ಈ ಸರ್ಕಾರವನ್ನು ಕಿತ್ತೆಸೆಯಿರಿ. ರಾಜ್ಯವನ್ನು ಕಾಂಗ್ರೆಸ್ ಮುಕ್ತಮಾಡೋಣ ಎಂದು ಅವರು ಕರೆನೀಡಿದರು.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್, ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ಬೇಕಿರೋದು ಎಟಿಎಂ ಗಾಗಿ. ಅವರು ಸೋತ್ರೆ ಸಿದ್ದರಾಮನ ಹುಂಡಿಗೆ ಹೋಗ್ತಾರೆ. ಆದ್ರೆ ನಾವು ಗೆದ್ದರೂ ಇಲ್ಲೆ, ಸೋತರೂ ಇಲ್ಲೆ! ಬೆಂಗಳೂರನ್ನು ಇಂಥವರಿಂದ ರಕ್ಷಿಸಬೇಕಿದೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ











Click it and Unblock the Notifications