Get Updates
Get notified of breaking news, exclusive insights, and must-see stories!

ʼತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‌ ಮೈತ್ರಿʼ

ಬೆಂಗಳೂರು, ಜೂನ್‌ 22: ಲೋಕಸಭೆ ಚುನಾವಣೆಯಲ್ಲಿ ಮಾಡಿಕೊಂಡ ಮೈತ್ರಿ ಮುಂದುವರಿಯಬೇಕು. ಮೈಸೂರು ಪಾಲಿಕೆ ಚುನಾವಣೆ ಇರಬಹುದು, ಮುಂಬರುವ ಯಾವುದೇ ಚುನಾವಣೆ ಹೊಂದಾಣಿಕೆ ಇರಬಹುದು. ಎರಡೂ ಪಕ್ಷಗಳು ಹೊಂದಾಣಿಕೆಯಿಂದ ಹೋಗಬೇಕಿದೆ. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗೂ ನಾವು ಸಜ್ಜಾಗಬೇಕಿದೆ ಎಂದು ಸಂಸದ ಹೆಚ್‌ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಒಡಕು ತರಬಾರದು. ನಮ್ಮಲ್ಲಿ ಯಾರೂ ಹೆಚ್ಚು ಕಡಿಮೆ ಎನ್ನುವ ಪ್ರಶ್ನೆ ಇಲ್ಲ. ಒಂದು ಕುಟುಂಬದ ಅಣ್ಣ ತಮ್ಮಂದಿರ ರೀತಿ ಹೋಗಬೇಕು. ಯಾರೇ ಒಗ್ಗಟ್ಟು ಮುರಿಯಲು ಮುಂದಾದರೆ ಅದನ್ನು ಕಿವಿ ಮೇಲೆ ಹಾಕಿಕೊಳ್ಳಬಾರದು ಎಂದು ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

Our Alliance With BJP Will Continue MP HD Kumaraswamy

ಜೆಡಿಎಸ್ ಬಿಜೆಪಿಯದ್ದು ಸಹಜ ಮೈತ್ರಿ. 2018ರಲ್ಲೂ ನನಗೆ ಬಿಜೆಪಿ ಜತೆ ಸೇರಿಯೇ ಸರ್ಕಾರ ಮಾಡುವ ಆಸಕ್ತಿ ಇತ್ತು. ಈಗ ಮುಕ್ತವಾಗಿ ಎಲ್ಲಾ ವಿಷಯಗಳನ್ನು ಚರ್ಚೆ ಮಾಡುವುದಿಲ್ಲ. ಅದು ಮುಗಿದು ಹೋಗಿರುವ ಪ್ರಸಂಗ. ಆಗಿರುವ ಎಲ್ಲಾ ಕಹಿ ಘಟನೆಗಳನ್ನು ಮರೆಯಬೇಕಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಯಡಿಯೂರಪ್ಪ ಅವರು ಎಲ್ಲೆಡೆ ಓಡಾಟ ಮಾಡಿದ್ದಾರೆ. 82ರ ವಯಸ್ಸಿನಲ್ಲಿಯೂ ಅಭ್ಯರ್ಥಿಗಳ ಗೆಲುವಿಗೆ ಓಡಾಡಿದ್ದಾರೆ. ಅವರಿಗೆ ನಾನು ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಆಸೆಯೇ ದುಃಖಕ್ಕೆ ಮೂಲ ಎಂದು ಗೌತಮ ಬುದ್ಧ ಹೇಳಿದ್ದರು. ಸಿದ್ದರಾಮಯ್ಯ ಅವರು ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂದು ಹೇಳುತ್ತಿದ್ದಾರೆ ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಹಾರ ನಡೆಸಿದರು.

ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಅದಕ್ಕಾಗಿ ಜನರನ್ನು ದೋಚುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಬೆಳೆಗಳ ಏರಿಕೆಗೆ ಗ್ಯಾರಂಟಿಗಳೇ ಕಾರಣ ಎಂದು ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ದೂರಿದರು.

ಈ ನಾಡಿಗೆ ಕುಮಾರಸ್ವಾಮಿ ಪರಿಚಯ ಆಗಿದ್ದು 2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚನೆ ಮಾಡಿದಾಗ. ನನಗಿಂತ ಹಿರಿಯರಾದ ಯಡಿಯೂರಪ್ಪ ಅವರು ಸಹಕಾರ ನೀಡಿದರು. ಮುಕ್ತವಾಗಿ ಅಧಿಕಾರ ನಡೆಸಲು ಬಿಟ್ಟರು.

ಆದರೆ, ಕೆಲವರ ಕುತಂತ್ರದಿಂದ ಅಧಿಕಾರ ಹಸ್ತಾಂತರ ಆಗಲಿಲ್ಲ. ಅದು ನನ್ನ ತಪ್ಪಲ್ಲ‌. ನಾವು ಆವತ್ತು ಅಧಿಕಾರದಲ್ಲಿ ಮುಂದುವರಿದಿದ್ದರೆ ಇವತ್ತು ಕಾಂಗ್ರೆಸ್ ಇರುತ್ತಿರಲಿಲ್ಲ. ಸಂಪೂರ್ಣ ನೆಲಕಚ್ಚಿ ಹೋಗುತ್ತಿತ್ತು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆಯಂತೆ HMT ಪುನಶ್ಚೇತನ

ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಕೈಗಾರಿಕೆ ಅಭಿವೃದ್ಧಿ ಬಗ್ಗೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಅವರ ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಹೆಚ್ ಎಂಟಿ ಕಂಪನಿಯನ್ನು ಪುನರುಜ್ಜೀವನಗೊಳಿಸಬಹುದು. ಪ್ರಧಾನಿಗಳ ಆಲೋಚನೆಯಂತೆ ಚಿಂತಿಸಿ ಕಂಪನಿಯ ಚೇತರಿಕೆಗೆ ಮುಂದಾಗಿ. ಅದಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತದೆ ಎಂದು ಸಚಿವರು ಹೇಳಿದರು.

ನೀವು ರಕ್ಷಣಾ ಇಲಾಖೆಗೆ, ಬಾಹ್ಯಾಕಾಶ ಯೋಜನೆಗಳಿಗೆ ಪರಿಕರಗಳನ್ನು ತಯಾರಿಸಿ ಕೊಡುತ್ತೀರಿ. ದೇಶದ ಉದ್ದಗಲಕ್ಕೂ ಕಂಪನಿಯ ಉತ್ಪಾದನಾ ಘಟಕಗಳು ಇವೆ. ಹೀಗಾಗಿ ಕಂಪನಿಯ ಕ್ಷಮತೆಯನ್ನು ಹೆಚ್ಚಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಕಂಪನಿಯು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಇದೇ ವೇಳೆ ಕಂಪನಿಯ ಅಧ್ಯಕ್ಷ ರಾಜೇಶ್ ಕೊಹ್ಲಿ, ನಷ್ಟದ ಜತೆಗೆ ಆರ್ಥಿಕ ಬಿಕ್ಕಟ್ಟು, ನ್ಯಾಯಾಲಯಗಳಲ್ಲಿ ಮೊಕದ್ದಮೆ ಇತ್ಯಾದಿ ಸಂಕಷ್ಟಗಳನ್ನು ಎದುರಿಸುತ್ತಿದೆ. ಇದಕ್ಕೆ ಕೇಂದ್ರದ ನೆರವು ಬೇಕಿದೆ ಎಂದು ಸಚಿವರಿಗೆ ಮನವಿ ಮಾಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+