ಸರ್ಕಾರ ಕೆಡವಲು ವಿಪಕ್ಷಗಳು ಪ್ಲಾನ್: ಡಿ ಕೆ ಶಿವಕುಮಾರ್ ರಾಜಕೀಯ ವಿರೋಧಿಗಳಿಗೆ ಕೊಟ್ಟ ಉತ್ತರವೇನು?
ಹೊಸಕೋಟೆ, ಸೆಪ್ಟೆಂಬರ್ 23: ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂಬುದಕ್ಕೆ ನಿಮ್ಮ ಕಣ್ಣುಗಳೇ ಸಾಕ್ಷಿ. ಗ್ಯಾರಂಟಿ ಯೋಜನೆಗ ಮೂಲಕ ನಾಡಿನ ಪ್ರತಿಯೊಂದು ಕುಟುಂಬವು ಸಮೃದ್ಧಿಯಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ಬಳಿಕ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗ ಮೂಲಕ ನಾಡಿನ ಪ್ರತಿಯೊಂದು ಕುಟುಂಬವು ಸಮೃದ್ಧಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಕಾಂಗ್ರೆಸ್ ಸರ್ಕಾರ ಚಿರಋಣಿಯಾಗಿರುತ್ತದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಮ್ಮ ಕೈ ಹಿಡಿದಿದ್ದೀರಿ. ಇದಕ್ಕಾಗಿ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇವೆ ಎಂದರು.

ಯಾವುದೇ ಕಾರಣಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಂದೆ 10 ವರ್ಷಗಳ ಕಾಲ ನಾವೇ ಬಾಗಿನ ಅರ್ಪಿಸುತ್ತೇವೆ. ಈ ವರ್ಷ ಉತ್ತಮ ಮಳೆ ಬಂದು ನಾನು ಮತ್ತು ಸಿದ್ದರಾಮಯ್ಯ ಅವರು ಪ್ರಮುಖ ನಾಲ್ಕು ಅಣೆಕಟ್ಟುಗಳಿಗೆ ಬಾಗಿನ ಅರ್ಪಿಸಿದ್ದೇವೆ. ನಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ ಎಂದು ಹೇಳಿದರು.
ಜನ ಬದಲಾವಣೆ ಆಗಬಹುದು, ಜಗತ್ತು ಬದಲಾವಣೆ ಆಗಬಹುದು ಆದರೆ ನಾವು ಮಾಡಿರುವ ಸಾಧನೆಗಳು ಎಂದಿಗೂ ಶಾಶ್ವತ. ಆಣೆಕಟ್ಟು ಉಳಿಸಲು ಹಗಲು, ರಾತ್ರಿ ಕಷ್ಟಪಟ್ಟ ಕಾರ್ಮಿಕರ ಶ್ರಮದಲ್ಲಿ ನಾವು ಯಶಸ್ಸನ್ನು ಕಾಣುತ್ತಿದ್ದೇವೆ ಎಂದು ಹೇಳಿದರು.
ನಾವು ಉದ್ಘಾಟನೆ ವೇಳೆ ಗಿಡಕ್ಕೆ ನೀರು ಹಾಕಿದೆವು. ಇದು ರಾಜ್ಯದ ಜನರ ಹಾಗೂ ರೈತರ ಬದುಕನ್ನು ಹಸನು ಮಾಡಲು ಹಾಕಿದ ನೀರು. ನಮ್ಮ ಕರ್ನಾಟಕದ ಪಾಲಿನ ನೀರನ್ನು ಉಳಿಸಿಕೊಳ್ಳಲು ನಾವು ಹೋರಾಡುತ್ತೇವೆ. ನವಲಿಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಾವು ಮುಂದಾಗುತ್ತೇವೆ. ಈ ಅಣೆಕಟ್ಟು ನಿರ್ಮಾಣಕ್ಕೆ ಈಗಾಗಲೇ ಡಿಪಿಆರ್ ತಯಾರಿಸಿದ್ದೇವೆ. ಸುಮಾರು ಹದಿನೈದು ಸಾವಿರ ಎಕರೆ ಭೂಮಿ ಇದಕ್ಕೆ ಬೇಕಾಗಿದೆ. ಈ ಕುರಿತು ನೆರೆಯ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆಎಂದು ಹೇಳಿದರು.
ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿಕೊಂಡ ಕಾರಣಕ್ಕೆ ಸುಮಾರು 33 ಟಿಎಂಸಿಯಷ್ಟು ನಮ್ಮ ಪಾಲಿನ ನೀರು ಸಿಗುತ್ತಿಲ್ಲ. ಇದಕ್ಕೆಲ್ಲ ಪರಿಹಾರ ನವಲಿ ಅಣೆಕಟ್ಟು. ನಿರ್ಮಾಣಕ್ಕೆ ನೆರೆಯ ರಾಜ್ಯಗಳ ಸಹಕಾರವನ್ನು ಕೇಳಲಾಗುವುದು. ಗಂಗಾ ಸ್ನಾನ, ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾ ನೀರು ಕುಡಿಯಲು ಅಷ್ಟು ಪವಿತ್ರವಾದುದು. ಶೃಂಗೇರಿಯ ಶಾರದಾಂಬೆಯ ಪಾದ ಮುಟ್ಟಿ ಹರಿಯು ತುಂಗಾ ನದಿ ನಮ್ಮನ್ನು ಕಾಪಾಡಿದ್ದಾಳೆ. ಹಂಪಿಯ ವಿರೂಪಾಕ್ಷನ ಆಶೀರ್ವಾದದಿಂದ ಪ್ರಕೃತಿ ಮಾತೆಯ ಆಶೀರ್ವಾದದಿಂದ ಮತ್ತೆ ಅಣೆಕಟ್ಟು ತುಂಬಿದೆ ಎಂದರು.
ತುಂಗಭದ್ರಾ ಅಣೆಕಟ್ಟು ಕಾಂಗ್ರೆಸ್ ಪಕ್ಷದ ಕೊಡುಗೆ. ಈ ಇತಿಹಾಸವನ್ನು ಯಾರಿಂದಲೂ ತಿರುಚಲು ಸಾಧ್ಯವಿಲ್ಲ. ಆಧುನಿಕ ಭಾರತದ ದೇವಾಲಯಗಳು ಆಣೆಕಟ್ಟುಗಳು ಎಂದು ನೆಹರು ಅವರು ಹೇಳಿದ್ದರು. ರೈತರನ್ನು ಕಾಪಾಡುವುದೇ ಅಣೆಕಟ್ಟುಗಳು. ನಾನು ಈ ಹಿಂದೆ ತುಂಗಾ ಆರತಿ ಆರಂಭ ಮಾಡಿದ್ದೆ. ಈಗ ಕಾವೇರಿ ಆರತಿಗೆ ತೀರ್ಮಾನ ಮಾಡಿದ್ದೇವೆ. ಅದಕ್ಕೆ ಒಂದು ತಂಡವನ್ನು ರಚನೆ ಮಾಡಲಾಗಿದೆ. ಈಗಾಗಲೇ ಹರಿದ್ವಾರಾ, ಕಾಶಿ ಸೇರಿದಂತೆ ಇತರೇ ಕಡೆ ಅಧ್ಯಯನ ಮಾಡುತ್ತಿದೆ ಎಂದು ಹೇಳಿದರು.
ಗೇಟ್ ಕಿತ್ತು ಹೋದಾಗ ವಿರೋಧ ಪಕ್ಷಗಳು ಟೀಕೆ ಮಾಡಿದವು. ನಾನು ಹಾಗೂ ಸಿದ್ದರಾಮಯ್ಯ ಅವರು ವಿರೋಧಿಗಳ ಟೀಕೆಗಳಿಗೆ ಎದೆಗುಂದಲಿಲ್ಲ. ಸರ್ಕಾರದ ಸಚಿವರ ಹಾಗೂ ಶಾಸಕರ ಬೆಂಬಲದಿಂದ, ನಾವು ಮಾಡಿದ ಕೆಲಸದಿಂದ ಟೀಕೆಗಳು ಸತ್ತಿವೆ, ಕೆಲಸಗಳು ಉಳಿದಿವೆ ಎಂದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications