ಆರ್ಥಿಕ ಸ್ಥಿತಿಯಲ್ಲಿ 2047ಕ್ಕೆ ನಮ್ಮ ದೇಶ ವಿಶ್ವದಲ್ಲಿಯೇ ಮೊದಲು: ರಾಜನಾಥ್ ಸಿಂಗ್
ಬೆಂಗಳೂರು, ಜನವರಿ 16: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬೆಳವಣಿಗೆ ದಿನೇ ದಿನೇ ಬೆಳೆಯುತ್ತಾ ಸಾಗುತ್ತಿದೆ. 2027ಕ್ಕೆ ನಮ್ಮ ದೇಶ ಆರ್ಥಿಕ ಸ್ಥಿತಿಯಲ್ಲಿ ವಿಶ್ವದಲ್ಲಿ 3ನೇ ಸ್ಥಾನಕ್ಕೆ ಬರಲಿದ್ದು, 2047 ಕ್ಕೆ ವಿಶ್ವದಲ್ಲಿಯೇ ಮೊದಲ ಸ್ಥಾನ ಗಳಿಸುವುದು ಖಚಿತ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ತಿಳಿಸಿದರು.
ಭಾನುವಾರ ಎ.ಎಸ್.ಸಿ ಸೆಂಟರ್ ದಕ್ಷಿಣ ಇಲ್ಲಿ ಆಯೋಜಿಸಲಾದ 75ನೇ ಸೇನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ರಕ್ಷಣಾ ಸಚಿವರು, ಜನವರಿ 15, 1949 ರಂದು, ಭಾರತೀಯ ಸೇನೆಯ ಆಜ್ಞೆಯು ಬ್ರಿಟಿಷ್ ಜನರಲ್ ಫ್ರಾನ್ಸಿಸ್ ಬುತ್ಚೆರ್ ಅವರಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕರಿಯಪ್ಪ ಅವರ ಕೈಗೆ ಬಂದಿತು. ಇದರೊಂದಿಗೆ, ಬ್ರಿಟಿಷ್ ಪದವನ್ನು ಬ್ರಿಟಿಷ್ ಭಾರತೀಯ ಸೇನೆಯಿಂದ ಶಾಶ್ವತವಾಗಿ ತೆಗೆದುಹಾಕಲಾಯಿತು ಮತ್ತು ಅದನ್ನು ಭಾರತೀಯ ಸೇನೆ ಎಂದು ಕರೆಯಲಾಯಿತು ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕರಿಯಪ್ಪ ಅವರು ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮುಖ್ಯಸ್ಥರಾದರು. ಅಂದಿನಿಂದ, ಪ್ರತಿ ವರ್ಷ ಜನವರಿ 15 ರಂದು ಸೇನಾ ದಿನವೆಂದು ಆಚರಿಸಲಾಗುತ್ತದೆ. ಭಾರತೀಯ ಸೇನೆಯನ್ನು ಸ್ವಾತಂತ್ರ್ಯದವರೆಗೂ ಬ್ರಿಟಿಷ್ ಭಾರತೀಯ ಸೇನೆ ಎಂದು ಕರೆಯಲಾಗುತ್ತಿತ್ತು. ಆದರೆ ಜನವರಿ 15, 1949 ರಂದು, ಭಾರತೀಯ ಸೇನೆಯು ತನ್ನ ಮೊದಲ ಭಾರತೀಯ ಕಮಾಂಡರ್ ಇನ್ ಚೀಫ್ ಅನ್ನು ಪಡೆದುಕೊಂಡಿತು.

ಇದೇ ಮೊದಲ ಬಾರಿಗೆ ಸೇನಾ ದಿನಾಚರಣೆಯನ್ನು ದೆಹಲಿಯಿಂದ ಹೊರಗೆ ಅಚಿದರೆ ಕರ್ನಾಟಕದ, ಬೆಂಗಳ್ರರಿನಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸದ ಅವರು, ಯುದ್ಧಸಾಮಗ್ರಿ ಮತ್ತು ಶಸ್ತ್ರಾಸ್ತ್ರಗಳ ವಿಷಯದಲ್ಲಿ ಭಾರತೀಯ ಸೇನೆಯು ವಿಶ್ವದಲ್ಲಿ ಉನ್ನತ ಸ್ಥಾನದಲ್ಲಿದೆ. ಭಾರತೀಯ ಸೇನೆಯು ನಿಖರ ಅಗ್ನಿ ಮತ್ತು ಪೃಥ್ವಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾಗೂ ಸ್ವದೇಶಿ ನಿರ್ಮಿತ ಯುದ್ದ ಸಲಕರಣೆಗಳನ್ನು ಹೊಂದಿರುವ ಹೆಲಿಕ್ಯಾಪ್ಟರ್ ಹೊಂದಿದ್ದು, ಇದು ಶಕ್ತಿಯುತವಾಗಿದೆ. ಭಾರತೀಯ ಸೈನ್ಯವು ತನ್ನ ಶತ್ರುಗಳ ದಾಳಿಗೆ ಮಾತ್ರ ಪ್ರತಿಕ್ರಿಯಿಸುವ ವಿಶ್ವದ ಏಕೈಕ ಸೈನ್ಯವಾಗಿದೆ. ಎರುರಾಳಿ ಸೈನ್ಯವನ್ನು ಒಡೆದುರಿಳಿಸುವ ಎಲ್ಲಾ ಶಕ್ತಿಯನ್ನು ನಮ್ಮ ಸೇನೆ ಹೊಂದಿದೆ ಎಂದು ತಿಳಿಸಿದರು.
ಭಾರತೀಯ ಸೇನೆಯ ಹೆಸರು ವಿಶ್ವದ ಅತ್ಯುನ್ನತ ಸ್ಥಳದಲ್ಲಿ ಸೇತುವೆಯನ್ನು ನಿರ್ಮಿಸಿದ ದಾಖಲೆಯನ್ನು ಸಹ ಹೊಂದಿದೆ. ಬದಲಾದ ದಿನಗಳಲ್ಲಿ ನಮ್ಮ ಸೇನೆಯು ಬದಲಾವಣೆಗಳನ್ನು ಅಳವಡಿಸಿಕೊಂಡು ತನ್ನ ಶಕ್ತಿ ಸಾವ್ಮಥ್ರ್ಯವನ್ನು ತೋರಿಸುತ್ತಾ ಬಂದಿದೆ. ಅನೇಕ ಸಮಯದಲ್ಲಿ ಯುದ್ದ ಮಾಡುವುದಲ್ಲದೇ ಸಹಾಯವನ್ನು ಸಹ ಮಾಡುತ್ತಾ ಬಂದಿದೆ ಎಂದು ಸೇನೆಯ ಶಕ್ತಿ ಸಾಮಥ್ರ್ಯವನ್ನು ಶ್ಲಾಘಿಸಿದರು.

ಉಕ್ರೇನ್ ಯುದ್ದ ಸಮಯದಲ್ಲಿ ನಮ್ಮ ದೇಶದ ಪ್ರಧಾನ ಮಂತ್ರಿಗಳು ಉಕ್ರೇನ್ ಅಧ್ಯಕ್ಷರು, ರಷ್ಯಾ ಅಧ್ಯಕ್ಷರು ಮತ್ತು ಅಮೇರಿಕಾ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿ ಸ್ವಲ್ಪ ಸಮಯದ ವರೆಗೆ ಯುದ್ದ ನಿಲ್ಲಿಸುವಲ್ಲಿ ಸಪಲರಾದರು ಇದು ಹೆಮ್ಮೆಯ ವಿಷಯವಾಗಿದೆ. ಸೇನೆಯು ಸಹ ಇಂದಿನ ದಿನಗಳನ್ನು ಯೋಚಿಸದೆ ನಾಳೆ, ನಾಡಿದ್ದು, ಇನ್ನು ಮುಂದಿನ ಇಪ್ಪತ್ತೈದು ವರ್ಷಗಳ ಬಗ್ಗೆ ಯೋಚಿಸಿ, ಹೊಸ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡು, ಹೊಸ ಹೊಸ ಅವಿಕ್ಷಾರಗಳನ್ನು ಮಾಡಿ, ಕೆಲಸ ನಿರ್ವಹಿಸಬೇಕು. ಸಮಸ್ತ ದೇಶದ, ನಾಡಿನ ಜನರ ಯೋಗ ಕ್ಷೇಮ ರಕ್ಷಣೆಗೆ ಒತ್ತುಕೊಡುವುದರ ಜೊತೆಗೆ ದೇಶವನ್ನು ರಕ್ಷಿಸಬೇಕು, ಇದಕ್ಕಾಗಿ ನಾವು ಎಲ್ಲಾ ಸಹಕಾರಗಳನ್ನು ನೀಡಲು ಸಿದ್ದರಿದ್ದೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಲೆಪ್ಟಿನೆಂಟ್ ಜನರಲ್ ಮನೋಜ್ ಕುಮಾರ್ ಪಾಂಡೆ, ಡಿಪೆನ್ಸ್ ಸ್ಟಾಪ್ ಜನರಲ್ ಅನೀಲ್ ಚೌಹ್ಹಾಣ್, ಮೇಜರ್ ಜನರಲ್ ಎಂ.ಕೆ. ಖಾನ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕರ್ನಾಟಕ ಪೊಲೀಸ ಮಹಾ ನಿರ್ದೇಶಕ ಪ್ರವೀಣ್ ಸೂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು, ಸರ್ಕಾರದ ಹಿರಿಯ ಅಧಿಕಾರಿಗಳು, ಯೋಧರು, ನಿವೃತ್ತ ಯೋಧರು ಉಪಸ್ಥಿತರಿದ್ದು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications